ಉಡುಪಿ ಘಟನೆ | ಟ್ವಿಟರ್‌ನಲ್ಲಿ ಯೋಗಿ ಆದಿತ್ಯನಾಥ್ ಜೊತೆಗಿದ್ದ ಫೋಟೋ ‘ಡಿಲೀಟ್’ ಮಾಡಿದ ರಶ್ಮಿ ಸಮಂತ್!

Date:

Advertisements

ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ಆಯಾಮ ನೀಡಿದ್ದ ಸ್ವಯಂ ಘೋಷಿತ ಹಿಂದೂ ಹೋರಾಟಗಾರ್ತಿ ರಶ್ಮಿ ಸಮಂತ್, ತನ್ನ ಟ್ವಿಟರ್‌ನಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜೊತೆಗಿದ್ದ ಫೋಟೋವನ್ನು ಡಿಲೀಟ್ ಮಾಡಿದ್ದಾರೆ.

ಘಟನೆಯನ್ನು ಕಳೆದ ಜು.24ರಂದು ಟ್ವೀಟ್ ಮಾಡಿದ್ದ ಸಂದರ್ಭದಲ್ಲಿ ಉಡುಪಿ ಮೂಲದ ರಶ್ಮಿ ಸಮಂತ್ ಅವರ ಟ್ವಿಟರ್‌ನ ಪ್ರೊಫೈಲ್‌ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಗಿದ್ದ ಫೋಟೋ ಕೂಡ ಇತ್ತು. ಘಟನೆಗೆ ಹಿಂದೂ-ಮುಸ್ಲಿಂ ಆಯಾಮವನ್ನು ಕೊಟ್ಟಿದ್ದೂ ಅಲ್ಲದೇ, ವಿಡಿಯೋವನ್ನು ಮುಸಲ್ಮಾನರ ವಾಟ್ಸಾಪ್ ಗ್ರೂಪ್‌ಗಳಿಗೆ ಹರಿಬಿಡಲಾಗಿದೆ ಎಂದು ಹಲವು ದಾರಿ ತಪ್ಪಿಸುವ ಸುಳ್ಳು ಮಾಹಿತಿಯನ್ನೂ ಹಂಚಿಕೊಂಡಿದ್ದರು.

ಇದನ್ನು ಓದಿದ್ದೀರಾ? ಉಡುಪಿ ವಿಡಿಯೋ ಪ್ರಕರಣಕ್ಕೆ ಕೋಮು ಆಯಾಮ ಬೆರೆಸಿದ ರಶ್ಮಿ ಸಮಂತ್ ಯಾರು ಗೊತ್ತೆ?

Advertisements

ರಶ್ಮಿಯವರ ಟ್ವೀಟ್ ಅನ್ನು ಗಮನಿಸಿ ಬಿಜೆಪಿ ಮತ್ತು ಸಂಘಪರಿವಾರದವರು ಮಾತನಾಡತೊಡಗಿದರು. ಬಿಜೆಪಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ರಶ್ಮಿಯವರ ಮನೆಗೆ ಪೊಲೀಸರು ಹೋಗಿದ್ದು ಯಾಕೆ ಎಂಬ ಪ್ರಶ್ನೆಯನ್ನೂ ಕೂಡ ಎತ್ತಿದ್ದರು. ಪ್ರಕರಣದ ಬಗ್ಗೆ ಮಾಧ್ಯಮಗಳು ಕೂಡ ಮಾತನಾಡಿದಾಗ, ಅದು ದೇಶಾದ್ಯಂತ ಸುದ್ದಿಯಾಗತೊಡಗಿತು.

WhatsApp Image 2023 07 27 at 4.38.50 PM

ಈ ಎಲ್ಲ ಬೆಳವಣಿಗೆಗಳ ನಡುವೆಯೇ ರಶ್ಮಿ ಸಮಂತ್ ಅವರ ಟ್ವಿಟರ್‌ನ ಪ್ರೊಫೈಲ್‌ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಗಿದ್ದ ಫೋಟೋ ಮಾಯವಾಗಿದೆ. ಆದರೆ ಈ ಫೋಟೋ ಗೂಗಲ್‌ನಲ್ಲಿ ಇನ್ನೂ ಕೂಡ ಲಭ್ಯವಿದೆ.

‘ಯಾಕೆ ಮೇಡಂ ಫೋಟೋ ಡಿಲೀಟ್ ಮಾಡಿದ್ದೀರಿ’ ಎಂದು ಹಲವು ಮಂದಿ ಪ್ರಶ್ನಿಸಿದ್ದರೂ, ಆಕೆಯಿಂದ ಇನ್ನೂ ಉತ್ತರ ಬಂದಿಲ್ಲ. ಆದರೆ ಉಡುಪಿ ಪ್ರಕರಣಕ್ಕೆ ಸಂಬಂಧಿಸಿ ‘ಗೋದಿ ಮೀಡಿಯಾ’ಗಳಲ್ಲಿ ಸಂದರ್ಶನ ಮತ್ತು ತಮ್ಮ ಅನುಮಾನಗಳನ್ನು ತಿಳಿಸುವಲ್ಲಿಯೇ ನಿರತರಾಗಿದ್ದಾರೆ.

ಇಷ್ಟೆಲ್ಲ ಬೆಳವಣಿಗೆಗಳಾಗಿಯೂ ರಶ್ಮಿ ಸಮಂತ್ ಅವರು ಸುಳ್ಳು ಸುದ್ದಿ ಹರಡಿರುವುದು ಸ್ಪಷ್ಟವಾಗಿದ್ದರೂ ಅವರ ಮೇಲೆ ಯಾಕೆ ದೂರು ದಾಖಲಾಗಿಲ್ಲ ಎಂಬ ಪ್ರಶ್ನೆಯೂ ಸಾರ್ವಜನಿಕರಿಂದ ಕೇಳಿಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X