ಮೋದಿ ಪ್ರಗತಿ ಶ್ಲಾಘಿಸಿದ ರಶ್ಮಿಕಾ: ಮಣಿಪುರ ಭೇಟಿ ಯಾವಾಗ, ಐಟಿ ಭಯವೇ ಎಂದ ನೆಟ್ಟಿಗರು!

Date:

Advertisements

ಕಳೆದ 10 ವರ್ಷಗಳಲ್ಲಿ ದೇಶದಲ್ಲಾಗಿರುವ ಪ್ರಗತಿಯನ್ನು, ವಿಶೇಷವಾಗಿ ಮೂಲಸೌಕರ್ಯ ಯೋಜನೆಗಳಲ್ಲಿ ಆಗಿರುವ ಬದಲಾವಣೆಯನ್ನು ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಶ್ಲಾಘಿಸಿದ್ದಾರೆ.

ಇದರ ವಿಡಿಯೋವನ್ನು ‘ಪುಷ್ಪಾ’ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ತನ್ನ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಮಣಿಪುರ, ಲಡಾಖ್‌ಗೆ ಭೇಟಿ ಯಾವಾಗ ಎಂದು ಕೆಲವು ನೆಟ್ಟಿಗರು ಪ್ರಶ್ನಿಸಿದರೆ, ಇನ್ನು ಕೆಲವರು ಐಟಿ ದಾಳಿಯ ಉಲ್ಲೇಖ ಮಾಡಿದ್ದಾರೆ.

ಈ ವರ್ಷದ ಜನವರಿಯಲ್ಲಿ ಅಧಿಕೃತವಾಗಿ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವ ಶೇವಾ ಅಟಲ್ ಸೇತು ಎಂದು ಹೆಸರಿಸಲಾದ 22 ಕಿಮೀ ಉದ್ದದ ಸಮುದ್ರ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಈ ಸೇತುವೆಯ ನಿರ್ಮಾಣವನ್ನು ನಟಿ ಶ್ಲಾಘಿಸಿದ್ದಾರೆ. ಹಿಂದಿನ ಎರಡು ಗಂಟೆಗಳ ಪ್ರಯಾಣವನ್ನು ಕೇವಲ 20 ನಿಮಿಷಗಳಿಗೆ ಕಡಿತಗೊಳಿಸುತ್ತದೆ ಎಂದು ಹೇಳಿದ್ದಾರೆ.

Advertisements

ನೆಟ್ಟಿಗರು ಪ್ರತಿಕ್ರಿಯಿಸಿದ್ದು ಹೇಗೆ?

ರಶ್ಮಿಕಾ ಪೋಸ್ಟ್ ಮಾಡಿರುವ ವಿಡಿಯೋಗೆ 4.6 ಮಿಲಿಯನ್ ವೀವ್ಸ್ ಲಭಿಸಿದ್ದು, 3.9 ಸಾವಿರ ಕಾಮೆಂಟ್‌ಗಳನ್ನು ಮಾಡಲಾಗಿದೆ. ಸಂಘಿ ಪ್ರಿನ್ಸ್ ಎಂಬ ಎಕ್ಸ್‌ ಬಳಕೆದಾರರೊಬ್ಬರು ‘ನ್ಯಾಷನಲ್ ಕ್ರಷ್ ಈಗ ನ್ಯಾಷನಲಿಸ್ಟ್ ಆಗುತ್ತಿದ್ದಾರೆ’ ಎಂದು ಹೇಳಿದ್ದರೆ, ಹಲವಾರು ನೆಟ್ಟಿಗರು ನಟಿ ರಶ್ಮಿಕಾರ ಮಣಿಪುರ ಭೇಟಿ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಇನ್ನು ಇಡಿ ದಾಳಿಯ ಬಗ್ಗೆಯೂ ನೆಟ್ಟಿಗರು ಪ್ರಸ್ತಾಪಿಸಿದ್ದಾರೆ.

ರಶ್ಮಿಕಾ

“ರಶ್ಮಿಕಾ ನಿಮಗೆ ನಾಚಿಕೆಯಾಗಬೇಕು. ಈ ಅಟಲ್‌ಸೇತು ನಮಗೆ ಉಚಿತವಾಗಿ ನಿರ್ಮಿಸಿದ್ದೇನಲ್ಲ. ನಾವು 19 ಲಕ್ಷ ರೂಪಾಯಿ ಕಾರು ಖರೀದಿಸಿದ ಬಳಿಕ ಆದಾಯ ತೆರಿಗೆಯನ್ನು ಪಾವತಿಸಿದ್ದೇವೆ. ಅದರಲ್ಲಿ 9 ಲಕ್ಷ ರೂಪಾಯಿ ತೆರಿಗೆಯೇ ಆಗಿದೆ. ಪೆಟ್ರೋಲ್ ಮೇಲೆ ಶೇಕಡ 200ರಷ್ಟು ತೆರಿಗೆಯನ್ನು ನಾವು ಪಾವತಿಸುತ್ತೇವೆ. ಸರ್ಕಾರ 17,000 ಕೋಟಿ ರೂಪಾಯಿ ಸಾಲ ಪಡೆದ ಕಾರಣ ಅದನ್ನು ಮರುಪಾವತಿ ಮಾಡಲು ನಾವು 250 ರೂಪಾಯಿ ಟೋಲ್ ಶುಲ್ಕವನ್ನು ಕೂಡಾ ಪಾವತಿ ಮಾಡಬೇಕಾಗುತ್ತದೆ” ಎಂದು ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ರಶ್ಮಿಕಾ

ಇನ್ನು ರಶ್ಮಿಕಾ ಮಂದಣ್ಣರ ನಿವಾಸದ ಮೇಲೆ ಐಟಿ ದಾಳಿಯ ಸುದ್ದಿಯ ಸ್ಕ್ರೀನ್‌ಶಾಟ್‌ ಪೋಸ್ಟ್‌ ಮಾಡಿದ ನೆಟ್ಟಿಗರೊಬ್ಬರು, “ದಕ್ಷಿಣ ಭಾರತದಿಂದ ಉತ್ತರ ಭಾರತ, ಇಡಿ ದಾಳಿಯ ಆತಂಕ” ಎಂದು ಗೇಲಿ ಮಾಡಿದ್ದಾರೆ. ಇನ್ನು ಕೆಲವರು ಈ ಜಾಹೀರಾತಿಗೆ ಎಷ್ಟು ಸಂಭಾವನೆ ಲಭಿಸಿದೆ ಎಂದು ಪ್ರಶ್ನಿಸಿದ್ದಾರೆ.

2020ರ ಜನವರಿಯಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಶ್ಮಿಕಾ ಮಂದಣ್ಣ ಕುಟುಂಬಕ್ಕೆ ಸೇರಿದ ಅಘೋಷಿತ ಆದಾಯ 3.94 ಕೋಟಿ ರೂಪಾಯಿಗೆ ಸಂಬಂಧಿಸಿದಂತೆ ಈ ದಾಳಿಯನ್ನು ನಡೆಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X