ಕೆಇಎ ಪರೀಕ್ಷೆ ಅಕ್ರಮದ ಕಿಂಗ್ ಪಿನ್​ ಆರ್ ​ಡಿ ಪಾಟೀಲ್ ಎಂಟು ದಿನ ಸಿಐಡಿ ಕಸ್ಟಡಿಗೆ

Date:

Advertisements
  • ಕಲಬುರಗಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿ ಆದೇಶ 
  • ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಸಿಐಡಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಬಂಧನವಾಗಿರುವ ಪ್ರಕರಣದ ಕಿಂಗ್ ಪಿನ್​ ಆರ್ ​ಡಿ ಪಾಟೀಲ್​ನನ್ನು ಎಂಟು ದಿನ ಸಿಐಡಿ ಕಸ್ಟಡಿಗೆ ನೀಡಿ ಕಲಬುರಗಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರ್‌ ಡಿ ಪಾಟೀಲನ ನ್ಯಾಯಾಂಗ ಬಂಧನ ಅವಧಿ ಬುಧವಾರ ಮುಗಿದಿದ್ದು, ತಮ್ಮ ವಶಕ್ಕೆ ನೀಡುವಂತೆ ಸಿಐಡಿ, ಕಲಬುರಗಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಆರೋಪಿ ಆರ್​ಡಿ ಪಾಟೀಲ್​ನನ್ನು ಎಂಟು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ.

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ದಾಖಲಾಗಿರುವ ಪರೀಕ್ಷೆ ಅಕ್ರಮದ ಕೇಸ್​ಗಳನ್ನು ಪೊಲೀಸ್ ತನಿಖಾಧಿಕಾರಿಗಳು ಈಗಾಗಲೇ ಪ್ರಕರಣ ಫೈಲ್‌ ಗಳನ್ನು ಸಿಐಡಿ ತನಿಖಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ‌. ಕೆಇಎ ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣ ಪೊಲೀಸರಿಂದ ಹಸ್ತಾಂತರ ಆಗುತ್ತಿದ್ದಂತೆಯೇ ಸಿಐಡಿ ಬೇಟೆ ಶುರು ಮಾಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಶವಾದಿ ರಾಜಕಾರಣ- ಬಿಜೆಪಿ ಎರಡೆಳೆ ನಾಲಗೆಗೆ ಇನ್ನೆಷ್ಟು ದೊಡ್ಡ ಸಾಕ್ಷಿ ಬೇಕು?

ಸಿಐಡಿ ಡಿವೈಎಸ್‌ಪಿ ತನ್ವೀರ್ ಮತ್ತು ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ವಶಕ್ಕೆ ಪಡೆದಿದೆ. ಪ್ರಮುಖ ಆರೋಪಿ ಆರ್‌ ಡಿ ಪಾಟೀಲ್​ ಸೂಚನೆಯಂತೆ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿರುವ ಆರೋಪದಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕಲಬುರಗಿ ಜಿಲ್ಲೆಯಲ್ಲಿ ಮೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ದಾಖಲಾದ ಐದು ಪ್ರಕರಣ ಸೇರಿ ಒಟ್ಟು ಎಂಟು ಪ್ರಕರಣಗಳ ದಾಖಲೆಗಳು ಸಿಐಡಿ ಕೈಗೆ ತಲುಪಿದ್ದು, ಸಿಐಡಿ ತನಿಖಾಧಿಕಾರಿಗಳು ಕೇಸ್ ಸ್ಟಡಿ ಶುರು ಮಾಡಿದ್ದಾರೆ. ಖುದ್ದು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ತನಿಖಾಧಿಕಾರಿ ಡಿವೈಎಸ್ ಪಿ ತನ್ವೀರ್ ಒಳಗೊಂಡ ಸಿಐಡಿ ತನಿಖಾ ತಂಡ ಪರೀಕ್ಷೆ ಅಕ್ರಮದ ಜಾಡು ಹಿಡಿದು ಭೇದಿಸಲು ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X