ಕೃಷಿ ಕಾನೂನುಗಳ ಮರು ಜಾರಿ ಹೇಳಿಕೆ; ಬಿಜೆಪಿ ಸಂಸದೆ ಕಂಗನಾ ಉಚ್ಛಾಟನೆಗೆ ಕಾಂಗ್ರೆಸ್‌ ಆಗ್ರಹ

Date:

Advertisements

2021ರಲ್ಲಿ ರದ್ದಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಮರಳಿ ಜಾರಿಗೊಳಿಸಬೇಕೆಂದು ಹೇಳಿರುವ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ ಅವರನ್ನು ಬಿಜೆಪಿ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ. ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಣಾವತ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ರದ್ದಾದ ಕೃಷಿ ಕಾನೂನುಗಳನ್ನು ಮರಳಿ ತರುವ ಯಾವುದೇ ಪ್ರಯತ್ನಗಳಿಗೆ ಕಾಂಗ್ರೆಸ್‌ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ನಾಚನ್ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ನಡೆದ ಸ್ಥಳೀಯ ಜಾತ್ರೆಯಲ್ಲಿ ಕಂಗನಾ ಭಾವಹಿಸಿ ಮಾತನಾಡಿದ್ದಾರೆ. “ಕಂಗನಾ ಹೇಳಿಕೆ ವಿವಾದಕ್ಕೆ ಸಿಲುಕಬಹುದು ಎಂದು ನನಗೆ ತಿಳಿದಿದೆ. ಮೂರು ಕೃಷಿ ಕಾನೂನುಗಳನ್ನು ಮರಳಿ ತರಬೇಕು. ಆ ಕಾನೂನುಗಳು ರೈತರ ಕಲ್ಯಾಣ-ಆಧಾರಿತ ಕಾನೂನುಗಳೆಂದು ನಾನು ನಂಬುತ್ತೇನೆ. ರೈತರು ಈ ಕಾನೂನುಗಳ ಜಾರಿಗೆ ಒತ್ತಾಯಿಸಬೇಕು” ಎಂದು ಹೇಳಿದ್ದಾರೆ.

Advertisements

ಕಂಗನಾ ಹೇಳಿಕೆ ಖಂಡಿಸಿ ಬಿಜೆಪಿಯನ್ನು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ. “ಕಂಗನಾ ಅವರು ಕೃಷಿ ಕಾನೂನುಗಳನ್ನು ಮರಳಿ ತರಬೇಕೆಂದು ಪ್ರತಿಪಾದಿಸಿದ್ದಾರೆ. ಒಂದು ವರ್ಷದ ಸುದೀರ್ಘ ರೈತ ಹೋರಾಟದ ವೇಳೆ, 750ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದರೂ ಬಿಜೆಪಿ ರೈತ ವಿರೋಧಿ ನಿಲುವು ಅನುಸರಿಸುತ್ತಿದೆ. 750 ರೈತರು ಹುತಾತ್ಮರಾದ ನಂತರವೂ ಬಿಜೆಪಿ ಮತ್ತು ಮೋದಿ ಸರ್ಕಾರ ಪಾಠ ಕಲಿತಿಲ್ಲ. ಅವರು ರೈತ ವಿರೋಧಿ ಕರಾಳ ಕಾನೂನುಗಳ ಮರು-ಅನುಷ್ಠಾನಕ್ಕೆ ಯತ್ನಿಸುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ಮೃತ ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ಸೇರಿದಂತೆ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

ಕಾಂಗ್ರೆಸ್ ವಕ್ತಾರ ಶಕ್ತಿಸಿನ್ಹ್ ಗೋಹಿಲ್ ಅವರು ಕಂಗನಾ ಹೇಳಿಕೆಯನ್ನು ಖಂಡಿಸದ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. “ಪ್ರಧಾನಿ ಮೋದಿಯವರು ಆಕೆಯ ಹೇಳಿಕೆಯನ್ನು ಯಾಕೆ ಖಂಡಿಸಿಲ್ಲ? ಆಕೆಯ ಹೇಳಿಕೆಯನ್ನು ಬಿಜೆಪಿ ಒಪ್ಪದಿದ್ದರೆ, ಆಕೆಯನ್ನು ಪಕ್ಷದಿಂದ ಯಾಕೆ ಉಚ್ಚಾಟಿಸಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ಕಂಗನಾ ಹೇಳಿಕೆ ವಿಚಾರದಲ್ಲಿ ಬಿಜೆಪಿಯ ಮೌನವು, ತನ್ನ ಪಕ್ಷದ ಕಾಲಾಳುಗಳ ಮೂಲಕ ಕೃಷಿ ಕಾನೂನುಗಳನ್ನು ಮರು ಪರಿಚಯಿಸುವ ಉದ್ದೇಶವನ್ನು ಸೂಚಿಸುತ್ತದೆ. ಕಂಗನಾ ನಿಲುವನ್ನು ಬಿಜೆಪಿ ಖಂಡಿಸುವುದಾದರೆ, ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಗೋಹಿಲ್ ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X