ಕೋಟೆ ನಾಡಿನಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿ: 17ರಂದು ನಾಮಪತ್ರ ಸಲ್ಲಿಸುವೆ ಎಂದ ರಘು ಆಚಾರ್

Date:

Advertisements
  • ಏಪ್ರಿಲ್‌ 17ಕ್ಕೆ ನಾಮಪತ್ರ ಸಲ್ಲಿಕೆ
  • ಕಾಂಗ್ರೆಸ್ ವಿರುದ್ಧ ಜಿ ರಘು ಆಕ್ರೋಶ

ರಾಜ್ಯ ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ.

ಕಾಂಗ್ರೆಸ್‌ನ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಬಂಡಾಯದ ಬೇಗೆ ಮತ್ತೆ ಕಾಣಿಸಿಕೊಂಡಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಎಂಎಲ್‌ಸಿ ಜಿ ರಘು ಆಚಾರ್‌ ಅವರಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಅವರು ಪಕ್ಷದ ವಿರುದ್ಧ ಮುನಿಸಿಕೊಂಡಿದ್ದಾರೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕೆ ಸಿ ವೀರೇಂದ್ರ ಅವರಿಗೆ ಪಕ್ಷದ ಟಿಕೆಟ್ ನೀಡಲಾಗಿದೆ. ಆದ್ದರಿಂದ, ಕಾಂಗ್ರೆಸ್ ನಿರ್ಧಾರದ ವಿರುದ್ಧ ಸಿಡಿದೆದ್ದಿರುವ ಜಿ ರಘು ಆಚಾರ್‌ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

Advertisements

ಕೆ ಸಿ ವೀರೇಂದ್ರ ಮತ್ತು ಜಿ ರಘು ಅವರ ನಡುವೆ ಚಿತ್ರದುರ್ಗ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಇದೀಗ ಕಾಂಗ್ರೆಸ್ ವೀರೇಂದ್ರ ಅವರಿಗೆ ಮಣೆ ಹಾಕಿದೆ.

ಈ ಕುರಿತು ಈ ದಿನ.ಕಾಮ್‌ನೊಂದಿಗೆ ಮಾತನಾಡಿರುವ ಬಂಡಾಯ ರಘು ಆಚಾರ್, “ಪಕ್ಷದ ನಿರ್ಧಾರದಿಂದ ನನಗೆ ಬೇಸರವಾಗಿದೆ. ನಾನು ಚುನಾವಣೆಗೆ ನಿಲ್ಲುವುದು ಸತ್ಯ. ಇದೇ 17ರಂದು ನಾಮಪತ್ರ ಸಲ್ಲಿಸುವೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ | ಯಾವ ಜಾತಿಗೆ ಎಷ್ಟು ಟಿಕೆಟ್‌? ಇಲ್ಲಿದೆ ಪೂರ್ಣ ವಿವರ

“ವಿಧಾನ ಪರಿಷತ್‌ ಬದಲಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷದ ಹಿರಿಯ ನಾಯಕರು ಈ ಹಿಂದೆ ಹೇಳಿದ್ದರು. ನಾನೂ ಟಿಕೆಟ್‌ ನಿರೀಕ್ಷೆಯಲ್ಲಿದ್ದೆ. ಆದರೆ, ಪಕ್ಷ ನನ್ನ ಕತ್ತು ಕೊಯ್ದಿದೆ. ನನ್ನದು ಪ್ರಬಲ ಜಾತಿ ಅಲ್ಲ ಎನ್ನುವ ಕಾರಣವೊಂದಕ್ಕೆ ನನ್ನ ರಾಜಕೀಯ ಜೀವನ ಹಾಳು ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ರಾಜ್ಯದ ಸಣ್ಣ ಸಮುದಾಯಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಗೌರವ ಇದ್ದಂತೆ ಕಾಣುತ್ತಿಲ್ಲ. ಸಣ್ಣ ಸಮುದಾಯ ನಿರ್ಲಕ್ಷ್ಯ ಮಾಡಿದ ಕಾಂಗ್ರೆಸ್‌ಗೆ ವಿಶ್ವಕರ್ಮ ಸಮುದಾಯದ ಬೆಂಬಲವಿಲ್ಲ. ಕಾಂಗ್ರೆಸ್‌ಗೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ” ಎಂದು ಅಸಮಾಧಾನ ಹೊರಹಾಕಿದ್ದಾರೆ.

“ನಾನು ಏಪ್ರಿಲ್ 17ಕ್ಕೆ ನಾಮಪತ್ರ ಸಲ್ಲಿಸುವೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲೆ ಅಥವಾ ಇತರೆ ಪಕ್ಷಗಳ ಟಿಕೆಟ್‌ನಿಂದ ಕಣಕ್ಕಿಳಿಯಲೇ ಎನ್ನುವ ಕುರಿತು ಇನ್ನೂ ನಿರ್ಧಾರ ಮಾಡಿಲ್ಲ” ಎಂದು ತಿಳಿಸಿದ್ದಾರೆ.

ಕ್ಷೇತ್ರದ ಮತದಾರರ ಜೊತೆಗೆ ಮಾತನಾಡಿಕೊಂಡು ಮುಂದಿನ ಹೆಜ್ಜೆ ಇಡುವುದಾಗಿ ಜಿ ರಘು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X