ಕೋಟೆ ನಾಡಿನಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿ: 17ರಂದು ನಾಮಪತ್ರ ಸಲ್ಲಿಸುವೆ ಎಂದ ರಘು ಆಚಾರ್

Date:

  • ಏಪ್ರಿಲ್‌ 17ಕ್ಕೆ ನಾಮಪತ್ರ ಸಲ್ಲಿಕೆ
  • ಕಾಂಗ್ರೆಸ್ ವಿರುದ್ಧ ಜಿ ರಘು ಆಕ್ರೋಶ

ರಾಜ್ಯ ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ.

ಕಾಂಗ್ರೆಸ್‌ನ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಬಂಡಾಯದ ಬೇಗೆ ಮತ್ತೆ ಕಾಣಿಸಿಕೊಂಡಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಎಂಎಲ್‌ಸಿ ಜಿ ರಘು ಆಚಾರ್‌ ಅವರಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಅವರು ಪಕ್ಷದ ವಿರುದ್ಧ ಮುನಿಸಿಕೊಂಡಿದ್ದಾರೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕೆ ಸಿ ವೀರೇಂದ್ರ ಅವರಿಗೆ ಪಕ್ಷದ ಟಿಕೆಟ್ ನೀಡಲಾಗಿದೆ. ಆದ್ದರಿಂದ, ಕಾಂಗ್ರೆಸ್ ನಿರ್ಧಾರದ ವಿರುದ್ಧ ಸಿಡಿದೆದ್ದಿರುವ ಜಿ ರಘು ಆಚಾರ್‌ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಕೆ ಸಿ ವೀರೇಂದ್ರ ಮತ್ತು ಜಿ ರಘು ಅವರ ನಡುವೆ ಚಿತ್ರದುರ್ಗ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಇದೀಗ ಕಾಂಗ್ರೆಸ್ ವೀರೇಂದ್ರ ಅವರಿಗೆ ಮಣೆ ಹಾಕಿದೆ.

ಈ ಕುರಿತು ಈ ದಿನ.ಕಾಮ್‌ನೊಂದಿಗೆ ಮಾತನಾಡಿರುವ ಬಂಡಾಯ ರಘು ಆಚಾರ್, “ಪಕ್ಷದ ನಿರ್ಧಾರದಿಂದ ನನಗೆ ಬೇಸರವಾಗಿದೆ. ನಾನು ಚುನಾವಣೆಗೆ ನಿಲ್ಲುವುದು ಸತ್ಯ. ಇದೇ 17ರಂದು ನಾಮಪತ್ರ ಸಲ್ಲಿಸುವೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ | ಯಾವ ಜಾತಿಗೆ ಎಷ್ಟು ಟಿಕೆಟ್‌? ಇಲ್ಲಿದೆ ಪೂರ್ಣ ವಿವರ

“ವಿಧಾನ ಪರಿಷತ್‌ ಬದಲಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷದ ಹಿರಿಯ ನಾಯಕರು ಈ ಹಿಂದೆ ಹೇಳಿದ್ದರು. ನಾನೂ ಟಿಕೆಟ್‌ ನಿರೀಕ್ಷೆಯಲ್ಲಿದ್ದೆ. ಆದರೆ, ಪಕ್ಷ ನನ್ನ ಕತ್ತು ಕೊಯ್ದಿದೆ. ನನ್ನದು ಪ್ರಬಲ ಜಾತಿ ಅಲ್ಲ ಎನ್ನುವ ಕಾರಣವೊಂದಕ್ಕೆ ನನ್ನ ರಾಜಕೀಯ ಜೀವನ ಹಾಳು ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ರಾಜ್ಯದ ಸಣ್ಣ ಸಮುದಾಯಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಗೌರವ ಇದ್ದಂತೆ ಕಾಣುತ್ತಿಲ್ಲ. ಸಣ್ಣ ಸಮುದಾಯ ನಿರ್ಲಕ್ಷ್ಯ ಮಾಡಿದ ಕಾಂಗ್ರೆಸ್‌ಗೆ ವಿಶ್ವಕರ್ಮ ಸಮುದಾಯದ ಬೆಂಬಲವಿಲ್ಲ. ಕಾಂಗ್ರೆಸ್‌ಗೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ” ಎಂದು ಅಸಮಾಧಾನ ಹೊರಹಾಕಿದ್ದಾರೆ.

“ನಾನು ಏಪ್ರಿಲ್ 17ಕ್ಕೆ ನಾಮಪತ್ರ ಸಲ್ಲಿಸುವೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲೆ ಅಥವಾ ಇತರೆ ಪಕ್ಷಗಳ ಟಿಕೆಟ್‌ನಿಂದ ಕಣಕ್ಕಿಳಿಯಲೇ ಎನ್ನುವ ಕುರಿತು ಇನ್ನೂ ನಿರ್ಧಾರ ಮಾಡಿಲ್ಲ” ಎಂದು ತಿಳಿಸಿದ್ದಾರೆ.

ಕ್ಷೇತ್ರದ ಮತದಾರರ ಜೊತೆಗೆ ಮಾತನಾಡಿಕೊಂಡು ಮುಂದಿನ ಹೆಜ್ಜೆ ಇಡುವುದಾಗಿ ಜಿ ರಘು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದೇನಾ ಮೋದಿಯ ಡಿಜಿಟಲ್ ಇಂಡಿಯಾ?

ಗುಜರಾತ್ ಮಾಡೆಲ್, ಸಬ್ ಕಾ ಸಾತ್ – ಸಬ್ ಕಾ ವಿಕಾಸ್,...

545 ಪಿಎಸ್ಐ ಹುದ್ದೆ | ನಮ್ಮ ಹೋರಾಟಕ್ಕೆ ಕೊನೆಗೂ ಜಯ: ಸಚಿವ ಪ್ರಿಯಾಂಕ್‌ ಖರ್ಗೆ

ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಹಾಗೂ ಪಾರದರ್ಶಕವಾಗಿ ಮರುಪರೀಕ್ಷೆ ನಡೆಸಿ, ಅಂದು ಬಿಜೆಪಿ...

ಚುನಾವಣೆ ಅಗ್ನಿಪರೀಕ್ಷೆ ನಿಜ, ಹಾಗಂತ ಬಗ್ಗಲು ನನ್ನಿಂದ ಸಾಧ್ಯವಿಲ್ಲ: ಕುಮಾರಸ್ವಾಮಿ ನೇರ ಮಾತು

ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ...

ಗಣಿ ಅಕ್ರಮ | ಕುಮಾರಸ್ವಾಮಿ ಜಾಮೀನು ರದ್ದುಕೋರಿ ನ್ಯಾಯಾಲಯಕ್ಕೆ ಲೋಕಾಯುಕ್ತ ಎಸ್‌ಐಟಿ ಅರ್ಜಿ

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ (ಎಸ್‌ಎಸ್‌ವಿಎಂ) ಕಂಪನಿಗೆ ಗಣಿ ಗುತ್ತಿಗೆ ಮಂಜೂರು...