ವಿಪಕ್ಷ ನಾಯಕರ ಫೋನ್ ಹ್ಯಾಕಿಂಗ್ ಯತ್ನ; ಸರ್ಕಾರದ ವಿರುದ್ಧ ‘ಇಂಡಿಯಾ’ ನಾಯಕರ ವಾಗ್ದಾಳಿ

Date:

Advertisements

ಸರ್ಕಾರಿ ಪ್ರಾಯೋಜಿತ ಹ್ಯಾಕರ್‌ಗಳು ತಮ್ಮ ಫೋನ್‌ಗಳನ್ನು ಹ್ಯಾಕ್‌ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಪಕ್ಷಗಳ ಒಕ್ಕೂಟ ಇಂಡಿಯಾ ನಾಯಕರು ಆರೋಪಿಸಿದ್ದಾರೆ.

ಕಾಂಗ್ರೆಸ್ ಸಂಸದರಾದ ಶಶಿ ತರೂರ್‌, ಪವನ್‌ ಖೇರಾ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ, ಶಿವಸೇನಾ (ಯುಬಿಟಿ) ಬಣದ ನಾಯಕಿ ಪ್ರಿಯಾಂಕಾ ಚತುರ್ವೇದಿ, ಎಎಪಿ ರಾಜ್ಯಸಭೆ ಸದಸ್ಯ ರಾಘವ್ ಛೆಡ್ಡಾ ಸೇರಿದಂತೆ ಇಂಡಿಯಾ ಒಕ್ಕೂಟದ ಹಲವಾರು ವಿರೋಧ ಪಕ್ಷದ ನಾಯಕರು ತಮ್ಮ ಆ್ಯಪಲ್ ಫೋನ್‌ಗಳಿಗೆ ರಾಜ್ಯ ಪ್ರಾಯೋಜಿತ ಸೈಬರ್‌ ದಾಳಿಕೋರರು ನಿಮ್ಮ ಮೊಬೈಲ್‌ ಫೋನ್‌ಅನ್ನು ದಾಳಿ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಸಂದೇಶಗಳನ್ನು ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್‌, ನನ್ನ ಆಪಲ್‌ ಫೋನ್‌ನಿಂದ ಸಂದೇಶ ಸ್ವೀಕರಿಸಲಾಗಿದೆ. ಹ್ಯಾಕ್‌ ಮಾಡುವ ಉದ್ದೇಶ ದೃಢಪಟ್ಟಿದೆ. ನನ್ನಂತಹ ತೆರಿಗೆದಾರರ ವೆಚ್ಚದಲ್ಲಿ ನಿರುದ್ಯೋಗಿ ಅಧಿಕಾರಿಗಳನ್ನು ಕಾರ್ಯನಿರತವಾಗಿರಿಸಲು ಸಂತೋಷವಾಗಿದೆ! ಮಾಡಲು ಹೆಚ್ಚು ಮುಖ್ಯವಾದುದೇನೂ ಇಲ್ಲವೇ? ಎಂದು ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ವಾಟ್ಸಾಪ್‌ನಲ್ಲಿ ಹೊಸ ಫೀಚರ್ ಪ್ರಕಟ: ಏಕ ಕಾಲದಲ್ಲಿ ಎರಡು ಮೊಬೈಲ್ ನಂಬರ್ ಅಕೌಂಟ್ ಬಳಸುವ ಆಯ್ಕೆ

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, “ನನ್ನ ಫೋನ್ ಮತ್ತು ಇಮೇಲ್‌ಗೆ ಸರ್ಕಾರವು ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದೆ ಎಂದು ಆಪಲ್‌ನಿಂದ ಸಂದೇಶ ಮತ್ತು ಇಮೇಲ್ ಸ್ವೀಕರಿಸಿದ್ದೇನೆ. ಬೆದರಿಕೆಯೊಡ್ಡುವ ಅದಾನಿ ಹಾಗೂ ಪಿಎಂಒ ಅವರೆ ನಿಮ್ಮ ಭಯವು ನನಗೆ ನಿಮ್ಮ ಮೇಲೆ ಕರುಣೆಯುಂಟುಮಾಡುತ್ತದೆ” ಎಂದು ಕೇಂದ್ರ ಗೃಹ ಸಚಿವಾಯಕ್ಕೆ ಟ್ಯಾಗ್‌ ಮಾಡಿದ್ದಾರೆ.

ರಾಜ್ಯಸಭೆ ಸದಸ್ಯೆ, ಪ್ರಿಯಾಂಕಾ ಚತುರ್ವೇದಿ ಸಹ ಎಚ್ಚರಿಕೆ ಸಂದೇಶಗಳ ಸ್ಕ್ರೀನ್ ಶಾಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಕಳೆದ ರಾತ್ರಿ ನಾನು ಎಚ್ಚರಿಕೆ ಸ್ವೀಕರಿಸಿದ್ದೇನೆ. ಇದು ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯವಾಗಿದೆ. ನಾನು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾಗಿದೆ ಎಂದು ತೋರಿಸುತ್ತದೆ, ಈ ದಾಳಿಗಳು ರಾಜ್ಯ ಪ್ರಾಯೋಜಿತ ಎಂದು ಎಚ್ಚರಿಕೆ ಸ್ಪಷ್ಟವಾಗಿ ಹೇಳುತ್ತದೆ. ವಿರೋಧ ಪಕ್ಷದ ನಾಯಕರಿಗೆ ಮಾತ್ರ ಇಂತಹ ಸಂದೇಶಗಳು ಏಕೆ ಬರುತ್ತಿವೆ? ನಮ್ಮ ಮೇಲೆ ದೊಡ್ಡ ಮಟ್ಟದ ಕಣ್ಗಾವಲು ನಡೆಯುತ್ತಿದೆ ಎಂಬುದನ್ನು ಇದು ತೋರಿಸುತ್ತದೆ. ಈ ಬಗ್ಗೆ ತನಿಖೆ ನಡೆಸಬೇಕು ಹಾಗೂ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸಂದೇಶದಲ್ಲಿರುವುದೇನು?

‘ರಾಜ್ಯ ಪ್ರಾಯೋಜಿತ ದಾಳಿಕೋರರು ನಿಮ್ಮ ಐಫೋನ್‌ಅನ್ನು ಗುರಿಯಾಗಿಸಬಹುದು’ ಎಂದು ಎಚ್ಚರಿಕೆ ನೀಡಲಾಗಿದೆ. ನಿಮ್ಮ ಆ್ಯಪಲ್ ಐಡಿಯೊಂದಿಗೆ ಸಂಯೋಜಿತವಾಗಿರುವ ಐಫೋನ್‌ಅನ್ನು ದೂರದಿಂದಲೇ ರಾಜಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವ ರಾಜ್ಯ ಪ್ರಾಯೋಜಿತ ದಾಳಿಕೋರರಿಂದ ನೀವು ಗುರಿಯಾಗಿದ್ದೀರಿ ಎಂದು ಆ್ಯಪಲ್ ಭಾವಿಸುತ್ತದೆ. ನೀವು ಯಾರು ಅಥವಾ ನೀವು ಏನು ಮಾಡುತ್ತಿದ್ದೀರಿ ಎಂಬ ಕಾರಣದಿಂದ ಈ ದಾಳಿಕೋರರು ನಿಮ್ಮನ್ನು ವೈಯಕ್ತಿಕವಾಗಿ ಗುರಿಪಡಿಸುತ್ತಿರಬಹುದು. ನಿಮ್ಮ ಸಾಧನವು ರಾಜ್ಯ ಪ್ರಾಯೋಜಿತ ದಾಳಿಕೋರರಿಂದ ರಾಜಿ ಮಾಡಿಕೊಂಡರೆ, ಅವರು ನಮ್ಮ ಸೂಕ್ಷ್ಮ ಡೇಟಾ, ಸಂವಹನಗಳು ಅಥವಾ ಕ್ಯಾಮರಾ ಮತ್ತು ಮೈಕ್ರೋಫೋನ್‌ ಅನ್ನು ದೂರದಿಂದಲೇ ಪ್ರವೇಶಿಸಲು ಸಾಧ್ಯವಾಗುತ್ತದೆ. ಇದು ತಪ್ಪು ಎಚ್ಚರಿಕೆ ಆಗಿರುವ ಸಾಧ್ಯತೆಯಿದ್ದರೂ, ದಯವಿಟ್ಟು ಈ ಎಚ್ಚರಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಿ” ಎಂದು ಸಂದೇಶದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X