ನಬಾರ್ಡ್‌ನಿಂದ ಸಾಲದ ನೆರವು ಕಡಿತ; ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ

Date:

Advertisements

ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ ಒದಗಿಸಿರುವ ನಬಾರ್ಡ್ ಸಾಲದ ನೆರವು ಕಡಿತಗೊಳಿಸಿರುವುದರಿಂದ ರಾಜ್ಯದ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ನ.29) ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿ ಮನವಿ ಪತ್ರ ಸಲ್ಲಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 2023-24 ರ ಕೇಂದ್ರ ಬಜೆಟ್ ನಲ್ಲಿ ಅನುಮೋದನೆಯಾಗಿರುವ 5,300 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಕೇಂದ್ರ ಹಣಕಾಸು ಸಚಿವರ ಭರವಸೆ ಈವರೆಗೆ ಈಡೇರಿಲ್ಲ. ಈ ಬಗ್ಗೆಯೂ ಸಿದ್ದರಾಮಯ್ಯ ಗಮನ ಸೆಳೆದಿದ್ದಾರೆ.

16ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರದ ತೆರಿಗೆ ಪಾಲಿಗೆ ಹೆಚ್ಚಿನ ದೇಣಿಗೆ ಒದಗಿಸುವ ರಾಜ್ಯಗಳಿಗೆ, ಕೇಂದ್ರದ ತೆರಿಗೆ ಪಾಲಿನಲ್ಲಿ ಭಾರೀ ಕಡಿತ ಮಾಡಿ ಶಿಕ್ಷಿಸದಂತೆ, ಹಣಕಾಸು ಇಲಾಖೆ ಖಾತ್ರಿಪಡಿಸಬೇಕು ಎಂದು ಸಿಎಂ ಕೋರಿದ್ದಾರೆ.

Advertisements

ಸಿಎಂ ಮನವಿ ಪತ್ರದಲ್ಲಿ ಏನಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ,

ರಾಜ್ಯಕ್ಕೆ ಅತ್ಯಂತ ಪ್ರಮುಖವಾದ ಕೆಲವು ವಿಷಯಗಳ ಬಗ್ಗೆ ತಮ್ಮ ಗಮನವನ್ನು ಸೆಳೆಯಲು ಬಯಸುತ್ತೇನೆ.

ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ ಒದಗಿಸಿರುವ ನಬಾರ್ಡ್ ನೆರವು ಕಡಿತಗೊಳಿಸಿರುವುದರಿಂದ ರಾಜ್ಯದ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಿದೆ. 2023-24ರ ಸಾಲಿನಲ್ಲಿ ರೂ.5600 ಕೋಟಿಗಳನ್ನು ಮಂಜೂರು ಮಾಡಲಾಗಿತ್ತು. 2024 -25ರ ಸಾಲಿನಲ್ಲಿ ರೂ. 2,340 ಕೋಟಿಗಳನ್ನು ಮಂಜೂರು ಮಾಡಲಾಗಿದೆ. ಇದರಿಂದಾಗಿ ನಬಾರ್ಡ್ ನೆರವು ಪ್ರಸಕ್ತ ಸಾಲಿನಲ್ಲಿ ಶೇ.58 ರಷ್ಟು ಕಡಿತವಾಗಿದೆ.

ರಾಜ್ಯವು ಹೆಚ್ಚುವರಿ ಬಡ್ಡಿ ಸಹಾಯಧನವನ್ನು ನೀಡದ ಹೊರತು, ಇದು ರಾಜ್ಯದ ರೈತಾಪಿ ವರ್ಗದ ಆರ್ಥಿಕ ವೆಚ್ಚದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ, ರಾಜ್ಯದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಈ ಕೂಡಲೇ ಇದನ್ನು ಪರಾಮರ್ಶಿಸಿ ನಬಾರ್ಡ್ ನೆರವು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ರಾಜ್ಯದ ರೈತರು ಅಲ್ಪಾವಧಿ ಬೆಳೆ ಸಾಲಗಳನ್ನು ಪಡೆಯಲು ಯಾವುದೇ ರೀತಿಯ ತೊಂದರೆಯಾಗದಂತೆ ತಾವು ಹಣಕಾಸು ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡುತ್ತಿದ್ದೇನೆ.

ಎರಡನೆಯದಾಗಿ, ಈ ಮೊದಲೇ ತಮ್ಮಲ್ಲಿ ಮನವಿ ಮಾಡಿರುವಂತೆ, ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 2023-24 ರ ಕೇಂದ್ರ ಬಜೆಟ್ ನಲ್ಲಿ ಅನುಮೋದನೆಯಾಗಿರುವ ರೂ. 5300 ಕೋಟಿ ಅನುದಾನ ಬಿಡುಗಡೆ ಮಾಡುವ ಕೇಂದ್ರ ಹಣಕಾಸು ಸಚಿವರ ಭರವಸೆ ಈವರೆಗೆ ಈಡೇರಿಲ್ಲ. ತ್ವರಿತ ನೀರಾವರಿ ಲಾಭ ಕಾರ್ಯಕ್ರಮದಡಿ ನೆರವು ಒದಗಿಸಲು ಸಚಿವ ಸಂಪುಟದ ಟಿಪ್ಪಣಿಯನ್ನು ಸಿದ್ದಮಾಡಿರುವ ಬಗ್ಗೆ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತೀಯ ಜನತಾ ಪಕ್ಷಕ್ಕೆ ನೀತಿಯೂ ಇಲ್ಲ, ರೀತಿಯೂ ಇಲ್ಲ

ಪ್ರಸಕ್ತ ಯೋಜನೆ ಶೀಘ್ರ ಅನುಮೋದನೆಗೊಂಡಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಒಳಪಡುವ ಮಧ್ಯ ಕರ್ನಾಟಕದ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ. ಆದ್ದರಿಂದ ಈ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡಲು ತಮ್ಮಲ್ಲಿ ಮನವಿ ಮಾಡುತ್ತೇನೆ.

ಮೂರನೆಯದಾಗಿ ಶುಷ್ಕ ವಲಯಕ್ಕೆ ಸೇರಿದ ಕರ್ನಾಟಕದಂತಹ ರಾಜ್ಯದಲ್ಲಿ ನೀರಾವರಿ ಸೌಲಭ್ಯ ಸಾಮರ್ಥ್ಯಗಳನ್ನು ಸಬಲಗೊಳಿಸುವುದು ಅತ್ಯಗತ್ಯವಾಗಿದೆ. ಈ ಕಾರ್ಯವನ್ನು ಬಹುತೇಕ ರಾಜ್ಯವು ತನ್ನ ಸಂಪನ್ಮೂಲಗಳಿಂದಲೇ ಭರಿಸುತ್ತಿದೆ. ಆದರೆ, ಜಲ ಶಕ್ತಿ ಸಚಿವಾಲಯ ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಗಳಲ್ಲಿ ಯೋಜನೆಗಳ ತೀರುವಳಿ ಬಾಕಿ ಇರುವುದು ನಮ್ಮ ಯೋಜನೆಗಳನ್ನು ವಿಳಂಬ ಮಾಡಿದೆ.

ಕಾವೇರಿ ನದಿ ಪಾತ್ರದ ಮೇಕೇದಾಟು ಯೋಜನೆ ಹಾಗೂ ಮಹದಾಯಿ ನದಿಯ ಕಳಸಾಬಂಡೂರಿ ಯೋಜನೆಗಳಗತ್ತ ತಾವು ತುರ್ತು ಗಮನ ಹರಿಸಬೇಕಿದೆ ಜಲಶಕ್ತಿ ಹಾಗೂ ಅರಣ್ಯ, ಪರಿಸರ ಸಚಿವಾಲಯಗಳಿಂದ ಶೀಘ್ರ ತೀರುವಳಿ ದೊರಕಿಸಿಕೊಡಲು ಕೋರಲಾಗಿದೆ.

ನಾಲ್ಕನೇಯದ್ದಾಗಿ, ಕರ್ನಾಟಕ ಅತ್ಯಂತ ವೇಗವಾಗಿ ನಗರೀಕರಣಗೊಳ್ಳುತ್ತಿರುವ ರಾಜ್ಯವಾಗಿದ್ದು, 13 ಮಹಾನಗರ ಪಾಲಿಕೆಗಳಿದ್ದು, ಈ ಎರಡನೇ ಸ್ತರದ ನಗರಗಳ ಅಭಿವೃದ್ಧಿಗೆ ಹೆಚ್ಚಿನ ಬಂಡವಾಳ ಅಗತ್ಯವಿದೆ. ಕರ್ನಾಟಕ ರಾಜ್ಯ ಸರ್ಕಾರ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಮುಂದಿನ ಮೂರು ವರ್ಷಗಳ ಅವಧಿಗೆ 2ಸಾವಿರ ಕೋಟಿ ರೂ. ಈ ಉದ್ದೇಶಕ್ಕಾಗಿ ತೆಗೆದಿರಿಸಿದೆ. ಆದರೆ ಈ ನಗರಗಳಿಗೆ ಸಮಗ್ರ ಮೂಲಸೌಕರ್ಯಗಳನ್ನು ಕಲ್ಪಿಸಲು ಈ ಅನುದಾನ ಸಾಕಾಗುವುದಿಲ್ಲ. ಆದ್ದರಿಂದ ಅಮೃತ್ ಅಥವಾ ಇನ್ನಾವುದೇ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ 10ಸಾವಿರ ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಲು ನಾನು ಕೋರುತ್ತೇನೆ.

ಕೊನೆಯದ್ದಾಗಿ, 15ನೇ ಹಣಕಾಸು ಆಯೋಗ ಕರ್ನಾಟಕ ರಾಜ್ಯಕ್ಕೆ ಸರಿಯಾದ ನ್ಯಾಯ ಒದಗಿಸುತ್ತಿಲ್ಲ ಎಂದು ನಾವು ನಿರಂತರವಾಗಿ ಪ್ರಸ್ತಾಪಿಸುತ್ತಾ ಬಂದಿದ್ದೇವೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯದ ಪಾಲನ್ನು ಶೇ.1ರಷ್ಟು ಕಡಿಮೆ ಮಾಡಿರುವ ಶಿಫಾರಸ್ಸನ್ನು ಹಣಕಾಸು ಇಲಾಖೆ ಸರಿಪಡಿಸಬೇಕಾಗಿದೆ. ಹಣಕಾಸು ಆಯೋಗವು ರಾಜ್ಯಕ್ಕೆ ಹಂಚಿಕೆ ಕಡಿಮೆಯಾಗಿರುವುದಕ್ಕೆ ಪರಿಹಾರವಾಗಿ ರೂ.5495 ಕೋಟಿ ಅನುದಾನ ಬಿಡುಗಡೆಗೆ ಮತ್ತು ಪೆರಿಫೆರಲ್ ರಿಂಗ್ ರಸ್ತೆ ಮತ್ತು ನೀರಿನ ಮೂಲಗಳ ಪುನರುಜ್ಜೀವನಕ್ಕೆ ರೂ.6ಸಾವಿರ ಕೋಟಿ ವಿಶೇಷ ಅನುದಾನ ನೀಡುವ ಬಗ್ಗೆ ಶಿಫಾರಸು ಮಾಡಿದೆ. ಕನಿಷ್ಟ ಪಕ್ಷ ಹಣಕಾಸು ಆಯೋಗ ಈ ಎರಡು ಶಿಫಾರಸ್ಸುಗಳನ್ನು ಒಪ್ಪಿಕೊಳ್ಳಬೇಕಾಗಿದೆ.ನಾವು ಇನ್ನೂ 15ನೇ ಹಣಕಾಸು ಆಯೋಗದ ಅವಧಿಯಲ್ಲಿರುವುದರಿಂದ ರಾಜ್ಯಕ್ಕೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ನಿರ್ದೇಶನ ನೀಡುವಂತೆ ಪುನಃ ನಾನು ಮನವಿ ಮಾಡುತ್ತೇನೆ.

16ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರದ ತೆರಿಗೆ ಪಾಲಿಗೆ ಹೆಚ್ಚಿನ ದೇಣಿಗೆ ಒದಗಿಸುವ ರಾಜ್ಯಗಳಿಗೆ, ಕೇಂದ್ರದ ತೆರಿಗೆ ಪಾಲಿನಲ್ಲಿ ಭಾರೀ ಕಡಿತ ಮಾಡಿ ಶಿಕ್ಷಿಸದಂತೆ, ಹಣಕಾಸು ಇಲಾಖೆ ಖಾತ್ರಿಪಡಿಸಬೇಕು.

ನಮ್ಮ ಮನವಿಗೆ ಸೂಕ್ತ ಪ್ರತಿಕ್ರಿಯೆ ದೊರಕುವ ನಿರೀಕ್ಷೆ ನಮ್ಮದು.

ಸಿದ್ದರಾಮಯ್ಯ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X