ಸುಳ್ಳು ಹೇಳುವವರನ್ನು ತಿರಸ್ಕರಿಸಿ, ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನ ಮಾಡಿ: ಸಿಎಂ ಸಿದ್ದರಾಮಯ್ಯ

Date:

Advertisements

ಸುಳ್ಳು ಹೇಳುವವರನ್ನು ತಿರಸ್ಕರಿಸಿ, ಮುಂದಿನ ಐದು ವರ್ಷದವರೆಗೆ ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನವನ್ನು ಜನತೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡರವರ ಪರವಾಗಿ ಮತ ಯಾಚನೆ ಮಾಡಿ ನಂತರ ಸಿಎಂ ಸಿದ್ಧರಾಮಯ್ಯ ಅವರು ಮಾತನಾಡಿದರು.

“26ರಂದು ಜನ ಮಾಡುವ ತೀರ್ಮಾನ ದೇಶದ ಹಿತದಷ್ಟಿಯಿಂದ ಮಹತ್ವವಾದುದು. ಮುಂದಿನ ಐದು ವರ್ಷದವರೆಗೆ ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನವನ್ನು ನೀವು ಮಾಡಬೇಕು. ನಿಮ್ಮನ್ನು ಮುನ್ನಡೆಸಲು ಯಾರಿಗೆ ಯೋಗ್ಯತೆ ಇದೆ ಎಂದು ನಿಮ್ಮ ಮತದ ಮೂಲಕ ನಿರ್ಧರಿಸಬೇಕು. ಸಂಸತ್ತಿನಲ್ಲಿ ನಿಮ್ಮ ಧ್ವನಿಯನ್ನು ಸಮರ್ಥವಾಗಿ ಪ್ರತಿನಿಧಿಸುವ ಸಂಸತ್ತಿಗೆ ಹೋಗಬೇಕು. ರಾಜ್ಯದ ಹಿತ ಕಾಪಾಡುವವರು ಸಂಸತ್ತಿನಲ್ಲಿದ್ದರೆ ರಾಜ್ಯಕ್ಕೆ ಹಿತ” ಎಂದರು.

Advertisements

ಇದನ್ನು ಓದಿದ್ದೀರಾ?  24*7 ಕೆಲಸ ಹೇಳಿಕೆ; ರಾಜ್ಯದಲ್ಲಿ ಪ್ರವಾಹ ಬಂದಾಗ ಎಲ್ಲಿದ್ರಿ? ; ಮೋದಿಗೆ ಸಿದ್ಧರಾಮಯ್ಯ ತಿರುಗೇಟು

“ಬೆಲೆಯೇರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಾವು ಸತ್ಯ ಹೇಳುತ್ತಿದ್ದೇವೆ, ಬಿಜೆಪಿ ಸುಳ್ಳು ಹೇಳುತ್ತಿದೆ. ಸುಳ್ಳು ಹೇಳುವವರನ್ನು ತಿರಸ್ಕಾರ ಮಾಡಬೇಕು ಎಂದು ಕರೆ ನೀಡಿದರು. ನುಡಿದಂತೆ ನಡೆದಿದ್ದೇವೆ. ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಬಜೆಟ್‌ನಲ್ಲಿ 52000 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ನಮ್ಮ ಅಭ್ಯರ್ಥಿಯನ್ನು ಆಶೀರ್ವಾದ ಮಾಡಿ ಲೋಕಸಭೆಗೆ ಕಳಿಸಿಕೊಡಬೇಕು” ಎಂದು ಹೇಳಿದರು.

ಸುಳ್ಳು ಆಶ್ವಾಸನೆ ನೀಡುತ್ತಿರುವ ಪ್ರಧಾನಿ

“ಕಳೆದ ಹತ್ತು ವರ್ಷದಿಂದ ಪ್ರಧಾನಿ ಮೋದಿಯವರು ಸಮಾಜದ ಯಾವ ವರ್ಗಕ್ಕೂ ಯಾವುದೇ ಕೆಲಸ ಮಾಡಲಿಲ್ಲ. ಜನರ ಖಾತೆಗೆ 15 ಲಕ್ಷ ರೂ. ಹಾಕಲಿಲ್ಲ. 2014ರಂದು ಮೋದಿಯವರು ಸುಳ್ಳು ಆಶ್ವಾಸನೆಗಳನ್ನು ನಿಡಿದ್ದಾರೆ. ನಿರುದ್ಯೋಗಿಗಳಿಗೆ 20 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ. ಯುವಜನರಿಗೆ ಪಕೋಡಾ ಮಾರುವಂತೆ ಹೇಳಿದ ಮೋದಿಯವರು ಪ್ರಧಾನಿಯಾಗಲು ಯೋಗ್ಯರೇ ಎಂದು ನೀವೇ ನಿರ್ಧರಿಸಬೇಕು” ಎಂದರು.

ಇದನ್ನು ಓದಿದ್ದೀರಾ?  ನಾನು ರಾಜೀನಾಮೆ ಕೊಡಲು ಸಿದ್ಧ, ಅಮಿತ್‌ ಶಾ ಕೊಡುತ್ತಾರಾ: ಸಿದ್ದರಾಮಯ್ಯ ಸವಾಲು

ಬಿಜೆಪಿಯಿಂದ ರಾಜ್ಯದ ಜನರಿಗೆ ‘ಖಾಲಿ ಚೊಂಬು’

“ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಪೆಟ್ರೋಲ್, ಡೀಸೆಲ್, ಆಹಾರ ಪದಾರ್ಥಗಳು, ಗ್ಯಾಸ್ ಸೇರಿದಂತೆ ಎಲ್ಲದರ ಬೆಲೆಗಳು ಇಳಿಯಲಿಲ್ಲ. ರೈತರ ಆದಾಯ ದ್ವಿಗುಣಗೊಳಿಸಲಿಲ್ಲ. ಸಾಲ ಮನ್ನಾ, ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡುವ ಅನುಕೂಲತೆ ಮಾಡಲಿಲ್ಲ. 2014ರಲ್ಲಿ ಡಾಲರ್ ಬೆಲೆ 58 ರೂ., ಆದರೆ ಇಂದು ಒಂದು ಡಾಲರ್ ಬೆಲೆ 83 ರೂಪಾಯಿ ಆಗಿದ್ದು, ಮೋದಿಯವರು ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಈ ರೀತಿ ಬಿಜೆಪಿಯವರು ರಾಜ್ಯದ ಜನರಿಗೆ ಖಾಲಿ ಚೊಂಬನ್ನು ನೀಡಿದ್ದಾರೆ. ಆದರೆ ದೇವೇಗೌಡರು ಖಾಲಿ ಚೊಂಬನ್ನು ಅಕ್ಷಯಪಾತ್ರೆಯೆಂದು ಸುಳ್ಳು ಹೇಳುತ್ತಿದ್ದಾರೆ” ಎಂದು ಸಿದ್ಧರಾಮಯ್ಯ ಟೀಕಿಸಿದರು.

ನಮ್ಮಲ್ಲಿ ಪ್ರಧಾನಿಯಾಗುವ ಯೋಗ್ಯತೆ ಇರುವ ಬಹಳಷ್ಟು ಜನರಿದ್ದಾರೆ

“ದೇವೇಗೌಡರು ದೇಶದ ಪ್ರಧಾನಿಯಾಗುವಾಗ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿರಲಿಲ್ಲ. ಅದೃಷ್ಟದಿಂದ ಪ್ರಧಾನಿಯಾದರು. ರಾಹುಲ್ ಗಾಂಧಿ ನರೇಂದ್ರ ಮೋದಿಯವರಿಗಿಂತ ಕಡಿಮೆ ಏನಿಲ್ಲ. ನಮ್ಮಲ್ಲಿ ಪ್ರಧಾನಿಯಾಗುವ ಯೋಗ್ಯತೆ ಇರುವ ಬಹಳಷ್ಟು ಜನರಿದ್ದಾರೆ. ನರೇಂದ್ರ ಮೋದಿ ಅವರನ್ನು ಬಿಟ್ಟರೆ ಯಾರಿಲ್ಲ ಎನ್ನುತ್ತಾರೆ. ಒಂದು ಕಾಲದಲ್ಲಿ ನೆಹರೂ ಅವರ ನಂತರ ಪ್ರಧಾನಿ ಯಾರು ಎಂಬ ಪ್ರಶ್ನೆಗೆ ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಮನ್ ಮೋಹನ್ ಸಿಂಗ್ ಅವರು ಉತ್ತಮ ಕೆಲಸ ಮಾಡಲಿಲ್ಲವೇ” ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ?  ಶ್ರೀಮಂತರ ರೂ. 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಯಾರ ಪರ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

“ನರೇಂದ್ರ ಮೋದಿ ಬಿಟ್ಟರೆ ಪ್ರಧಾನಿಯಾಗಲು ಯಾರೂ ಇಲ್ಲ ಎಂದು ದೇವೇಗೌಡರು ಸ್ವಾರ್ಥಕ್ಕಾಗಿ ಹೇಳುವ ಮಾತುಗಳು. ಇದು ಅವರಿಗೆ ಶೋಭೆ ಕೊಡುವ ಮಾತುಗಳಲ್ಲ. ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ನರೇಂದ್ರ ಮೋದಿಯವರನ್ನು ಹಾಡಿ ಹೊಗಳುವ ಮಟ್ಟಕ್ಕೆ ಹೋದರೆಂದು ವ್ಯಥೆಯಾಗುತ್ತಿದೆ” ಎಂದರು.

“ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ದೊಡ್ಡ ಅನ್ಯಾಯವಾಗಿದೆ. 15ನೇ ಹಣಕಾಸು ಆಯೋಗ 5495 ಕೋಟಿ ಅನುದಾನ ಶಿಫಾರಸ್ಸು ಮಾಡಿದರೆ ನಿರ್ಮಲಾ ಸೀತಾರಾಮನ್ ಇದನ್ನು ಕೊಡಲು ಬರೋಲ್ಲ ಎಂದು ಕೊಡಲಿಲ್ಲ. ಪೆರಿಫೆರಲ್ ರಿಂಗ್ ರೋಡ್, ಹಾಗೂ ಬೆಂಗಳೂರಿನ ಕೆರೆಗಳ ಅಭಿವೃದ್ಧಿಗೆ ಶಿಫಾರಸ್ಸು ಮಾಡಿದ್ದ ತಲಾ 3000 ಕೋಟಿ ರೂ ಸೇರಿದಂತೆ ಒಟ್ಟು 11495 ಕೋಟಿ ರೂಪಾಯಿ ರಾಜ್ಯಕ್ಕೆ ಬರಲಿಲ್ಲ. ಕರ್ನಾಟಕಕ್ಕೆ ಏನೂ ಕೊಡಬೇಕಿಲ್ಲ ಎಂದು ನಿರ್ಮಲಾ ಸೀತಾರಾಮನ್ ಸುಳ್ಳು ಹೇಳುತ್ತಿದ್ದಾರೆ” ಎಂದು ಸಿಎಂ ಆರೋಪಿಸಿದರು.

“ಭದ್ರಾ ಮೇಲ್ಡಂಡೆ ಯೋಜನೆಗೆ 5300 ಕೋಟಿ ರೂ. ಬಜೆಟ್‌ನಲ್ಲಿ ಇರುವುದಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಘೋಷಿಸಿದ್ದರೂ , ಇದುವರೆಗೆ ಒಂದು ರೂಪಾಯಿಯನ್ನೂ ರಾಜ್ಯದ ಈ ಯೋಜನೆಗೆ ನೀಡಲಿಲ್ಲ. ಇದು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ತೋರಿಸುತ್ತಿರುವ ಮಲತಾಯಿ ಧೋರಣೆ. ಆದ್ದರಿಂದ ರಾಜ್ಯದ ಪರವಾಗಿ ಧ್ವನಿ ಎತ್ತುವ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಬೇಕು” ಎಂದರು.

ಇದನ್ನು ಓದಿದ್ದೀರಾ?  ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿಎಂ ಸಿದ್ದರಾಮಯ್ಯ

“223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದು ಸೆಪ್ಟೆಂಬರ್‌ನಲ್ಲಿ ಮನವಿ ಸಲ್ಲಿಸಿದ್ದು, ಅಕ್ಟೋಬರ್ ನಲ್ಲಿ ವರದಿ ಸಲ್ಲಿಸಿದ್ದರೂ ಕೇಂದ್ರ ತಂಡ ವರದಿ ಕೊಟ್ಟ ಒಂದು ತಿಂಗಳಲ್ಲಿ ಪರಿಹಾರ ನೀಡಬೇಕೆಂಬ ಕಾನೂನು ಇದ್ದರೂ ಒಂದು ರೂಪಾಯಿ ಕೊಟ್ಟಿಲ್ಲ. ಅಮಿತ್ ಶಾ ವರದಿ ಕೊಟ್ಟಿದ್ದೇ ತಡವಾಗಿ ಎಂದು ಅಪ್ಪಟ ಸುಳ್ಳು ಹೇಳುತ್ತಾರೆ ಎಂದರು. ಈ ಅನ್ಯಾಯದ ಬಗ್ಗೆ ಮಾತನಾಡುವ ಧೈರ್ಯ 25 ಲೋಕಸಭಾ ಸದಸ್ಯರಿಗೂ ಇಲ್ಲ ಎಂದರು. ಇಂಥವರು ರಾಜ್ಯದ ಹಿತವನ್ನು ಕಾಪಾಡಲು ಸಾಧ್ಯವಿಲ್ಲ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು” ಎಂದು ಅಭಿಪ್ರಾಯಿಸಿದರು.

ಸೋಮಣ್ಣ ವಸತಿ ಸಚಿವರಾಗಿ ಸಂಪೂರ್ಣ ವಿಫಲ

“ಸೋಮಣ್ಣನವರು ಉತ್ತಮ ಸಂಸದನಾಗಿ ಕೆಲಸ ಮಾಡುವುದಾಗಿ ಹೇಳುತ್ತಾರೆ. ಆದರೆ ಅವರು ವಸತಿ ಸಚಿವರಾಗಿದ್ದಾಗ ತುಮಕೂರಿಗೆ ಎಷ್ಟು ಮನೆಗಳನ್ನು ನೀಡಿದಿರಿ ಎಂದು ಇಲ್ಲಿನ ಜನರಿಗೆ ದಾಖಲಾತಿ ನೀಡಿ. ನಿಮ್ಮ ಅವಧಿಯಲ್ಲಿ ಒಂದೂ ಮನೆಯನ್ನು ಕಟ್ಟಲಿಲ್ಲವೇಕೆ ಎಂಬ ನಮ್ಮ ಪ್ರಶ್ನೆಗೆ ಅವರ ಬಳಿ ಅಂದು ಉತ್ತರವಿರಲಿಲ್ಲ. ಆದ್ದರಿಂದ ವಸತಿ ಸಚಿವರಾಗಿ ವಿಫಲವಾಗಿರುವ ಸೋಮಣ್ಣನವರ ಉತ್ತಮವಾಗಿ ಕೆಲಸ ಮಾಡುತ್ತೇನೆ ಎನ್ನುವ ಮಾತು ಸಂಪೂರ್ಣ ಸುಳ್ಳು” ಎಂದರು.

ಸಚಿವರಾದ ಪರಮೇಶ್ವರ್, ಕೆ.ಎ ನ್.ರಾಜಣ್ಣ, ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಖರ ಗೌಡ, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X