ಕೃಷ್ಣಾ, ಭೀಮಾಗೆ ನೀರು ಹರಿಸಿ: ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Date:

Advertisements
  • ಉತ್ತರ ಕರ್ನಾಟಕದ ನೀರಿನ ಬವಣೆ ತಗ್ಗಿಸಲು ಮಹಾರಾಷ್ಟ್ರದ ಮೊರೆ ಹೋದ ಸರ್ಕಾರ
  • ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದು ನದಿಗಳಿಗೆ ನೀರು ಹರಿಸುವಂತೆ ಕೇಳಿಕೊಂಡ ಸಿಎಂ

ಬಿರು ಬೇಸಿಗೆಗೆ ತತ್ತರಿಸಿರುವ ಉತ್ತರ ಕರ್ನಾಟಕದ ನೀರಿನ ಬವಣೆ ನೀಗಿಸಲು ಕೃಷ್ಣಾ ಮತ್ತು ಭೀಮಾ ನದಿಗಳಿಗೆ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಹರಿಸುವಂತೆ ಮುಖ್ಯಮಂತ್ರಿ ಏಕನಾಥ್‌ ಶಿಂಧೆಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ವಾರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರನ್ನು ತಕ್ಷಣ ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ವಿನಂತಿಸುವುದಾಗಿ ಕೋರಿಕೊಂಡಿದ್ದಾರೆ.

ಮುಖ್ಯಮಂತ್ರಿಗಳ ಪತ್ರ ಸಾರಾಂಶ ಹೀಗಿದೆ:

Advertisements

ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಮಾರ್ಚ್ 2023 ರಿಂದ ತೀವ್ರ ಬೇಸಿಗೆಯಿಂದಾಗಿ ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿದೆ.

ಈ ಬೇಸಿಗೆಯಲ್ಲಿ ಕರ್ನಾಟಕ ಸರ್ಕಾರವು ಮಾನವ ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಂಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರು ಮತ್ತು ಬಿಡುಗಡೆ ಮಾಡಬೇಕೆಂದು ಕರ್ನಾಟಕ ಸರ್ಕಾರವು ಈ ಹಿಂದೆ ಮನವಿ ಮಾಡಿತ್ತು.

ಅದರಂತೆ ಮಹಾರಾಷ್ಟ್ರ ಸರ್ಕಾರ ಮನವಿ ಪರಿಗಣಿಸಿ ಮೇ 2023 ರ ಮೊದಲ ಹದಿನೈದು ದಿನಗಳಲ್ಲಿ ಕೃಷ್ಣಾ ನದಿಗೆ 1 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗಿದೆ. ಇದಕ್ಕಾಗಿ ನಾನು ಮಹಾರಾಷ್ಟ್ರ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ.ಸಿದ್ದರಾಮಯ್ಯ,ಶಿಂಧೆ ಪತ್ರ

ಈ ಸುದ್ದಿ ಓದಿದ್ದೀರಾ?:ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಿ: ಅಧಿಕಾರಿಗಳಿಗೆ ಸಿಎಂ ತಾಕೀತು

ಈ ನಡುವೆ ಕರ್ನಾಟಕದ ಉತ್ತರ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರ ಪರಿಸ್ಥಿತಿ ಇನ್ನೂ ಚಾಲ್ತಿಯಲ್ಲಿದೆ, ಹೀಗಾಗಿ ಜನ ಮತ್ತು ಜಾನುವಾರುಗಳ ಕುಡಿಯಲು ಹಾಗೂ ಗೃಹಬಳಕೆಗಾಗಿ ನೀರಿನ ಅವಶ್ಯಕತೆಯಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೂ ಮುಂಗಾರು ಆರಂಭವಾಗಿಲ್ಲ.

ಈ ಕಾರಣಗಳಿಂದಾಗಿ ಈ ಭಾಗದ ಜನರ ಅಗತ್ಯತೆ ಅನುಸಾರವಾಗಿ ಮರಳಿ ವಾರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2.00 ಟಿಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರನ್ನು ತಕ್ಷಣ ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ನಾನು ವಿನಂತಿಸುತ್ತೇನೆ, ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X