ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ರನ್ನು ಭೇಟಿಯಾದ ಎಂ ಪಿ ರೇಣುಕಾಚಾರ್ಯ

Date:

Advertisements

ಬಿಜೆಪಿಯ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಶುಕ್ರವಾರ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆ. ‘ಆಪರೇಷನ್ ಹಸ್ತ’ ಕುರಿತು ನಿತ್ಯ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ‌ದಿ‌ಢೀರ್‌ ಅಗಿ ರೇಣುಕಾಚಾರ್ಯ ಅವರು ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರೇಣುಕಾಚಾರ್ಯ, “ಯಾರು ಬಿಜೆಪಿ ಬಿಡುತ್ತಾರೋ ನನಗೆ ಗೊತ್ತಿಲ್ಲ. ನಾನು ಬಿಜೆಪಿಯಲ್ಲೇ ಇದ್ದೇನೆ. ಕಾಂಗ್ರೆಸ್ ಸೇರುವಂತೆ ಯಾರು ನನಗೆ ಆಫರ್ ಕೊಟ್ಟಿಲ್ಲ” ಎಂದರು.

“ಸಿಎಂ ಸರ್ಕಾರಿ ನಿವಾಸದಲ್ಲಿ 20 ನಿಮಿಷಗಳ ಕಾಲ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿರುವೆ. ಕ್ಷೇತ್ರದ ಸಂಬಂಧ ಚರ್ಚೆ ನಡೆಸಿದ್ದೇನೆ. ರಾಜಕೀಯವೇ ಬೇರೆ, ಪರಸ್ಪರ ವಿಶ್ವಾಸವೇ ಬೇರೆ. ರಾಜಕೀಯೇತರ ಹಲವು ವಿಚಾರಗಳನ್ನು ಸಿಎಂ, ಡಿಸಿಎಂ ಜೊತೆ ಚರ್ಚೆ ಮಾಡಲಾಗಿದೆ” ಎಂದು ಹೇಳಿದರು.

Advertisements
ರೇಣುಕಾಚಾರ್ಯ-1

“ಬರದ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಲು ಬಂದಿದ್ದೆ. ಹಾಗೆಯೇ ಇಂದು ವರಮಹಾಲಕ್ಷ್ಮಿ ಪೂಜೆ ಇದ್ದು, ಯಡಿಯೂರಪ್ಪ, ಕೃಷ್ಣಭೈರೇಗೌಡ ಅವರನ್ನೂ ಭೇಟಿಯಾಗಲಿದ್ದೇನೆ” ಎಂದರು.

“ನಾನು‌ ದಾವಣಗೆರೆ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ನಿಟ್ಟಿನಲ್ಲಿ ಪಕ್ಷದಲ್ಲಿ ಟಿಕೆಟ್‌ಗಾಗಿ ಪಕ್ಷದಲ್ಲಿ ಬೇಡಿಕೆ ಇಟ್ಟಿದ್ದೇನೆ. ಪಕ್ಷದ ತೀರ್ಮಾನ ಏನು ಎಂಬುದು ಇನ್ನೂ ತಿಳಿದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X