ಇಂದು 13 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ: ಎನ್‌ಡಿಎ ಅಥವಾ ಇಂಡಿಯಾ?

Date:

Advertisements

ಇಂದು ಏಳು ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬೀಳಲಿದೆ. ಲೋಕಸಭಾ ಚುನಾವಣೆಯ ನಂತರ ಮೊದಲ ಬಾರಿಗೆ ಚುನಾವಣಾ ಕಸರತ್ತು ನಡೆಯುತ್ತಿದ್ದು, ಇದೀಗ ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟದ ಪೈಕಿ ಯಾವ ಮೈತ್ರಿಕೂಟದ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಕಾದುನೋಡಬೇಕಿದೆ.

ಜುಲೈ 10ರಂದು ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ 13 ವಿಧಾನಸಭೆ ಸ್ಥಾನಗಳಿಗೆ ಉಪಚುನಾವಣೆ ನಡೆದಿದೆ.

ಬಿಹಾರದ ರುಪೌಲಿ, ಪಶ್ಚಿಮ ಬಂಗಾಳದ ರಾಯ್‌ಗಂಜ್, ರಣಘಾಟ್ ದಕ್ಷಿಣ, ಬಾಗ್ದಾ ಮತ್ತು ಮಾಣಿಕ್ತಾಲಾ, ತಮಿಳುನಾಡಿನ ವಿಕ್ರವಂಡಿ, ಮಧ್ಯಪ್ರದೇಶದ ಅಮರವಾರ, ಉತ್ತರಾಖಂಡದ ಬದರಿನಾಥ್ ಮತ್ತು ಮಂಗಳೌರ್, ಪಂಜಾಬ್‌ನ ಜಲಂಧರ್ ಪಶ್ಚಿಮ, ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್‌ಪುರ ಮತ್ತು ನಲಗಢದಲ್ಲಿ ಚುನಾವಣೆ ನಡೆದಿದ್ದು ಇವುಗಳಲ್ಲಿ ನಾಲ್ಕು ರಾಜ್ಯಗಳಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳು ಆಡಳಿತ ನಡೆಸುತ್ತಿದ್ದರೆ ಉಳಿದೆಡೆ ಬಿಜೆಪಿ ಅಥವಾ ಎನ್‌ಡಿಎ ಸರ್ಕಾರವಿದೆ.

Advertisements

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಎರಡಕ್ಕೂ ಪಾಲು ಹೆಚ್ಚಿದೆ. 2021ರ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಮಾಣಿಕ್ತಾಲಾ ಕ್ಷೇತ್ರವನ್ನು ಗೆದ್ದುಕೊಂಡರೆ, ಬಿಜೆಪಿಯು ರಾಯ್‌ಗಂಜ್, ರಣಘಾಟ್ ದಕ್ಷಿಣ್ ಮತ್ತು ಬಾಗ್ದಾದಲ್ಲಿ ಗೆದ್ದಿದೆ. ಅದಾದ ಬಳಿಕ ಬಿಜೆಪಿ ಶಾಸಕರು ಟಿಎಂಸಿಗೆ ಸೇರ್ಪಡೆಗೊಂಡಿದ್ದಾರೆ.

ಇದನ್ನು ಓದಿದ್ದೀರಾ?  ಜುಲೈ 10ರಂದು ಏಳು ರಾಜ್ಯಗಳ 13 ವಿಧಾನಸಭೆ ಸ್ಥಾನಗಳ ಉಪಚುನಾವಣೆ

ಹಿಮಾಚಲ ಪ್ರದೇಶದ ಡೆಹ್ರಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಸೇರಿದಂತೆ ಅನೇಕ ಅನುಭವಿಗಳು ಮತ್ತು ಕೆಲವು ಚೊಚ್ಚಲ ಅಭ್ಯರ್ಥಿಗಳ ಭವಿಷ್ಯವು ಇಂದು ನಿರ್ಧಾರವಾಗಲಿದೆ.

ಉತ್ತರಾಖಂಡದ ಮಂಗಳೌರ್‌ನಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಎಸ್‌ಪಿ ಶಾಸಕ ಸರ್ವತ್ ಕರೀಂ ಅನ್ಸಾರಿ ನಿಧನದ ಬಳಿಕ ನಡೆದ ಉಪಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈವರೆಗೆ ಕಾಂಗ್ರೆಸ್ ಅಥವಾ ಬಿಎಸ್‌ಪಿ ವಶದಲ್ಲಿರುವ ಮುಸ್ಲಿಂ ಮತ್ತು ದಲಿತರ ಪ್ರಾಬಲ್ಯವಿರುವ ಮಂಗಳೌರ್‌ ಕ್ಷೇತ್ರದಲ್ಲಿ ಬಿಜೆಪಿ ಎಂದಿಗೂ ಗೆಲುವು ಕಂಡಿಲ್ಲ.

ಪಂಜಾಬ್‌ನ ಜಲಂಧರ್ ಪಶ್ಚಿಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಭಗವಂತ್ ಮಾನ್‌ಗೆ ಅಗ್ನಿಪರೀಕ್ಷೆಯಾಗಿದೆ.

ಇದನ್ನು ಓದಿದ್ದೀರಾ? ಉಪಚುನಾವಣೆ | 13 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ; ಉತ್ತರಾಖಂಡದಲ್ಲಿ ಘರ್ಷಣೆ

ಈ ಹಿಂದೆ ಹಲವು ಬಾರಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪರವಾಗಿ ಸ್ಪರ್ಧಿಸಿ ಸ್ಥಾನವನ್ನು ಗೆದ್ದಿದ್ದ ಹಾಲಿ ಶಾಸಕ ಬಿಮಾ ಭಾರತಿ ಅವರ ರಾಜೀನಾಮೆಯಿಂದ ಬಿಹಾರದಲ್ಲಿ ಉಪಚುನಾವಣೆ ಅನಿವಾರ್ಯವಾಗಿತ್ತು. ಇತ್ತೀಚೆಗೆ ಆರ್‌ಜೆಡಿ ಟಿಕೆಟ್‌ನಲ್ಲಿ ಬಿಮಾ ಭಾರತಿ ಲೋಕಸಭೆ ಚುನಾವಣೆಯನ್ನು ಸ್ಪರ್ಧಿಸಿದ್ದಾರೆ.

ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 6ರಂದು ಡಿಎಂಕೆ ಶಾಸಕ ಎನ್ ಪುಗಜೆಂಧಿ ಅವರು ನಿಧನ ಹೊಂದಿದ ಕಾರಣ ಉಪಚುನಾವಣೆ ನಡೆದಿದೆ. ಮೂರು ಬಾರಿ ಕಾಂಗ್ರೆಸ್ ಶಾಸಕರಾಗಿದ್ದ ಕಮಲೇಶ್ ಶಾ ಅವರು ಮಾರ್ಚ್‌ನಲ್ಲಿ ಬಿಜೆಪಿಗೆ ಸೇರಿದ ಬಳಿಕ ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯ ಅಮರವಾರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿದೆ.

ಈ ಎಲ್ಲ ಕ್ಷೇತ್ರಗಳು ಎನ್‌ಡಿಎ ತೆಕ್ಕೆಗೆ ಸೇರಲಿದೆಯೇ ಅಥವಾ ಇಂಡಿಯಾ ಒಕ್ಕೂಟದ ಪಾಳಾಗಲಿದೆಯೇ ಕಾದು ನೋಡಬೇಕು.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X