ಮುಡಾ ಅಕ್ರಮ ತನಿಖೆ ಮಾಡಲು ನಿವೃತ್ತ ನ್ಯಾ. ಪಿ ಎನ್ ದೇಸಾಯಿ ಅನರ್ಹರು: ಆರ್‌ ಅಶೋಕ್

Date:

Advertisements

ಮುಡಾ ಅಕ್ರಮ ತನಿಖೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ರಚಿಸಿರುವ ಆಯೋಗದ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಮೂರು ವರ್ಷಗಳ ಕಾಲ ಯಾವುದೇ ಶಾಸನಬದ್ಧ ಸಮಿತಿ, ಸ್ವಾಯತ್ತ ಸಮಿತಿ, ನಿಯಂತ್ರಕ ಸಮಿತಿಗೆ ನೇಮಕ ಮಾಡದಂತೆ ನವೆಂಬರ್ 7 ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಮುಡಾ ಅಕ್ರಮ ತನಿಖೆ ಮಾಡಲು ಅನರ್ಹರು ಎಂಬ ವಿಷಯ ಬೆಳಕಿಗೆ ಬಂದಿದೆ ಎಂದು ಪ್ರತಿಪ್ರಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಆರ್‌ ಅಶೋಕ್‌ ಕೇಳಿದ ಪ್ರಶ್ನೆಗಳು ಇಲ್ಲಿವೆ…

1- ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು ತನಿಖಾ ಆಯೋಗದಲ್ಲಿ ಮುಂದುವರೆಯಲು ಅನರ್ಹರು ಎಂಬ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು ಯಾವಾಗ?

Advertisements

2- ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಈ ಕುರಿತಂತೆ ಸರ್ಕಾರಕ್ಕೆ ಪತ್ರ ಬರೆಯುವರೆಗೂ ಈ ವಿಷಯ ಸರ್ಕಾರದ ಗಮನಕ್ಕೆ ಬಂದಿರಲಿಲ್ಲವೆ? ಅಥವಾ ಗಮನಕ್ಕೆ ಬಂದಿದ್ದರೂ ಕಾನೂನು ಬಾಹಿರವಾಗಿ ಮುಂದುವರಿಸಲಾಯಿತೆ?

3- ಅವರ ಅನರ್ಹತೆ ಬಗ್ಗೆ ನ್ಯಾಯಮೂರ್ತಿಗಳು ಸ್ವತಃ ತಾವೇ ಸರ್ಕಾರದ ಗಮನಕ್ಕೆ ತಂದು, ತನಿಖಾ ಆಯೋಗದಿಂದ ಹಿಂದೆ ಸರಿಯಬೇಕಾಗಿತ್ತು. ಆದರೆ ಅನರ್ಹತೆ ಆದೇಶ ಬಂದ 5 ದಿನಗಳ ನಂತರ, ಅಂದರೆ ನವೆಂಬರ್ 12ರಂದು ಅವರು ಮುಡಾ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ. ಇದು ತಪ್ಪಲ್ಲವೇ?

4- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳು ಸುರಕ್ಷಿತವಾಗಿದೆಯೇ?

5- ಸ್ವತಃ ನಾಡಿನ ಮುಖ್ಯಮಂತ್ರಿಗಳು ಮತ್ತು ಅವರ ಕುಟುಂಬ ಸದಸ್ಯರು ಆರೋಪಿಗಳಾಗಿರುವ, ಸುಮಾರು 4,000 ಕೋಟಿ ರೂಪಾಯಿ ಮೊತ್ತದ ಬೃಹತ್ ಭ್ರಷ್ಟಚಾರ ನಡೆದಿದ ಎನ್ನಲಾದ ಮುಡಾ ಹಗರಣದ ತನಿಖೆಯಲ್ಲಿ ಸರ್ಕಾರ ಎಷ್ಟು ಗಂಭೀರವಾಗಿದೆ ಎನ್ನುವುದಕ್ಕೆ ಈ ಎಡವಟ್ಟು ನಿದರ್ಶನವಲ್ಲವೇ?

ಸರ್ಕಾರ ಈ ಕೊಡಲೇ ತನಿಖಾ ಆಯೋಗಕ್ಕೆ ನೀಡಿರುವ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ವಶ ಪಡಿಸಿಕೊಳ್ಳಬೇಕು. ತನಿಖಾ ಆಯೋಗದ ಮುಖ್ಯಸ್ಥರಿಗೆ ನವೆಂಬರ್ 7 ರ ನಂತರ ನೀಡಲಾಗಿರುವ ಎಲ್ಲ ಸಂಬಳ, ಸೌಲಭ್ಯಗಳನ್ನು ಹಿಂಪಡೆಯಬೇಕು. ಅನರ್ಹರಾಗಿದ್ದೂ ಸಹ ತನಿಖಾ ಆಯೋಗದಲ್ಲಿ ಮುಂದುವರೆದ ನಿವೃತ್ತ ನ್ಯಾಯಮೂರ್ತಿಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮತ್ತು ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಬೇಕು” ಎಂದು ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X