ನಿತೀಶ್ ಕುಮಾರ್‌ ಅವರನ್ನು ‘ಮಿಮಿಕ್’ ಮಾಡಿದ ಆರ್‌ಜೆಡಿ ಎಂಎಲ್‌ಸಿ ಸದನದಿಂದ ಉಚ್ಚಾಟನೆ

Date:

Advertisements

ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಅನುಕರಣೆ ಮಾಡಿದ್ದಕ್ಕಾಗಿ ಆರ್‌ಜೆಡಿ ಎಂಎಲ್‌ಸಿ ಸುನೀಲ್ ಸಿಂಗ್ ಅವರನ್ನು ಶುಕ್ರವಾರ ಸದನದಿಂದ ಉಚ್ಚಾಟಿಸಲಾಗಿದೆ. ಕೌನ್ಸಿಲ್‌ನ ನೈತಿಕ ಸಮಿತಿಯ ಶಿಫಾರಸಿನ ಆಧಾರದ ಧ್ವನಿ ಮತದ ಮೂಲಕ ಈ ಉಚ್ಚಾಟನೆಯನ್ನು ಅಂಗೀಕರಿಸಲಾಗಿದೆ.

ಫೆಬ್ರವರಿ 13ರಂದು ಕೌನ್ಸಿಲ್ ಕಲಾಪದಲ್ಲಿ ಸುನೀಲ್ ಸಿಂಗ್ ಅವರು ತಮ್ಮ ಭಾಷಣದಲ್ಲಿ ನಿತೀಶ್ ಕುಮಾರ್ ಅವರ ನಡವಳಿಕೆಯನ್ನು ಅನುಕರಿಸಲು ಪ್ರಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ಆದರೆ “ನಾನು ಎಂದಿಗೂ ಮುಖ್ಯಮಂತ್ರಿಯನ್ನು ಅನುಕರಣೆ ಮಾಡಿಲ್ಲ” ಎಂದು ಸಿಂಗ್ ಹೇಳಿದ್ದಾರೆ.

ಇನ್ನು ಸದನದಿಂದ ಸುನೀಲ್ ಸಿಂಗ್ ಉಚ್ಚಾಟನೆಯನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕಿ ರಾಬ್ರಿ ದೇವಿ, “ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕರಾಳ ಅಧ್ಯಾಯ” ಎಂದು ಕರೆದಿದ್ದಾರೆ. ಇನ್ನು ರಾಬ್ರಿ ದೇವಿ ಸೇರಿ ಆರ್‌ಜೆಡಿ ಶಾಸಕರು ಕಪ್ಪು ಪಟ್ಟಿ ಧರಿಸಿ ಸದನಕ್ಕೆ ಆಗಮಿಸಿದರು.

Advertisements

ತನ್ನ ಉಚ್ಚಾಟನೆಯ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಸುನೀಲ್ ಸಿಂಗ್, “ನಾನು ಎಂದಿಗೂ ಸಿಎಂ ನಿತೀಶ್ ಅವರ ಅನುಕರಣೆ ಮಾಡಿಲ್ಲ. ಒಂದು ವೇಳೆ ಅನುಕರಣೆ ಮಾಡಿದರೂ ಅದು ಎರಡೂ ಸದನಗಳ ಸದಸ್ಯತ್ವವನ್ನು ಕಸಿದುಕೊಳ್ಳುವ ಅಪರಾಧವಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಕೇಂದ್ರ ಬಜೆಟ್ | ಬಿಜೆಪಿ ಮಿತ್ರರಾದ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ತಮ್ಮ ರಾಜ್ಯಕ್ಕೆ ಗಳಿಸಿದ್ದೇನು?

“ನಿತೀಶ್ ಕುಮಾರ್ ಅವರು ನನ್ನಂತಹವರಿಗೆ ಪರಿಷತ್ತಿನಲ್ಲಿ ನಾನು ನಿಮ್ಮನ್ನು ನಾಶಪಡಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಅವರು ಮಹಿಳೆಯರಿಗೆ ಅಗೌರವ ತೋರುವ ಮುಖ್ಯಮಂತ್ರಿಯಾಗಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಹಲವಾರು ಭ್ರಷ್ಟಾಚಾರ ಪ್ರಕರಣಗಳು ನಡೆದಿದೆ” ಎಂದು ಆರೋಪಿಸಿದರು.

ಇನ್ನು ಮತ್ತೋರ್ವ ಆರ್‌ಜೆಡಿ ಎಂಎಲ್‌ಸಿ ಮೊಹಮ್ಮದ್ ಖಾರಿ ಸೊಹೈಬ್ ಕೂಡ ಸಿಎಂ ನಿತೀಶ್ ಅನುಕರಿಸುವ ಪ್ರಯತ್ನಿಸಿದ್ದು ಬಳಿಕ ಕ್ಷಮೆಯಾಚಿಸಿದ್ದಾರೆ. ಅದಾದ ಬಳಿಕ ಸೊಹೈಬ್‌ ಅವರನ್ನು ವಿಧಾನ ಪರಿಷತ್ತಿನಿಂದ ಎರಡು ದಿನಗಳ ಅಮಾನತುಗೊಳಿಸಲಾಗಿದೆ. ಆದರೆ ಸುನೀಲ್ ಸಿಂಗ್ ಕ್ಷಮೆ ಕೇಳಲು ನಿರಾಕರಿಸಿದ್ದರು.

ರಜಪೂತ ನಾಯಕ ಸುನೀಲ್ ಸಿಂಗ್ ಎರಡು ದಶಕಗಳಿಂದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಸಿಂಗ್ ಬಿಹಾರ ರಾಜ್ಯ ಸಹಕಾರ ಮಾರುಕಟ್ಟೆ ಒಕ್ಕೂಟದ ಮುಖ್ಯಸ್ಥರೂ ಆಗಿದ್ದಾರೆ.

ಮುಂಗಾರು ಅಧಿವೇಶನದ ಅಂತಿಮ ದಿನದಂದು ಈ ನಿರ್ಧಾರಕ್ಕೆ ಬಂದಿದ್ದು, ಸದನ ಮತ್ತೆ ಸೇರಿದಾಗ ಸಿಂಗ್ ಅವರ ಅಮಾನತು ಜಾರಿಗೆ ಬರಲಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X