ಮೂವರು ಸಚಿವರಿಗೆ ಕೊಠಡಿ ಹಂಚಿಕೆ; ಸಿಎಂ ಪರಿಹಾರ ನಿಧಿಗೆ ಹೊಸ ಕಾರ್ಯದರ್ಶಿ ನೇಮಕ

Date:

Advertisements
  • ಮೂವರು ನೂತನ ಸಚಿವರಿಗೆ ಶಕ್ತಿಕೇಂದ್ರದಲ್ಲಿ ಕೊಠಡಿ ಹಂಚಿಕೆ
  • ಮುಖ್ಯಮಂತ್ರಿ ಪರಿಹಾರ ನಿಧಿಗೆ ನೂತನ ಜಂಟಿ ಕಾರ್ಯದರ್ಶಿ ನೇಮಕ

ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಶಕ್ತಿಕೇಂದ್ರ ವಿಧಾನಸೌಧ ಕಾರ್ಯಾರಂಭಕ್ಕೆ ತಯಾರಿಯಾಗುತ್ತಿದೆ. ಹೀಗಾಗಿ ಆಡಳಿತ ವರ್ಗದಲ್ಲಿ ಬದಲಾವಣೆ ಮತ್ತು ನೂತನ ಸಚಿವರಿಗೆ ಕೊಠಡಿ ಹಂಚಿಕೆ ಕಾರ್ಯಗಳು ಆರಂಭವಾಗಿವೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸಹೋದ್ಯೋಗಿಗಳಾದ ಕೆಜೆ ಜಾರ್ಜ್, ಎಂಬಿ ಪಾಟೀಲ್ ಹಾಗೂ ಜಮೀರ್ ಅಹ್ಮದ್ ಅವರುಗಳಿಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.

ಹಿರಿಯ ಸಚಿವ ಕೆಜೆ ಜಾರ್ಜ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 317 ಮತ್ತು 317 ಎ, ಎಂಬಿ ಪಾಟೀಲ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 344 ಮತ್ತು 344 ಎ ಹಾಗೂ ಬಿ ಜೆಡ್ ಜಮೀರ್‌ ಅಹ್ಮದ್‌ಖಾನ್ ಅವರಿಗೆ ವಿಕಾಸಸೌಧದ ಮೊದಲನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 143 ಮತ್ತು 146 ಹಂಚಿಕೆ ಮಾಡಿದೆ.

Advertisements

ಸಿಎಂ ಪರಿಹಾರ ನಿಧಿ ಹಾಗೂ ಸಿಎಂ ವಿಶೇಷ ಕರ್ತವ್ಯಾಧಿಕಾರಿಗಳ ನೇಮಕ

ಇದರ ಜೊತೆಜೊತೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯ ಜಂಟಿ ಕಾರ್ಯದರ್ಶಿ ಹುದ್ದೆಗೆ ಪಿಎ ಗೋಪಾಲ್ ಅವರನ್ನು ಗುತ್ತಿಗೆ ಆಧಾರದಲ್ಲಿ ಸರ್ಕಾರ ನೇಮಿಸಿದೆ.

ಈ ಸುದ್ದಿ ಓದಿದ್ದೀರಾ?:ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಪರೋಕ್ಷ ಚಾಲನೆ ನೀಡಿದ ರಾಜ್ಯ ಸರ್ಕಾರ

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಜಂಟಿ ಕಾರ್ಯದರ್ಶಿಯಾಗಿದ್ದ ಗೋಪಾಲ್, ಸಿದ್ದರಾಮಯ್ಯ, ಎಚ್ ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ, ಸರ್ಕಾರದಲ್ಲಿಯೂ ಇದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.

ಇನ್ನು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಪೌರಾಡಳಿತ ಇಲಾಖೆಯಲ್ಲಿದ್ದ ಡಾ. ಕೆ ವೈಷ್ಣವಿ ಅವರನ್ನು ನಿಯೋಜನೆಯ ಮೇರೆಗೆ ನೇಮಕ ಮಾಡಲಾಗಿದೆ. ಇವರ ಜೊತೆಗೆ ಗುತ್ತಿಗೆ ಆಧಾರದಲ್ಲಿ ಕೆಎನ್ ವಿಜಯ ಅವರನ್ನೂ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ನೇಮಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X