ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ 15,500 ಕೋಟಿ ರೂ. ಅವ್ಯವಹಾರ: ಆರೋಪ

Date:

ರಾಜ್ಯಾದ್ಯಂತ ಮನೆಗಳ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್‌ ಮೀಟರ್‌ ಅಳವಡಿಸುವ ಟೆಂಡರ್‌ನಲ್ಲಿ ಸುಮಾರು 15,568 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಡಾ. ಸಿ.ಎನ್‌ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಕೆಇಆರ್‌ಸಿ ನಿಯಮದಲ್ಲಿ ಸ್ಮಾರ್ಟ್‌ ಮೀಟರ್ ಅಳವಡಿಕೆ ಕಡ್ಡಾಯವಲ್ಲ. ಆದರೂ, ಎಲ್ಲ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್‌ ಮೀಟರ್ ಅಳವಡಿಸಲು ಇಂಧನ ಇಲಾಖೆ ಮುಂದಾಗಿದೆ. ಬೆಸ್ಕಾಂ ಮತ್ತು ರಾಜ್ಯದ ಇತರ ಎಸ್ಕಾಂಗಳು ಕೆಇಆರ್‌ಸಿ ನಿಯಮಗಳನ್ನು ಉಲ್ಲಂಘಿಸುತ್ತಿವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಟೆಂಡರ್‌ ಕರೆದಾಗ ಕೆಟಿಪಿಪಿ ಕಾಯ್ದೆಯಡಿ ಬಿಡ್ ಸಾಮರ್ಥ್ಯವನ್ನು ತಿಳಿಸಿಲ್ಲ. ಬಿಡ್‌ ಸಾಮರ್ಥ್ಯವು 6,800 ಕೋಟಿ ರೂ. ಇರಬೇಕಿತ್ತು. ವ್ಯವಹಾರವು 1,920 ಕೋಟಿ ರೂ. ಇರಬೇಕಿತ್ತು. ಆದರೆ, ಬರೀ 107 ಕೋಟಿ ರೂ. ಎಂದು ಉಲ್ಲೇಖಿಸಲಾಗಿದೆ. ಆ ಬಳಿಕ, ಅಂದಾಜು ವೆಚ್ಚ 571 ಕೋಟಿ ರೂ. ಎಂದು ತಿದ್ದಲಾಗಿದೆ. ಟೆಂಟರ್‌ನ ಒಟ್ಟು ಮೊತ್ತ ತಿಳಿಸಿದೆ, ಬಿಡ್‌ ಕರೆಯಲಾಗಿದೆ. ಬಿಡ್ಡಿಂಗ್ ಸಾಮರ್ಥ್ಯವನ್ನು ಉಲ್ಲೇಖಿಸದೇ ಇರುವುದೇ ಆರಂಭದ ಹಗರಣ” ಎಂದು ಆರೋಪಿಸಿದ್ದಾರೆ.

ಈ ವರದಿ ಓದಿದ್ದೀರಾ?: ಮಲ್ಪೆ ಮೀನು ಪೇಟೆ ಪ್ರಕರಣ | ಕರಾವಳಿಯ (ಅ)ನ್ಯಾಯ ನಿರ್ಣಯದ ನಮೂನೆ

“ಯಾವುದೇ ಗುತ್ತಿಗೆಯನ್ನು ಕಪ್ಪುಪಟ್ಟಿಗೆ ಸೇರಿದ ಕಂಪನಿಗೆ ಕೊಡುವಂತಿಲ್ಲ. ಆದರೆ, ಉತ್ತರ ಪ್ರದೇಶದಲ್ಲಿ ಕಪ್ಪುಪಟ್ಟಿಗೆ ಸೇರಿರುವ ಬಿಸಿಐಟಿಎಸ್‌ ಕಂಪನಿಯನ್ನು ಇಲ್ಲಿ ಬಿಡ್‌ ಮಾಡಲು ಪರಿಗಣಿಸಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ, ಬೃಹತ್ ಪ್ರಮಾಣದ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಬಿಡ್‌ ಮಾಡುವ ಕಂಪನಿಗೆ 1 ಲಕ್ಷ ಸ್ಮಾರ್ಟ್ ಮೀಟರ್ ಅಳವಡಿಸಿದ ಅನುಭವ ಇರಬೇಕು. ಆದರೆ, 10 ಲಕ್ಷ ಸಾಮಾನ್ಯ ಮೀಟರ್ ಅಳವಡಿಕೆ ಮಾಡಿರುವುದನ್ನೇ ಮಾನದಂಡ ಮಾಡಿಕೊಳ್ಳಲಾಗಿದೆ” ಎಂದು ದೂರಿದ್ದಾರೆ.

“ಬಿಡ್‌ ಕರೆಯುವಲ್ಲಿ ಕೆಟಿಪಿಪಿ ಕಾಯ್ದೆ ಮತ್ತು ಕೇಂದ್ರ ಸರ್ಕಾರದ ನಿಯಮಾವಳಿಗಳನ್ನು ಕಡೆಗಣಿಸಲಾಗಿದೆ. ಸ್ಮಾರ್ಟ್ ಮೀಟರ್ ತಯಾರಿಸದ, ಅಳವಡಿಸದ, ಕೇವಲ ಡಿಜಿಟಲ್ ಮೀಟರ್ ಅಳವಡಿಸಿರುವ ಕಂಪನಿಯನ್ನು ಬಿಡ್‌ಗೆ ಪರಿಗಣಿಸಲಾಗಿದೆ. ಪ್ರಿ-ಬಿಡ್‍ನಲ್ಲಿ ರಾಜಶ್ರೀಯನ್ನು ಯಾಕೆ ಪರಿಣಗಿಣಿಸಿಲ್ಲ. ಅರ್ಹರನ್ನು ಹೊರಗಿಟ್ಟು, ಫೋನ್ ತಯಾರಕರನ್ನು ಆಯ್ಕೆ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಕಾಂಗ್ರೆಸ್‌ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶ ಮತ್ತು ತೆಲಂಗಾಣ ಹಾಗೂ ಪಕ್ಕದ ಕೇರಳದಲ್ಲಿ ಕಡಿಮೆ ಮೊತ್ತದಲ್ಲಿ ಸ್ಮಾರ್ಟ್‌ ಮೀಟರ್ ಅಳವಡಿಸಲಾಗಿದೆ. ಈ ರಾಜ್ಯಗಳಲ್ಲಿ ಸರಿಸುಮಾರು ಪ್ರತಿ ಮೀಟರ್‌ಗೆ 7,740 ರೂ. ವೆಚ್ಚ ಮಾಡಲಾಗಿದೆ. ಆದರೆ, ಕರ್ನಾಟಕದಲ್ಲಿ ಪ್ರತಿ ಮೀಟರ್‌ಗೆ 17,000 ರೂ. ನಿಗದಿಮಾಡಲಾಗಿದೆ” ಎಂದು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...

ಕರ್ನಾಟಕದ 85% ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಅಳತೆಯಲ್ಲಿ ಮೋಸ

ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಇಂಧನ ಅಳತೆಯಲ್ಲಿ ಮೋಸವಾಗುತ್ತಿದೆ. ಇದನ್ನು ತಡೆಗಟ್ಟಲು...

ಪೆಟ್ರೋಲ್ ಹಾಕಿಸುವ ಮುನ್ನ ಎಚ್ಚರ: ಶೇ 85ಕ್ಕೂ ಹೆಚ್ಚು ಬಂಕ್‌ಗಳಲ್ಲಿ ಇಂಧನ ಕಡಿತ; ರಾಜ್ಯ ಸರ್ಕಾರದ ತಪಾಸಣೆಯಲ್ಲಿ ಬಟಾಬಯಲು

ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಇಂಧನ ವಿತರಿಸುವ ಶೇ 85ಕ್ಕೂ...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ...