ಅಧಿವೇಶನ | ನೀರಾವರಿ ಇಲಾಖೆಯಿಂದ 4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ: ಡಿಕೆ ಶಿವಕುಮಾರ್

Date:

Advertisements
  • ಏತ ನೀರಾವರಿ ಯೋಜನೆಗೆ ವಿದ್ಯುತ್​ ಬಳಕೆ
  • ‘ಸೋಲಾರ್ ಅಳವಡಿಸುವ ಬಗ್ಗೆ ಯೋಚನೆ’

ರಾಜ್ಯ ನಿರಾವರಿ ಇಲಾಖೆ ನಾಲ್ಕು ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡಿದೆ ಎಂದು ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಮಂಗಳವಾರ ನಡೆದ ಏಳನೇ ದಿನದ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ಏತ ನೀರಾವರಿ ಯೋಜನೆಗೆ ಉಚಿತ ವಿದ್ಯುತ್ ಕೊಡಿ ಎಂದು ಕೇಳಿದರು.

ಇದಕ್ಕೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್​ “ಏತ ನೀರಾವರಿ ಯೋಜನೆಗೆ ಬಳಕೆ ಮಾಡಿಕೊಳ್ಳುತ್ತಿರುವ ವಿದ್ಯುತ್​ಗೆ ಬಿಲ್ ಕಟ್ಟಿಲ್ಲ. ಕೋಟಿ ಕೋಟಿ ಹಣ ಬಾಕಿ ಇಟ್ಟುಕೊಂಡಿದ್ದಾರೆ” ಎಂದರು.

Advertisements

“ತುಮಕೂರು ಗ್ರಾಮಾಂತರದಲ್ಲಿ ಆರು ಕೋಟಿ ರೂ. ಹಣ ಬಾಕಿ ಉಳಿದಿದೆ. ಚನ್ನಪಟ್ಟಣದಲ್ಲಿ ಐದು ಕೋಟಿ ರೂ. ಹಣ ಬಾಕಿ ಇದೆ. ತುಮಕೂರು ಗ್ರಾಮಾಂತರ, ಚನ್ನಪಟ್ಟಣದಲ್ಲಿ ಕೆರೆ ತುಂಬಿಸಲು ಏತ ನೀರಾವರಿ ಯೋಜನೆ ಬೇಕು ಅಂತಾರೆ. ಆದರೆ ಯಾರು ಸಹ ಇಂಧನ ಇಲಾಖೆಗೆ ಹಣ ಕೊಡುತ್ತಿಲ್ಲ. ಹೀಗಾಗಿ ಇಂಧನ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆಗಳ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ” ಎಂದು ಹೇಳಿದರು.

ಇಂಧನ ಸಚಿವ ಕೆ ಜೆ ಜಾರ್ಜ್ ಮಾತನಾಡಿ, “ನಮ್ಮ ಇಲಾಖೆಗೆ ಬರಬೇಕಾದ ಬಾಕಿ ಹಣ ಜಾಸ್ತಿ ಇದೆ. ಯಾರೂ ಸಹ ಇಂಧನ ಇಲಾಖೆಗೆ ಪಾವತಿಸದೇ ಬಾಕಿ ಉಳಿದಿರುವ ಹಣ ನೀಡಿಲ್ಲ. ಹೀಗಾಗಿ ಸೋಲಾರ್ ಅಳವಡಿಸುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಆರ್ಥಿಕವಾಗಿ ಇದು ದುಬಾರಿ ಸಹ ಅಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X