‘ಜಾತಿಗಣತಿಯಿಂದ ದೇಶದ ಏಕತೆಗೆ ಅಪಾಯ’ ಎಂದ ಆರ್‌ಎಸ್‌ಎಸ್‌!

Date:

Advertisements

2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಜಾತಿಗಣತಿಯ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ನಡುವೆ ಜಾತಿಗಣತಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಆರ್‌ಎಸ್‌ಎಸ್‌, “ಜಾತಿಗಣತಿಯಿಂದ ದೇಶದ ಏಕತೆಗೆ ಅಪಾಯವಿದೆ” ಎಂದು ತಿಳಿಸಿದೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿದರ್ಭ ಸಹ ಸಂಘಚಾಲಕ ಶ್ರೀಧರ ಗಾಡ್ಗೆ, “ಜಾತಿ ಗಣತಿಯಿಂದ ಏನನ್ನೂ ಸಾಧಿಸಲಾಗದು. ಅದರ ಅವಶ್ಯಕತೆಯೂ ಇಲ್ಲ. ಅದರಿಂದ ಯಾವ ಲಾಭವೂ ಇಲ್ಲ. ನಮಗೆ ಅದರಿಂದ ಹಾನಿ ಮಾತ್ರ ಕಾಣುತ್ತಿದೆ” ಎಂದು ಹೇಳಿದ್ದಾರೆ.

“ಜಾತಿ ಆಧಾರಿತ ಜನಗಣತಿಯಿಂದ ಒಂದು ನಿರ್ದಿಷ್ಟ ಜಾತಿಯ ಜನಸಂಖ್ಯೆಯ ದತ್ತಾಂಶ ಒದಗಿಸಬಹುದು. ಇಂತಹ ಕಸರತ್ತು, ರಾಜಕೀಯವಾಗಿ ಕೆಲವು ವ್ಯಕ್ತಿಗಳಿಗೆ ಮಾತ್ರ ಲಾಭವಾಗಬಹುದು. ಆದರೆ, ಇದು ಸಾಮಾಜಿಕವಾಗಿ ಮತ್ತು ರಾಷ್ಟ್ರೀಯ ಏಕತೆಯ ದೃಷ್ಟಿಯಿಂದ ಒಳಿತಲ್ಲ” ಎಂದು ತಿಳಿಸಿದರು.

Advertisements

“ನಮಗೆ ಜಾತಿ ಗಣತಿಯ ಅವಶ್ಯಕತೆ ಇಲ್ಲವೆನಿಸುತ್ತದೆ. ಇದಕ್ಕೆ ಬೇರೆ ಕಾರಣವೇನಿಲ್ಲ, ಜಾತಿ ಆಧಾರಿತ ಸಮೀಕ್ಷೆಯಿಂದ ನಾವು ಏನು ಸಾಧಿಸಬಹುದು? ಇದು ತಪ್ಪು. ಅಸಮಾನತೆ, ದ್ವೇಷ, ಜಗಳ ಇರಬಾರದು ಎಂಬುದು ನಮ್ಮ ಸ್ಪಷ್ಟ ನಿಲುವು” ಎಂದು ಶ್ರೀಧರ ಗಾಡ್ಗೆ ತಿಳಿಸಿದರು.

ಅಮಿತ್ ಶಾ ಹೇಳಿಕೆಯನ್ನು ಪ್ರಸ್ತಾಪಿಸಿದ ಗಾಡ್ಗೆ, “ರಾಜಕೀಯ ಪಕ್ಷಗಳು ತಮ್ಮದೇ ಆದ ನಿಲವು ಹೊಂದಿರಬಹುದು. ಆದರೆ ಆರ್‍‌ಎಸ್‌ಎಸ್‌ ಜಾತಿ ಆಧರಿತ ಗಣತಿಯನ್ನು ಖಂಡತುಂಡವಾಗಿ ವಿರೋಧಿಸುತ್ತದೆ. ಆರ್‍‌ಎಸ್‌ಎಸ್‌ ಸಾಮಾಜಿಕ ಸಮಾನತೆಯನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ನಮ್ಮ ದೇಶದಲ್ಲಿ ಜಾತಿ ಹೆಸರಿನಲ್ಲಿ ಒಡಕು ಮೂಡಿಸಲಾಗುತ್ತದೆ. ಸಮಾಜದಲ್ಲಿ ಜಾತಿ ಎನ್ನುವುದು ಅಸಮಾನತೆಯ ಮೂಲವಾದರೆ, ಜಾತಿಗಣತಿಯಂಥ ಕ್ರಮಗಳಿಂದ ಇದು ಮತ್ತಷ್ಟು ಉಲ್ಬಣಗೊಳ್ಳಲಿದೆ ಎನ್ನುವುದು ನಮ್ಮ ಸ್ಪಷ್ಟ ನಿಲುವು” ಎಂದು ಆರ್‌ಎಸ್‌ಎಸ್‌ ಮುಖಂಡ ಶ್ರೀಧರ ಗಾಡ್ಗೆ ತಿಳಿಸಿದ್ದಾರೆ.

ಮಹಾರಾಷ್ಟ್ರದ ಬಿಜೆಪಿ ಮತ್ತು ಶಿವಸೇನೆ ಶಾಸಕರು ಆರ್‌ಎಸ್‌ಎಸ್‌ ಕೇಂದ್ರ ಕಚೇರಿಗೆ ಮಂಗಳವಾರ ಭೇಟಿ ನೀಡಿ, ಸಭೆ ನಡೆಸಿದ ಬಳಿಕ ಈ ಹೇಳಿಕೆಯನ್ನು ಶ್ರೀಧರ ಗಾಡ್ಗೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಜಾತಿ ಗಣತಿಯಿಂದ ದೇಶಕ್ಕೆ ಯಾವ ಅಪಾಯವೂ ಇಲ್ಲ ಅಪಾಯ ಇರುವುದು ಸಂಘದ ಮನುವಾದಿ ಸಿದ್ಧಾಂತಗಳಿಗೆ,,, ಬಹುಸಂಖ್ಯೆಯ ದಲಿತ ಹಿಂದುಳಿದ ಮತ್ತು ತಳವರ್ಗದವರು ಜನಸಂಖ್ಯೆ ಅನುಪಾತದಲ್ಲಿ ರಾಜಕೀಯ ಅಧಿಕಾರ ಮತ್ತು ಸಂಪತ್ತಿನ ಹಂಚಿಕೆ ಬೇಡಿಕೆ ಸುರುವಾದರೆ,, ಇಲ್ಲಿಯವರೆಗೆ ಈ ವರ್ಗಗಳ ಮೇಲಿದ್ದ ತಮ್ಮ ನಿಯಂತ್ರಣ ಎಲ್ಲಿ ಕೈತಪ್ಪುವುದೋ ಅನ್ನುವ ಭಯ,,, ದೇಶದ ಒಗ್ಗಟ್ಟು ಅರ್ಥವೇನು,,ಬಲಿಷ್ಠ ಸಮುದಾಯಗಳು ಜನಸಂಖ್ಯೆಯಲ್ಲಿ ಕಡಿಮೆ ಇದ್ದರೂ ಎಲ್ಲಾ ಅಧಿಕಾರ ಸಂಪತ್ತು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ ಅದ್ಕೆ ಸಂಚಕಾರ ಬರುವ ಭಯ,,ಸಂಘ ಯಾವಾಗಲೂ ಮೇಲ್ವರ್ಗದವರ ಪರವಾಗಿ ಇರುವುದು ಗುಟ್ಟೇನಲ್ಲ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X