‘ಶ್ರೀರಾಮ’ನ ತೊಡೆ ಏರಿ ನಿಂತ ‘ಸಲಗ’; ರಾಜ್ಯಾದ್ಯಂತ ವ್ಯಾಪಕ ಆಕ್ರೋಶ

Date:

  • ರಾಮನ ಹೆಸರೇಳಿ ಮತ ಕೇಳುವ ಬಿಜೆಪಿ ಶಾಸಕನಿಂದ ಉದ್ಧಟತನ
  • ‘ಶ್ರೀರಾಮನವಮಿ’ ದಿನದಂದು ರಾಮನನ್ನೇ ತುಳಿದ ಶರಣು ಸಲಗರ

ಶ್ರೀರಾಮನ ಹೆಸರು ಹೇಳಿಕೊಂಡು ಪ್ರತಿ ಚುನಾವಣೆಯಲ್ಲಿ ಮತ ಕೇಳುವ ಬಿಜೆಪಿ ಶಾಸಕರೊಬ್ಬರು ಶ್ರೀರಾಮ ನವಮಿ ದಿನದಂದೇ ಶ್ರೀರಾಮನನ್ನು ಕಾಲಿನಲ್ಲಿ ತುಳಿದು ಉದ್ಧಟತನ ಮೆರೆದಿರುವ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ.

ಬೀದರ್ ಜಿಲ್ಲೆ ಬಸವ ಕಲ್ಯಾಣದಲ್ಲಿ ಶ್ರೀರಾಮನವಮಿ ಹಾಗೂ ಶೋಭಾ ಯಾತ್ರೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಚಾಲನೆ ನೀಡಲು ಸ್ಥಳಕ್ಕೆ ಆಗಮಿಸಿದ್ದ ಸ್ಥಳೀಯ ಬಿಜೆಪಿ ಶಾಸಕ ಶರಣು ಸಲಗರ ಶ್ರೀರಾಮ ಮೂರ್ತಿಯ ತೊಡೆಯ ಮೇಲೆ ನಿಂತುಕೊಂಡು ಹೂವಿನ ಹಾರ ಹಾಕಿದ್ದಾರೆ.

ದೇಶಾದ್ಯಂತ ಮರ್ಯಾದಾ ಪುರುಷೋತ್ತಮನೆಂದು ಹೆಸರಾಗಿರುವ ಶ್ರೀರಾಮನಿಗೆ ತಮ್ಮ ಹುಟ್ಟಹಬ್ಬದಂದೇ ಬಿಜೆಪಿಗರೇ ಮರ್ಯಾದೆ ತೆಗೆದಿದ್ದಾರೆ. ಸಾಲದು ಎಂದು ಅದನ್ನು ಸ್ವತಃ ಶರಣು ಸಲಗರ ಅವರೇ ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡು ಶ್ರೀರಾಮನ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಶ್ರೀರಾಮನವಮಿ | ಬಂಗಾಳ, ಗುಜರಾತ್‌, ಮಹಾರಾಷ್ಟ್ರದಲ್ಲಿ ಗಲಭೆ

ಬಸವಕಲ್ಯಾಣದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ತಮ್ಮ ಫೇಸ್‌ಬುಕ್‌ನಲ್ಲಿ‌ ಪೋಸ್ಟ್ ಮಾಡಿ ‘ಇದು ಹಿಂದೂ ಸಂಸ್ಕೃತಿನಾ’ ಎಂದು ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ.

ಸಾರ್ವಜನಿಕರು ಹಾಗೂ ಶ್ರೀರಾಮನ ಭಕ್ತರು ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಲ್ಲದೇ, ಸಾಮಾಜಿಕ ಜಾಲಾತಾಣದಲ್ಲಿ ಶಾಸಕರ ವಿರುದ್ಧ ಕಿರಿ ಕಾರಿದ್ದಾರೆ.

ಪ್ರತಿ ಚುನಾವಣೆಯಲ್ಲಿ ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಪಕ್ಷವು ತಮ್ಮದೇ ಶಾಸಕನ ಉದ್ಧಟತನಕ್ಕೆ ಯಾವ ಕ್ರಮ ಕೈಗೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...