ಮಾರ್ಜಕಗಳ ಮಾರಾಟ | 40 ವರ್ಷದಲ್ಲೇ ದಾಖಲೆ ವಹಿವಾಟು: ಸಚಿವ ಎಂ ಬಿ ಪಾಟೀಲ್

Date:

ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೊತ್ತದ ಮಾರ್ಜಕಗಳನ್ನು (ಡಿಟರ್ಜೆಂಟ್ಸ್) ಮಾರಾಟ ಮಾಡಿದ್ದು, ಕಳೆದ 40 ವರ್ಷಗಳ ವಹಿವಾಟಿನ ಇತಿಹಾಸದಲ್ಲಿ ಇದೊಂದು ದಾಖಲೆ ಎಂದು ಸಂಸ್ಥೆ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಕಳೆದ ತಿಂಗಳು ಕೆಎಸ್‌ಡಿಎಲ್ 852 ಟನ್ ಮಾರ್ಜಕಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ 775 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಅದನ್ನೀಗ ಮುರಿದು, ವಹಿವಾಟಿನಲ್ಲೂ ವಿಕ್ರಮ ಸಾಧಿಸಲಾಗಿದೆ” ಎಂದಿದ್ದಾರೆ.

“ಕೆಎಸ್‌ಡಿಎಲ್ ನಲ್ಲಿ ಇದುವರೆಗೆ ಮಾರ್ಜಕಗಳ ಉತ್ಪಾದನಾ ವಿಭಾಗದಲ್ಲಿ ಒಂದು ಪಾಳಿಯ ಕೆಲಸದ ವ್ಯವಸ್ಥೆ ಇತ್ತು. ಅದನ್ನೀಗ ಮೂರು ಪಾಳಿಗಳಿಗೆ ವಿಸ್ತರಿಸಲಾಗಿದೆ. ಜೊತೆಗೆ, ಈವರೆಗೆ ಸಂಸ್ಥೆಯಲ್ಲಿ ಮಾರ್ಜಕಗಳ ತಯಾರಿಕೆಗೆ ಕೇವಲ ಒಂದು ಯಂತ್ರ ಮಾತ್ರವಿತ್ತು. ಸರಕಾರಿ ಉದ್ದಿಮೆಗಳು ಖಾಸಗಿ ವಲಯದಂತೆಯೇ ಲಾಭ ಗಳಿಸಬೇಕೆಂಬ ಉದ್ದೇಶದಿಂದ ಈಗ ಈ ವಿಭಾಗದಲ್ಲಿ ಮೂರು ಯಂತ್ರಗಳನ್ನು ಅಳವಡಿಸಲಾಗಿದೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮೊಘಲ್ ಸರ್ಕಾರ ನಡೆಸಬೇಕು ಅಂತ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

“ಮುಂದಿನ ದಿನಗಳಲ್ಲಿ ಖಾಸಗಿ ಕಂಪನಿಗಳ ಮಾರ್ಜಕಗಳಿಗೆ ಸಡ್ಡು ಹೊಡೆಯುವ ರೀತಿಯಲ್ಲಿ ಮಾರುಕಟ್ಟೆ ಜಾಲವನ್ನು ಅಖಿಲ ಭಾರತ ಮಟ್ಟದಲ್ಲಿ ವಿಸ್ತರಿಸಲಾಗುವುದು” ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

“ಹೋದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ 2023-24ನೇ ಹಣಕಾಸು ವರ್ಷದಲ್ಲಿ ಡಿಸೆಂಬರ್ ಅಂತ್ಯದವರೆಗೆ ಸಾಬೂನು, ಮಾರ್ಜಕ ಮತ್ತು ಕಾಸ್ಮೆಟಿಕ್ಸ್ ಉತ್ಪಾದನೆ ನಿಗದಿತ ಗುರಿಗಿಂತ ಹೆಚ್ಚಾಗಿದೆ. ಸಂಸ್ಥೆಯು ಹೋದ ಸಾಲಿನಲ್ಲಿ 118 ಕೋಟಿ ರೂ. ಲಾಭ ಗಳಿಸಿತ್ತು. ಈ ಹಣಕಾಸು ಸಾಲಿನ ಮೊದಲ ಒಂಬತ್ತು ತಿಂಗಳಲ್ಲಿ ಸಂಸ್ಥೆಯು 1,171 ಕೋಟಿ ರೂ. ಮೊತ್ತದಷ್ಟು ವಹಿವಾಟು ನಡೆಸಿದೆ. ಈ ವರ್ಷಕ್ಕೆ ಒಟ್ಟು 1,404 ಕೋಟಿ ರೂ. ವಹಿವಾಟು ನಿಗದಿ ಪಡಿಸಲಾಗಿದ್ದು, ಇದನ್ನು ಮೀರುವುದರಲ್ಲಿ ಅನುಮಾನವಿಲ್ಲ” ಎಂದು ಎಂ ಬಿ ಪಾಟೀಲ್ ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಫಲಿತಾಂಶ ಬಳಿಕ ಮಹಾರಾಷ್ಟ್ರದಲ್ಲಿ ಮತ್ತೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ: ಡಿ ಕೆ ಶಿವಕುಮಾರ್

ಲೋಕಸಭಾ ಚುನಾವಣೆ ಆದ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ...

ಜೂನ್ ಮೊದಲ ವಾರದಲ್ಲೇ ಏಕನಾಥ್‌ ಶಿಂದೆ ಸರ್ಕಾರ ಪತನ: ಎಂ ಬಿ ಪಾಟೀಲ್‌

ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ...

ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ...

ಸಂಸದ ಪ್ರಜ್ವಲ್‌ ರೇವಣ್ಣ ಸರ್ಕಾರಿ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ, ಸಾಕ್ಷಿಗಾಗಿ ಹುಡುಕಾಟ

ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ...