ಇಬ್ಬರ ಜಗಳ ಮೂರನೆಯವರಿಗೆ ಲಾಭ | ಸತೀಶ್ ಸಿಎಂ ಆಗೋದು ಖಚಿತ ಎಂದ ಶಾಸಕ ವಿಶ್ವಾಸ್ ವೈದ್ಯ

Date:

Advertisements

ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಕಾಂಗ್ರೆಸ್‌ ಶಾಸಕ ವಿಶ್ವಾಸ್ ವೈದ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವೆ ಈಗಲೂ ಮುಗುಸಿನ ತಿಕ್ಕಾಟ ನಡೆಯುತ್ತಿದೆ ಎನ್ನಲಾಗುತ್ತಿರುವಾಗ ವಿಶ್ವಾಸ್ ವೈದ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಯರಗಟ್ಟಿಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸತೀಶ್ ಜಾರಕಿಹೊಳಿ ಪ್ರಭಾವಿ ನಾಯಕರಾಗಿದ್ದಾರೆ. ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ, ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದೂ ಅಷ್ಟೇ ಸತ್ಯ” ಎಂದಿದ್ದಾರೆ.

“ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯರಗಟ್ಟಿ ಜನರು ಅಭೂತಪೂರ್ವ ಬೆಂಬಲ ನೀಡಿದ್ದೀರಿ. ತಮಗೆಲ್ಲರಿಗೂ ಕೃತಜ್ಞತೆಗಳು” ಎಂದು ಅವರು ಹೇಳಿದ್ದಾರೆ.

Advertisements

ಇತ್ತೀಚೆಗಷ್ಟೇ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಆಪ್ತರೊಂದಿಗೆ ವಿದೇಶಕ್ಕೆ ತೆರಳಿದ್ದರು. ಅವರು ಹೋಗಿದ್ದು ಕಾಂಗ್ರೆಸ್‌ ಒಳಗಿನ ಅಸಮಾಧಾನವನ್ನು ಸೂಚಿಸುತ್ತದೆ ಎಂದು ಹೇಳಲಾಗಿತ್ತು. ಅಲ್ಲದೆ, ಅವರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಅಸಮಾಧಾನ ಹೊಂದಿದ್ದಾರೆ ಎಂದೂ ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X