ಬೆಳಗಾವಿ | ಸತೀಶ್‌ ಜಾರಕಿಹೊಳಿ ಸಿಎಂ ಆಗುತ್ತಾರೆ; ಲಕ್ಷ್ಮಿ ಹೆಬ್ಬಾಳ್ಕರ್‌

Date:

Advertisements
  • ಅಮೂಲಾಗ್ರ ಬದಲಾವಣೆ ಮಾಡಬೇಕು ಎಂಬ ಆಸೆ ನನ್ನಲಿದೆ
  • ಇಲಾಖೆಯ ಬಗ್ಗೆ ಕುಲಂಕುಶವಾಗಿ ಅರ್ಥ ಮಾಡಿಕೊಳ್ಳುತ್ತೇನೆ

ಸತೀಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಅಷ್ಟೇ ಅಲ್ಲ. ಮುಖ್ಯಮಂತ್ರಿ ಕೂಡ ಆಗುವ ಸಾಮರ್ಥ್ಯ ಇದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು. ಇವತ್ತಲ್ಲ ನಾಳೆ ಈ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಸತೀಶ್‌ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೈತಪ್ಪಿದ ವಿಚಾರವಾಗಿ ಪ್ರತಿಕ್ರಿಯಿಸಿದರು.

ನಿಮಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜವಾಬ್ದಾರಿ ಕೊಟ್ಟರೆ, ಮಕ್ಕಳ ಶಿಕ್ಷಣ ಆರಂಭವಾಗುವ ಅಂಗನವಾಡಿ ಶಿಕ್ಷಣದಲ್ಲಿ ಬದಲಾವಣೆ ಏನಾದರೂ ಮಾಡುತ್ತೀರ? ಎಂಬ ಪ್ರಶ್ನೆಗೆ ಉತ್ತರಿಸಿ, ಖಂಡಿತವಾಗಿಯೂ ಅಮೂಲಾಗ್ರ ಬದಲಾವಣೆ ಮಾಡಬೇಕು ಎಂಬ ಆಸೆ ನನ್ನಲಿದೆ. ಆದರೆ, ಮೊದಲು ಆ ಇಲಾಖೆಯ ಬಗ್ಗೆ ಕುಲಂಕುಶವಾಗಿ ಅರ್ಥ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.

Advertisements

ಅಂದಾಜು 70 ಸಾವಿರ ಅಂಗನವಾಡಿಗಳು ನಮ್ಮ ರಾಜ್ಯದಲ್ಲಿದ್ದಾವೆ. ಮಕ್ಕಳ ಕಲಿಕೆ ಆರಂಭವಾಗುವುದೇ ಅಂಗನವಾಡಿಯಿಂದ. ಬಹುತೇಕ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಕೂಡ ಇಲ್ಲ. ಹಾಗಾಗಿ ಸಮಗ್ರವಾಗಿ ಅದರ ಬಗ್ಗೆ ಚರ್ಚೆ ಮಾಡಿ, ತಿಳಿದುಕೊಂಡು ಮುಂದುವರಿಯುತ್ತೇನೆ ಎಂದರು.

ಈ ಸುದ್ದಿ ಓದಿದ್ದೀರಾ? ಸಚಿವ ಸ್ಥಾನ ಸಿಗದವರಿಗೆ ಬೇರೆ ಬೇರೆ ಹುದ್ದೆ ಕೊಡಲಾಗುತ್ತೆ: ಸತೀಶ ಜಾರಕಿಹೊಳಿ

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವ ಕುರಿತು ರಾಹುಲ್ ಗಾಂಧಿ ನೀಡಿದ ಭರವಸೆ ಈಡೇರಿಸುತ್ತೀರಾ? ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನನಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಅಧಿಕೃತವಾಗಿ ಹಂಚಿಕೆಯಾಗಬೇಕು. ಅಧಿಕಾರ ಸ್ವೀಕರಿಸಿ, ಇಲಾಖೆವಾರು ಸಭೆಗಳನ್ನು ನಡೆಸಬೇಕು. ಆದರೆ, ನಾವು ನೀಡಿದ ವಾಗ್ದಾನ ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X