ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರು ಸೇರಿ 67 ಮಂದಿ ಬಡ್ತಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್

Date:

Advertisements
  • ಏ.18ರಂದು ಅಧಿಸೂಚನೆ ಹೊರಡಿಸಿದ್ದ ಹೈಕೋರ್ಟ್‌ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ
  • ರಾಜ್ಯ ಸರ್ಕಾರ ಹೊರಡಿಸಿದ ನೋಟೀಸ್‌ ಸುಪ್ರೀಂ ಕೋರ್ಟ್ ತೀರ್ಪುಗಳ ಉಲ್ಲಂಘನೆ ಎಂದ ಪೀಠ  

ಮಾನಹಾನಿ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿದ ನ್ಯಾಯಾಧೀಶರು ಸೇರಿದಂತೆ 68 ನ್ಯಾಯಾಧೀಶರನ್ನು ಜಿಲ್ಲಾ ನ್ಯಾಯಾಧೀಶರಾಗಿ ಬಡ್ತಿ ನೀಡುವ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ.

ನ್ಯಾಯಮೂರ್ತಿಗಳಾದ ಎಂ ಆರ್ ಷಾ ಮತ್ತು ಸಿ ಟಿ ರವಿಕುಮಾರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು, ನ್ಯಾಯಾಂಗ ಅಧಿಕಾರಿಗಳ ಬಡ್ತಿಗಾಗಿ ಗುಜರಾತ್ ಹೈಕೋರ್ಟ್ ನೀಡಿದ ಶಿಫಾರಸಿಗೆ ತಡೆ ನೀಡಿತು ಮತ್ತು ನ್ಯಾಯಾಲಯದ ಶಿಫಾರಸಿನ ಅನುಷ್ಠಾನಕ್ಕೆ ಗುಜರಾತ್ ಸರ್ಕಾರ ನೀಡಿದ ನೋಟಿಸ್‌ಗೆ ಕೂಡ ತಡೆ ನೀಡಿದೆ.

ಈ ವಿಷಯವು ವಿಚಾರಣೆಗೆ ಒಳಪಟ್ಟಿದ್ದರೂ ಕೂಡ ಬಡ್ತಿಯನ್ನು ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್, ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಚುನಾವಣೆ 2023| ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ

68 ನ್ಯಾಯಾಂಗ ಅಧಿಕಾರಿಗಳ ಪೈಕಿ ಹರೀಶ್ ಹಸ್ಮುಖ್ ಭಾಯ್ ವರ್ಮಾ ಅವರು ರಾಹುಲ್ ಗಾಂಧಿ ವಿರುದ್ಧ ದೋಷಾರೋಪಣೆಯ ಆದೇಶ ಜಾರಿಗೊಳಿಸಿ, ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದರು.

ಸುಪ್ರೀಂಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೂ, ತರಾತುರಿಯಲ್ಲಿ ರಾಜ್ಯ ಸರ್ಕಾರ ನ್ಯಾಯಾಧೀಶರ ಬಡ್ತಿಗಾಗಿ ಹೊರಡಿಸಿದ ಆದೇಶವನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. “ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಅಧಿಕಾರಿಗಳಿಗೆ ಬಡ್ತಿ ನೀಡುವ ನಿರ್ಧಾರದ ಅನುಷ್ಠಾನವನ್ನು ತಡೆಹಿಡಿಯುತ್ತೇವೆ” ಎಂದು ನ್ಯಾಯಮೂರ್ತಿ ಎಂ ಆರ್‌ ಷಾ ತಿಳಿಸಿದ್ದಾರೆ.

ಕೆಳ ನ್ಯಾಯಾಲಯದ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ವರ್ಗಾವಣೆಯ ಕುರಿತು ಏಪ್ರಿಲ್ 18ರಂದು ಅಧಿಸೂಚನೆಯನ್ನು ಹೊರಡಿಸಿದ್ದ ಹೈಕೋರ್ಟ್‌ ವಿರುದ್ಧ ಸುಪ್ರೀಂ ಕೋರ್ಟ್ ಏಪ್ರಿಲ್ 28ರಂದು ಅಸಮಾಧಾನ ವ್ಯಕ್ತಪಡಿಸಿತ್ತು. ಹೈಕೋರ್ಟ್‌ ಅಧಿಸೂಚನೆಯ ಪ್ರಕಾರ ವರ್ಮಾ ಅವರನ್ನು ರಾಜ್‌ಕೋಟ್ ಜಿಲ್ಲಾ ನ್ಯಾಯಾಲಯಕ್ಕೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ವರ್ಗಾವಣೆ ಮಾಡಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X