ಎಸ್‌ಸಿಒ ಶೃಂಗಸಭೆ | ಭಾಗವಹಿಸುವಿಕೆ ಖಚಿತಪಡಿಸಿದ ಚೀನಾ ರಕ್ಷಣಾ ಸಚಿವ ಲಿ ಶಾಂಗ್‌ಫು

Date:

  • ಎಸ್‌ಸಿಒ ಶೃಂಗಸಭೆ ಚರ್ಚೆಗಳಲ್ಲಿ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಭಾಗಿ
  • ಏಪ್ರಿಲ್‌ 27 ಮತ್ತು 28ರಂದು ಎರಡು ದಿನ ದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆ

ಶಾಂಘೈ ಸಹಕಾರ ಸಂಘಟನೆ ಅಥವಾ ಎಸ್‌ಸಿಒ ಶೃಂಗಸಭೆ ಚರ್ಚೆಗಳಲ್ಲಿ ಭಾಗವಹಿಸುವುದಾಗಿ ಚೀನಾದ ರಕ್ಷಣಾ ಸಚಿವ ಲಿ ಶಾಂಗ್‌ಫು ಮತ್ತು ರಷ್ಯಾದ ರಕ್ಷಣಾ ಸಚಿವ ಸೆರ್ಗೆಯ್‌ ಶೋಯಿಗು ಅವರು ಖಚಿತಪಡಿಸಿದ್ದಾರೆ.

ಮುಂದಿನ ವಾರ ದೆಹಲಿಯಲ್ಲಿ ಈ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯು ನಡೆಯುತ್ತದೆ. ಇಲ್ಲಿ ಎಸ್‌ಸಿಒನ ಎಲ್ಲ ಸದಸ್ಯ ರಾಷ್ಟ್ರಗಳೂ ಭಾಗವಹಿಸಲಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಏಪ್ರಿಲ್ 27 ಮತ್ತು 28ರಂದು ಸಂಘಟನೆಯ ಎಲ್ಲ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಈ ಎಸ್‌ಸಿಒ ಶೃಂಗಸಭೆ ಚರ್ಚೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಕ್ಷಣಾ ಸಚಿವರ ಈ ಶೃಂಗಸಭೆಯಲ್ಲಿ ಚೀನಾ ಹಾಗೂ ರಷ್ಯಾ ದೇಶಗಳ ರಕ್ಷಣಾ ಸಚಿವರು ಭಾಗವಹಿಸಲಿದ್ದಾರೆ.

2020ರ ಗಾಲ್ವಾನ್ ಕಣಿವೆ ಘರ್ಷಣೆಯ ನಂತರ ಚೀನಾದ ರಕ್ಷಣಾ ಸಚಿವ ಲಿ ಶಾಂಗ್‌ಫು ದೆಹಲಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಈ ಹಿನ್ನೆಲೆ ಲಿ ಅವರ ಭಾರತ ಭೇಟಿ ಮಹತ್ವ ಪಡೆದಿದೆ.

ಎಸ್‌ಸಿಒ ಶೃಂಗಸಭೆ ಎರಡು ದಿನ ನಡೆಯಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಭಯೋತ್ಪಾದನೆ, ಪ್ರಾದೇಶಿಕ ಭದ್ರತೆ ಮತ್ತು ಅಫ್ಘಾನಿಸ್ತಾನದ ಭದ್ರತಾ ಪರಿಸ್ಥಿತಿಗೆ ಸಂಬಂಧಿಸಿದ ವಿಷಯಗಳು ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರನ್ನು ಸಹ ಶೃಂಗಸಭೆಗೆ ಆಹ್ವಾನಿಸಲಾಗಿದೆ. ಆದರೆ ಅವರು ಸಭೆಯಲ್ಲಿ ಪಾಲ್ಗೊಳ್ಳುವುದನ್ನು ಇನ್ನೂ ದೃಢೀಕರಿಸಿಲ್ಲ.

ಎಸ್‌ಸಿಒ ಶೃಂಗಸಭೆ ನಂತರ ಮೇ 5ರಂದು ಗೋವಾದಲ್ಲಿ ವಿದೇಶಾಂಗ ಸಚಿವರ ಸಭೆ ನಡೆಯಲಿದೆ. ಇದರಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಭಾಗವಹಿಸುವುದಾಗಿ ಖಚಿತಪಡಿಸಿದ್ದಾರೆ.

ಪೂರ್ವ ಲಡಾಖ್‌ನಲ್ಲಿರುವ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಕೆಲವು ಘರ್ಷಣೆಯ ಸ್ಥಳಗಳಲ್ಲಿ ನಿರ್ಲಿಪ್ತತೆಯ ಹೊರತಾಗಿಯೂ ಭಾರತ ಹಾಗೂ ಚೀನಾ ದೇಶಗಳ ನಡುವಿನ ಗಡಿ ಉದ್ವಿಗ್ನತೆಯು ಇನ್ನೂ ಮುಂದುವರಿದಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಅರುಣಾಚಲ ಪ್ರದೇಶದ ತವಾಂಗ್ ವಲಯದ ಯಾಂಗ್‌ತ್ಸೆಯಲ್ಲಿ ಚೀನಾ ಮತ್ತು ಭಾರತೀಯ ಸೈನಿಕರ ನಡುವೆ ಘರ್ಷಣೆ ನಡೆಯಿತು.

ಕಳೆದ ವರ್ಷ ರಷ್ಯಾ-ಉಕ್ರೇನ್ ಸಂಘರ್ಷ ಪ್ರಾರಂಭವಾದ ನಂತರ ರಷ್ಯಾದ ರಕ್ಷಣಾ ಸಚಿವ ಶೋಯಿಗು ಅವರ ಮೊದಲ ಭಾರತ ಭೇಟಿ ಇದಾಗಿದೆ.

ಈ ಸುದ್ದಿ ಓದಿದ್ದೀರಾ? ಎಐಸಿಸಿ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ್‌ ಬಂಧಿಸಲು ರಾಜ್ಯಕ್ಕೆ ಬಂದ ಅಸ್ಸಾಂ ಪೊಲೀಸರು

24ನೇ ಭಾರತ-ರಷ್ಯಾ ಮಾತುಕತೆಗಾಗಿ ರಷ್ಯಾದ ಉಪ ಪ್ರಧಾನಿ ಡೆನಿಸ್ ಮಂಟುರೊವ್ ಅವರ ಭೇಟಿಯಂತಹ ಎರಡು ದೇಶಗಳ ನಡುವಿನ ಉನ್ನತ ಮಟ್ಟದ ಸರಣಿ ಕಾರ್ಯಕ್ರಮಗಳ ನಡುವೆ ರಷ್ಯಾ ರಕ್ಷಣಾ ಸಚಿವರು ಭೇಟಿ ನೀಡುತ್ತಿದ್ದಾರೆ.

ಎಸ್‌ಸಿಒ ಶೃಂಗಸಭೆ ನಡೆಸಲು ಎಲ್ಲ ಸದಸ್ಯ ರಾಷ್ಟ್ರಗಳನ್ನೂ ಆಹ್ವಾನಿಸಲಾಗಿದೆ. ಭಾರತ, ರಷ್ಯಾ, ಚೀನಾ, ಕಿರ್ಗಿಜ್ ಗಣರಾಜ್ಯ, ಕಜಕಿಸ್ತಾನ್, ತಜಕಿಸ್ತಾನ್, ಉಜ್ಬೇಕಿಸ್ತಾನ್ ಮತ್ತು ಪಾಕಿಸ್ತಾನ ಎಸ್‌ಸಿಒ ಸದಸ್ಯ ರಾಷ್ಟ್ರಗಳಾಗಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನಾರೋಗ್ಯದಡಿ ಜಾಮೀನು ಪಡೆಯಲು ಕೇಜ್ರಿವಾಲ್ ಮಾವು ಸೇವನೆ: ಇ.ಡಿ

ಅಸ್ತಮ ಕಾಯಿಲೆಯಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ...

ಗುಜರಾತ್ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ ಅಂಬೇಡ್ಕರ್ ಭಾವಚಿತ್ರವಿಲ್ಲ

ಗುಜರಾತ್‌ನ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ 8 ನಾಯಕರ ಭಾವಚಿತ್ರಗಳಿವೆ ಎಂದು...

ಚಿಕ್ಕಮಗಳೂರು | ಜಯಪ್ರಕಾಶ್ ಹೆಗ್ಡೆ ಮಲೆನಾಡಿನ ಅಡಿಕೆ ಬೆಳೆಗಾರರ ಆಶಾಕಿರಣ: ಬಿ ಎ ರಮೇಶ್ ಹೆಗ್ಡೆ

"ಜಯಪ್ರಕಾಶ್ ಹೆಗ್ಡೆ ಅವರು ಅಡಿಕೆ ಬೆಳೆಗಾರರ ಆಶಾಕಿರಣ. ಕೇವಲ ಎರಡು ವರ್ಷಗಳಲ್ಲಿ...

ಕನ್ನಡ ಸೇರಿ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರೊಪಗ್ಯಾಂಡಗಳ ವಿರುದ್ಧ ಟೊಂಕಕಟ್ಟಿ ನಿಂತಿರುವ ದೇಶದ...