ಎಸ್‌ಸಿಎಸ್‌ಪಿ/ಟಿಎಸ್‌ಪಿ | ಆಯಾ ವರ್ಷವೇ ಹಣ ಖರ್ಚು ಮಾಡದಿದ್ದರೆ ಶಿಸ್ತು ಕ್ರಮ: ಸಿದ್ದರಾಮಯ್ಯ

Date:

ಇಡೀ ದೇಶದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಮಾಡಿರುವುದು ನಾವು ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಹಣ ಖರ್ಚು ಕೊಡುತ್ತಿರುವುದು ನಮ್ಮ ಸರ್ಕಾರ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

- Advertisement -

ತಮ್ಮ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಅವರು ಮಾತನಾಡಿ, “2024-25 ನೇ ಸಾಲಿನಲ್ಲಿ 39121.46 ಕೋಟಿ ಇದ್ದರೆ, ಹಿಂದಿನ ವರ್ಷ 35221.84 ಕೋಟಿ ಇತ್ತು. ಇದರಲ್ಲಿ ಬಿಡುಗಡೆ ವೆಚ್ಚದ ಶೇ.99.64 ಕೋಟಿಯಷ್ಟು ಖರ್ಚಾಗಿದೆ. ಉಳಿದದ್ದು ಏಕೆ ಆಗಿಲ್ಲ” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚಾಮರಾಜ ಕ್ಷೇತ್ರದ ಮೇಲೆ ‘ನಿರುದ್ಯೋಗಿ’ ಪ್ರತಾಪ್ ಸಿಂಹ ಕಣ್ಣು;...

ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಈಗ 2028ರ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಟಿ. ನರಸೀಪುರದ ಗಣೇಶೋತ್ಸವದಿಂದ ಹಿಡಿದು ಮೈಸೂರಿನ ಹಲವು ಧಾರ್ಮಿಕ–ಸಾಂಸ್ಕೃತಿಕ ವಿವಾದಗಳವರೆಗೆ ಮತ್ತೆ ಮುಂಚೂಣಿಯಲ್ಲಿ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

“ಆಯಾಯ ವರ್ಷವೇ ಶೇ.100 ರಷ್ಟು ಖರ್ಚು ಮಾಡಬೇಕು ಎನ್ನುವ ಕಾನೂನು ಮಾಡಿದ್ದು ನಾವೇ. ಖರ್ಚು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎನ್ನುವ ನಿಯಮವನ್ನೂ ಮಾಡಿದ್ದೇವೆ. ಯಾರು ನಿರ್ಲಕ್ಷ್ಯ ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ನಿರ್ಲಕ್ಷ್ಯಕ್ಕೆ ಕ್ಷಮೆ ಇಲ್ಲ” ಎಂದರು.

“ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಎಸ್‌.ಸಿ.ಎಸ್‌.ಪಿ., ಟಿ.ಎಸ್.ಪಿ. ಕಾಯ್ದೆ 2013 ನ್ನು ಜಾರಿಗೆ ತಂದು, ಸರ್ಕಾರದ ಒಟ್ಟಾರೆ ಅಭಿವೃದ್ಧೀ ಆಯವ್ಯಯದ ಶೇ. 24.1 ರಷ್ಟನ್ನು ಈ ಸಮುದಾಯಗಳ ಅಭಿವೃದ್ಧಿಗೆ ವೆಚ್ಚ ಮಾಡಲಾಗುತ್ತಿದೆ. ಶುಕ್ರವಾರ ನಡೆದ ರಾಜ್ಯ ಪರಿಷತ್‌ ಸಭೆಯಲ್ಲಿ 2024-25 ನೇ ಸಾಲಿಗೆ ಎಸ್.ಸಿ.ಎಸ್‌.ಪಿ. / ಟಿಎಸ್‌.ಪಿ. ಅಡಿ ಒಟ್ಟಾರೆ. ರೂ.39,121.46 ಕೋಟಿ ಅನುದಾನ ಒದಗಿಸಲಾಗಿದೆ” ಎಂದು ಹೇಳಿದರು.

“ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಇದು 11% ಅಂದರೆ ರೂ.3897 ಕೋಟಿ ಹೆಚ್ಚಳವಾಗಿದೆ. ಎಸ್‌.ಸಿ.ಎಸ್‌.ಪಿ. ಅಡಿ 27,673.96 ಕೋಟಿ ರೂ. ಹಾಗೂ ಟಿ.ಎಸ್.ಪಿ. ಅಡಿ 11447.50 ಕೋಟಿ ರೂ. ಒದಗಿಸಲಾಗಿದೆ. ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 8,480 ಕೋಟಿ ರೂ., ಇಂಧನ ಇಲಾಖೆಗೆ 5026 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 4174 ಕೋಟಿ ರೂ., ಕಂದಾಯ ಇಲಾಖೆಗೆ 3403 ಕೋಟಿ ರೂ. , ಗ್ರಾಮೀಣಾಭಿವೃದ್ಧಿ ಇಲಾಖೆಗೆ 3163 ಕೋಟಿ ರೂ. ಒದಗಿಸಲಾಗಿದೆ” ಎಂದು ಹೇಳಿದರು.

“ಕಳೆದ ವರ್ಷ 35221.84 ಕೋಟಿ ರೂ. ಆಯವ್ಯಯ ಹಂಚಿಕೆಗೆ ಎದುರಾಗಿ ಶೇ. 97.23 ರಷ್ಟು ಹಾಗೂ ಬಿಡುಗಡೆಗೆ ಎದುರಾಗಿ ಶೇ. 99.64 ರಷ್ಟು ಸಾಧನೆಯಾಗಿದೆ. ಈ ಅನುದಾನ ಯಾವ ಕಾರಣಕ್ಕೂ ಬಳಕೆಯಾಗದೆ ಉಳಿಕೆ ಆಗಬಾರದು. ಅದೇ ವರ್ಷ ವೆಚ್ಚವಾಗಬೇಕು” ಎಂದು ಸೂಚಿಸಿದರು.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನಿಗಮಗಳಲ್ಲಿ ಹಣ ವೆಚ್ಚವಾಗಿಲ್ಲ. ಇದಕ್ಕೆ ಶಾಸಕರು ಪಟ್ಟಿ ಕೊಡಲಿಲ್ಲ ಎಂಬ ಕಾರಣ ನೀಡುತ್ತಾರೆ. ನಿಗಮಗಳ ಅಧ್ಯಕ್ಷರು ಹಾಗೂ ಸಂಬಂಧಿಸಿದ ಸಚಿವರು, ಶಾಸಕರು ಫಲಾನುಭವಿಗಳ ಪಟ್ಟಿ ಒದಗಿಸುವಂತೆ ಮನವೊಲಿಸಬೇಕು” ಎಂದರು.

“ಈ ಯೋಜನೆಗಳ ಮೌಲ್ಯಮಾಪನದಿಂದ ಶೇ. 65 ರಷ್ಟು ಉಪಯೋಗವಾಗಿರುವುದು ಕಂಡು ಬರುತ್ತದೆ. ಸೆಕ್ಷನ್‌ 7 (ಡಿ) ಕೈಬಿಡಲಾಗಿದೆ. ಇದರಿಂದಾಗಿ ಈ ಯೋಜನೆಯ ಸಂಪೂರ್ಣ ವೆಚ್ಚ ಈ ಸಮುದಾಯದವರಿಗೇ ಬಳಕೆಯಾಗಲಿದೆ” ಎಂದು ಹೇಳಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಸಚಿವರಾದ ಹೆಚ್.ಕೆ.ಪಾಟೀಲ್, ಪ್ರಿಯಾಂಕ್‌ ಖರ್ಗೆ, ಡಾ. ಎಂ.ಸಿ. ಸುಧಾಕರ್‌, ಪರಿಷತ್ತಿನ ಸದಸ್ಯರಾಗಿರುವ ಶಾಸಕರಾದ ಪ್ರಸಾದ್ ಅಬ್ಬಯ್ಯ, ಬಸಂತಪ್ಪ, ಶ್ರೀನಿವಾಸ್,ನರೇಂದ್ರಸ್ವಾಮಿ, ಕೃಷ್ಣಾನಾಯಕ್ , ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಸಂಸದರಾದ ಸುನಿಲ್ ಬೋಸ್ ಪ್ರಕಾಶ್ ಸೇರಿದಂತೆ ಅಧಿಕಾರಿ ವರ್ಗ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫ್ಯಾಕ್ಟ್‌ಚೆಕ್ | ‘ಮೋದಿಗೂ 76 ವರ್ಷ, ಅವರ ಶಿಕ್ಷಕರಿಗೂ 76 ವರ್ಷ’; ಅಸಲಿಯತ್ತೇನು?

ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಸಂದರ್ಭದಲ್ಲಿ, ಅವರ ಶಾಲಾ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ, 13 ವರ್ಷಗಳಿಂದ ಬೀದಿಯಲ್ಲೇ ಬದುಕು!

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು...

ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ...

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದೆ : ಸಚಿವ ಶರಣಪ್ರಕಾಶ ಪಾಟೀಲ

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದ್ದು, ಈ...