ಅದಾನಿ- ಹಿಂಡನ್‌ಬರ್ಗ್ ಪ್ರಕರಣ | ಸೆಬಿಗೆ ಹೆಚ್ಚುವರಿ ಆರು ತಿಂಗಳು ನೀಡದ ಸುಪ್ರೀಂ ಕೋರ್ಟ್‌

Date:

Advertisements
  • ಅದಾನಿ- ಹಿಂಡನ್‌ಬರ್ಗ್ ಪ್ರಕರಣ ತನಿಖೆಗೆ ಹೆಚ್ಚುವರಿ ಕಾಲಾವಕಾಶವಿಲ್ಲ
  • ಆಗಸ್ಟ್‌ವರೆಗೆ ಸಮಯಾವಕಾಶ ನೀಡಬಹುದು ಎಂದ ಸುಪ್ರೀಂಕೋರ್ಟ್‌

ಹಣಕಾಸು ದುರ್ವ್ಯವಹಾರಗಳಿಗೆ ಸಂಬಂಧಿಸಿ ಅದಾನಿ- ಹಿಂಡನ್‌ಬರ್ಗ್ ಪ್ರಕರಣದ ತನಿಖೆಗೆ ಭಾರತೀಯ ಷೇರು ವಿನಿಮಯ ಮಂಡಳಿ ಅಥವಾ ಸೆಕ್ಯುರಿಟೀಸ್ ಆಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾಗೆ (ಸೆಬಿ) ಹೆಚ್ಚುವರಿ ಆರು ತಿಂಗಳ ಕಾಲಾವಕಾಶ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

“ಈ ಹೊತ್ತಿನಲ್ಲಿ ಆರು ತಿಂಗಳ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಮಾಡುವ ಕೆಲಸದಲ್ಲಿ ಚುರುಕುತನ ಇರಬೇಕು. ತಂಡವನ್ನು ರಚಿಸಿ. ಆಗಸ್ಟ್ ಮಧ್ಯಭಾಗದವರೆಗೂ ಸಮಯ ಕೊಡಬಹುದು. ಅದರೊಳಗೆ ವರದಿ ಸಲ್ಲಿಸಿ. ಆರು ತಿಂಗಳನ್ನು ಕನಿಷ್ಠ ಸಮಯವಾಗಿ ನೀಡಲು ಸಾಧ್ಯವಿಲ್ಲ. ಸೆಬಿ ಅನಿರ್ದಿಷ್ಟಾವಧಿ ಧೀರ್ಘ ಸಮಯ ತೆಗೆದುಕೊಳ್ಳಬಾರದು ಮತ್ತು ಅವರಿಗೆ 3 ತಿಂಗಳು ಕೊಡಬಹುದು” ಎಂದು ಭಾರತೀಯ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ನ್ಯಾಯಾಲಯದ ನೋಂದಣಿ ಪ್ರಾಧಿಕಾರವು ಸುಪ್ರೀಂ ಕೋರ್ಟ್ ನೇಮಿಸಿದ ನ್ಯಾಯಮೂರ್ತಿ (ನಿವೃತ್ತ) ಎ ಎಂ ಸಪ್ರೆ ಸಮಿತಿಯಿಂದ ವರದಿಯನ್ನು ಪಡೆದುಕೊಂಡಿರುವುದನ್ನು ವಿಚಾರಣೆ ಸಂದರ್ಭ ದೃಢಪಡಿಸಿದೆ. ಸಮಿತಿಯ ವರದಿ ಪರಿಗಣಿಸಿದ ನಂತರ, ತನಿಖೆಗೆ ಅವಧಿ ವಿಸ್ತರಣೆ ಕೋರಿದ ಅರ್ಜಿ ಬಗ್ಗೆ ಮೇ 15ರಂದು ತೀರ್ಮಾನ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದೆ.  

Advertisements

ಅದಾನಿ ಸಮೂಹದ ಮೇಲಿನ ಹಣಕಾಸು ದುರ್ವ್ಯವಹಾರಗಳ ಆರೋಪದ ತನಿಖೆ ನಡೆಸಲು ಆರು ತಿಂಗಳ ಕಾಲ ಅವಧಿಯನ್ನು ವಿಸ್ತರಿಸಬೇಕು ಎಂದು ಸೆಬಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲ ಅವರಿದ್ದ ನ್ಯಾಯ ಪೀಠವು ಶುಕ್ರವಾರ ವಿಚಾರಣೆ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X