ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿ ‘ಜಾತ್ಯತೀತ’, ‘ಸಮಾಜವಾದಿ’ ಪದಗಳು ಕಣ್ಮರೆ: ಅಧೀರ್

Date:

Advertisements

ನೂತನ ಸಂಸತ್ ಭವನದ ಉದ್ಘಾಟನಾ ದಿನದಂದು ಉಭಯ ಸದನಗಳ ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿನ ಪ್ರಸ್ತಾವನೆಯಲ್ಲಿ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳು ಕಣ್ಮರೆಯಾಗಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಆರೋಪಿಸಿದ್ದಾರೆ.

ಆದಾಗ್ಯೂ, ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಈ ಬಗ್ಗೆ ಮಾತನಾಡಿ, ಸಂವಿಧಾನದ ಪ್ರಸ್ತಾವನೆಯು ಮೂಲ ಆವೃತ್ತಿಯನ್ನು ಹೊಂದಿದ್ದು, ಸಂವಿಧಾನಾತ್ಮಕ ತಿದ್ದುಪಡಿಗಳ ನಂತರ ಈ ಉಲ್ಲೇಖಿತ ನಿರ್ದಿಷ್ಟ ಪದಗಳನ್ನು ಸೇರಿಸಲಾಯಿತು. ತಿದ್ದುಪಡಿ ಪ್ರಕ್ರಿಯೆಯ ಮೂಲಕ ಸಂವಿಧಾನದ ಪ್ರಸ್ತಾವನೆಗೆ ಸೇರಿಸಲಾದ ಹೆಚ್ಚುವರಿ ಪದಗಳನ್ನು ಈ ಪ್ರತಿಗಳು ಒಳಗೊಂಡಿಲ್ಲ ಎಂದು ಹೇಳಿದರು.

‘ಇದು ಸಂವಿಧಾನದ ಮೂಲ ಪ್ರಸ್ತಾವನೆಯ ಪ್ರಕಾರವಾಗಿದೆ. ತಿದ್ದುಪಡಿಗಳನ್ನು ನಂತರ ಮಾಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

Advertisements

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಅಧೀರ್ ರಂಜನ್ ಚೌಧರಿ, ಈ ಪದಗಳನ್ನು ‘ಜಾಣತನದಿಂದ ತೆಗೆದುಹಾಕಲಾಗಿದೆ’ ಎಂದು ದೂರಿದ ಅವರು, ಬಿಜೆಪಿ ಸರ್ಕಾರದ ಉದ್ದೇಶಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

‘ನಾವು ಹೊಸ ಸಂಸತ್ ಕಟ್ಟಡಕ್ಕೆ ಕೊಂಡೊಯ್ದ ಸಂವಿಧಾನದ ಪ್ರಸ್ತಾವನೆಯ ಪ್ರತಿಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಎನ್ನುವ ಪದಗಳಿಲ್ಲ. ಅವುಗಳನ್ನು ಜಾಣತನದಿಂದ ತೆಗೆದುಹಾಕಲಾಗಿದೆ. ಇದು ಗಂಭೀರ ವಿಷಯ ಮತ್ತು ನಾವು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುತ್ತೇವೆ. ಈ ಪದಗಳನ್ನು 1976ರಲ್ಲಿ ಸಂವಿಧಾನಕ್ಕೆ ಸೇರಿಸಲಾಯಿತು ಎಂಬುದು ನನಗೆ ತಿಳಿದಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣದ ಬಗ್ಗೆ ಮೋದಿ ಅವಹೇಳನ: ರಾಹುಲ್ ಗಾಂಧಿ ಆಕ್ರೋಶ

‘ಇದು ಗಂಭೀರ ಸಮಸ್ಯೆಯಾಗಿದೆ. ಅವರ ಹೃದಯದಲ್ಲಿ ಈ ಬಗ್ಗೆ ಸ್ಪಷ್ಟತೆಯಿಲ್ಲದ ಕಾರಣ ನಾನು ಅವರ ಉದ್ದೇಶಗಳ ಬಗ್ಗೆ ಅನುಮಾನಿಸುತ್ತೇನೆ. ಯಾರಿಗಾದರೂ ಸಂವಿಧಾನದ ಪ್ರತಿಯನ್ನು ನೀಡುವುದೇ ಆದರೆ, ಅದನ್ನು ಇಂದಿನ ಆವೃತ್ತಿಯಲ್ಲಿರುವಂತೆಯೇ ನೀಡಬೇಕು’ ಎಂದು ಹೇಳಿದರು.

ಸಿಪಿಎಂನ ಬಿನೋಯ್ ವಿಶ್ವಂ ಅವರು ಸಂವಿಧಾನದ ಪ್ರಸ್ತಾವನೆಯಿಂದ ಈ ಪದಗಳನ್ನು ತೆಗೆದುಹಾಕುವುದು ‘ಅಪರಾಧ’ ಎಂದು ತಿಳಿಸಿದ್ದಾರೆ.

ಎಡಪಕ್ಷಗಳು ಮತ್ತು ಇತರ ಪಕ್ಷಗಳು ಸೇರಿದಂತೆ ಹಲವಾರು ವಿರೋಧ ಪಕ್ಷದ ಸಂಸದರು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X