ಜಾತ್ಯತೀತತೆಯು ಕಾಂಗ್ರೆಸ್‌ನ ಮೂಲ ತತ್ವ; ತಮ್ಮ ನಾಯಕರಿಗೆ ನೆನಪಿಸಿದ ರಾಹುಲ್‌ ಗಾಂಧಿ

Date:

Advertisements

ಜಾತ್ಯತೀತತೆಯು ಕಾಂಗ್ರೆಸ್‌ನ ಮೂಲ ತತ್ವಗಳಲ್ಲಿ ಒಂದಾಗಿದೆ. ಪಕ್ಷವು ಅದರಿಂದ ದೂರ ಸರಿಯಬಾರದು, ವಿಮುಖವಾಗಬಾರದು. ಎಲ್ಲರ ಧಾರ್ಮಿಕ ನಂಬಿಕೆಗಳಿಗೂ ಸಮಾನ ಗೌರವ ಸಿಗಬೇಕು ಎಂದು ವಿಪಕ್ಷ ನಾಯಕ, ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಅಧಿವೇಶನಕ್ಕೂ ಮುನ್ನ ನಡೆದ ಕಾಂಗ್ರೆಸ್‌ ಸಿಡಬ್ಲ್ಯೂಸಿ ಸಭೆಯಲ್ಲಿ ರಾಹುಲ್‌ ಗಾಂಧಿ ಮಾತನಾಡಿದ್ದು, ಪಕ್ಷದ ನಾಯಕರಿಗೆ ಪಕ್ಷದ ಮೂಲ ಸಿದ್ದಾಂತಗಳ ಕುರಿತು ವಿವರಿಸಿದ್ದಾರೆ. ಬಿಜೆಪಿಯ ಕೋಮು ಧ್ರುವೀಕರಣವನ್ನು ಎದುರಿಸಲು ಪಕ್ಷವು ಏನೆಲ್ಲ ಕಾರ್ಯತಂತ್ರಗಳನ್ನು ರೂಪಿಸಬೇಕು ಎಂಬುದರ ಬಗ್ಗೆ ಚರ್ಚಿಸಿದ್ದಾರೆ.

“ಕಾಂಗ್ರೆಸ್ ಅನ್ನು ‘ಒಂದು ಸಮುದಾಯ/ಧರ್ಮ’ದ ಪಕ್ಷವೆಂದು ನೋಡಲಾಗುವುದಿಲ್ಲ. ಒಬ್ಬ ವ್ಯಕ್ತಿಯ ಧಾರ್ಮಿಕ ನಂಬಿಕೆಯ ಕಾರಣಕ್ಕಾಗಿ ಅವರ ಮೇಲೆ ದಾಳಿ ನಡೆದರೆ, ನಾವು ಅದನ್ನು ವಿರೋಧಿಸಬೇಕು. ಪ್ರತಿಯೊಬ್ಬರ ಧಾರ್ಮಿಕ ನಂಬಿಕೆಯನ್ನು ಗೌರವಿಸುವ ಬಗ್ಗೆ ಪಕ್ಷದ ನಾಯಕರಿಗೆ ಸ್ಪಷ್ಟತೆ ಇರಬೇಕು” ಎಂದು ತಿಳಿಸಿದ್ದಾರೆ.

Advertisements

“ಜನರ ಹಕ್ಕುಗಳಿಗಾಗಿ ಕಾಂಗ್ರೆಸ್ ಪ್ರಜಾಸತ್ತಾತ್ಮಕವಾಗಿ ಹೋರಾಡುವುದನ್ನು ಮುಂದುವರಿಸುತ್ತದೆ:” ಎಂದು ಹೇಳಿದ್ದಾರೆ.

“1991ರ ನಂತರ ಕಾಂಗ್ರೆಸ್ ಜನಸಂಖ್ಯೆಯ ಸರಿಸುಮಾರು 50% ರಷ್ಟಿರುವ ಇತರ ಹಿಂದುಳಿದ ವರ್ಗಗಳ (ಒಬಿಸಿ) ಬೆಂಬಲವನ್ನು ಕಳೆದುಕೊಂಡಿದೆ. ದಲಿತರು (22%) ಮತ್ತು ಆದಿವಾಸಿಗಳು (22%) ಹಾಗೂ ಅಲ್ಪಸಂಖ್ಯಾತರು (15%) ಹಾಗೂ ಒಬಿಸಿಗಳನ್ನು ನಿರ್ಲಕ್ಷಿಸುವುದರಿಂದ ದೇಶವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಸಾಮಾಜಿಕ ನ್ಯಾಯದ ಮೇಲೆ ಪಕ್ಷದ ಗಮನವು ಹೆಚ್ಚಿರಬೇಕು” ಎಂದು ರಾಹುಲ್‌ ಗಾಂಧಿ ಒತ್ತಿ ಹೇಳಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆಯು ಬಿಜೆಪಿಯ ‘ಧ್ರುವೀಕರಣ ರಾಜಕಾರಣ’ದ ಭಾಗವಾಗಿದೆ. ಎಂಎಸ್‌ಪಿಗಾಗನ ರೈತರ ಹೋರಾಟ, ಮಹಿಳೆಯರ ಸಬಲೀಕರಣ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ ಸುಂಕಗಳು, ಪ್ಯಾಲೆಸ್ಟೈನ್-ಇಸ್ರೇಲ್ ಸಂಘರ್ಷದಲ್ಲಿ ಅಮಾಯಕರ ಸಾವುಗಳು, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಲ್ಲೆಗಳು, ಚೀನಾ ಜೊತೆಗಿನ ಸಂಘರ್ಷಗಳ ವಿಚಾರದಲ್ಲಿ ಕೇಂದ್ರ ಸರ್ಕಾರದ ದೌರ್ಬಲ್ಯ ಮತ್ತು ವಿಫಲತೆಗಳ ಬಗ್ಗೆ ಕಾಂಗ್ರೆಸ್‌ ಅಧಿವೇಶನದಲ್ಲಿ ಚರ್ಚೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X