ಮೋದಿ ಅಲೆಗೆ ಬೆಚ್ಚಿ ಸ್ಪರ್ಧಿಸದ ಸಚಿವರು: ಬಿ ವೈ ವಿಜಯೇಂದ್ರ

Date:

ಲೋಕಸಭಾ ಚುನಾವಣೆಗೆ 18-20 ಸಚಿವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್‌ನವರು ತೀರ್ಮಾನಿಸಿದ್ದರು. ರಾಜ್ಯದ ಯಾವುದೇ ಒಬ್ಬ ಸಚಿವರೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ತೋರಿಸಿಲ್ಲ. ಕಾರಣ ನರೇಂದ್ರ ಮೋದಿ ಪರ ಅಲೆ ಇದೆ. ಸೋಲುವ ಭಯದಿಂದ ಮುಂದೆ ಬಂದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

- Advertisement -

ಮೈಸೂರಿನಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ರಾಜ್ಯದಲ್ಲಿದ್ದ ಸಣ್ಣಪುಟ್ಟ ಗೊಂದಲಗಳು ಬಗೆಹರಿಯುತ್ತಿವೆ. ಶಿವಮೊಗ್ಗವೂ ಸೇರಿ ಎಲ್ಲ ಸಮಸ್ಯೆಗಳೂ ಪರಿಹಾರವಾಗಲಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

“ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿಯವರು ಪ್ರಧಾನಿ ಆಗುವುದು ಖಚಿತವಾಗಿರುವ ಕಾರಣ ಬಿಜೆಪಿಗೆ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ರಾಜ್ಯದಲ್ಲಿ ಕೆಲವೊಂದು ಸಮಸ್ಯೆಗಳಿದ್ದು, ಅವು ಶೀಘ್ರವೇ ಬಗೆಹರಿಯಲಿವೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

ಕೆ.ಎಸ್.ಈಶ್ವರಪ್ಪ ಅವರ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, “ನಮ್ಮದೊಂದು ರಾಷ್ಟ್ರೀಯ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದರೂ ಬಿಜೆಪಿ ಗೆಲ್ಲುವ ನಿರೀಕ್ಷೆಯಿಂದ ಆಕಾಂಕ್ಷಿಗಳೂ ಹೆಚ್ಚಾಗಿದ್ದರು. ದಾವಣಗೆರೆ ಮತ್ತು ಬೆಳಗಾವಿಗೆ ನಮ್ಮ ರೈತ ನಾಯಕರಾದ ಯಡಿಯೂರಪ್ಪನವರು ಭೇಟಿ ಕೊಟ್ಟು ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಿದ್ದಾರೆ. ಈಶ್ವರಪ್ಪನವರ ಸಮಸ್ಯೆಯೂ ಬಗೆಹರಿಯಲಿದೆ” ಎಂದರು.

“ನಮ್ಮ ಪಕ್ಷದ ಕೇಂದ್ರದ ನಾಯಕತ್ವವು ಕೇವಲ ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರ ಮಾತು ಕೇಳಿ ತೀರ್ಮಾನ ಮಾಡುವುದಿಲ್ಲ. ಒಂದು ಬಲಿಷ್ಠ ನಾಯಕತ್ವ ನಮ್ಮ ಕೇಂದ್ರದಲ್ಲಿದೆ. ಬಲಿಷ್ಠ ನಾಯಕರಾದ ಮೋದಿಜೀ, ನಡ್ಡಾಜೀ, ಅಮಿತ್ ಶಾ ಜೀ ಅವರಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿ ಎಲ್ಲ ನಾಯಕರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು. ಚುನಾವಣೆ ಫಲಿತಾಂಶ ಬಂದಾಗ ಯಾರೆಲ್ಲ ಸಕ್ರಿಯರಾಗಿ ಕೆಲಸ ಮಾಡಿದ್ದಾರೆ ಎಂಬುದು ಗೊತ್ತಾಗಲಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಎಂಸಿ ಚಿಹ್ನೆ ಮುಟ್ಟುಗೋಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಆಂತರಿಕ ಭಿನ್ನಮತ ಮತ್ತು ಬಂಡಾಯದ ಬಳಿಕ ಚುನಾವಣಾ ಆಯೋಗವು...

ಐದು ದಿನಗಳಲ್ಲಿ 12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ತಮಿಳು ಸರ್ಕಾರ–ರಾಜಭವನ ಸಂಬಂಧದಲ್ಲಿ ಹೊಸ ತಿರುವು

ಡಿಎಂಕೆ ಆಡಳಿತವಿದ್ದಾಗ ಮಸೂದೆಗಳು, ವಿಶ್ವವಿದ್ಯಾಲಯಗಳು ಹಾಗೂ ರಾಜ್ಯಪಾಲರ ಅಧಿಕಾರದ ವಿಚಾರದಲ್ಲಿ ನಿರಂತರ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಭೂಮಿ ಹಕ್ಕು ವೇದಿಕೆ ಹೇಳುವುದೇನು?

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA)...