ಸಂದೇಶ್‌ಖಾಲಿ ಪ್ರಕರಣ | ಸಿಬಿಐ ತನಿಖೆಗೆ ಹಸ್ತಾಂತರಿಸಲು ಕಲ್ಕತ್ತಾ ಹೈಕೋರ್ಟ್ ಆದೇಶ

Date:

Advertisements

ತೃಣಮೂಲ ಕಾಂಗ್ರೆಸ್‌ನ ಮಾಜಿ ನಾಯಕ ಶೇಖ್ ಷಹಜಹಾನ್ ಅವರ ಮನೆ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮೇಲೆ ನಡೆದಿದ್ದ ಹಲ್ಲೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕೋಲ್ಕತ್ತಾ ಹೈಕೋರ್ಟ್‌ ಅದೇಶಿಸಿದೆ. ಬಂಧಿತ ಷಹಜಹಾನ್‌ ಅವರನ್ನು ಸಂಜೆ 4:30ರೊಳಗೆ ಸಿಬಿಐ ಕಸ್ಟಡಿಗೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಇಡಿ ಅಧಿಕಾರಿಗಳ ಮೇಲಿನ ದಾಳಿ ಕುರಿತು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ ಎಸ್ ಶಿವಜ್ಞಾನಂ ಅವರನ್ನೊಳಗೊಂಡ ವಿಭಾಗೀಯ ಪೀಠವು ವಿಚಾರಣೆ ನಡೆಸಿದೆ. ಷಹಜಹಾನ್ ವಿರುದ್ಧ ದಾಖಲಾಗಿರುವ ನಝತ್ ಪೊಲೀಸ್ ಠಾಣೆಯಲ್ಲಿನ ಎಫ್‌ಐಆರ್ ಸಂಖ್ಯೆ 8 ಮತ್ತು 9 ಹಾಗೂ ಬಂಗಾವ್ ಪೊಲೀಸ್ ಠಾಣೆಯಲ್ಲಿನ ಎಫ್‌ಐಆರ್ ಸಂಖ್ಯೆ 18 ಅನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಆದೇಶಿಸಿದೆ.

ಈ ಹಿಂದೆ, ಸಂದೇಶಖಾಲಿ ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ಹೈಕೋರ್ಟ್ ರಚಿಸಿತ್ತು. ಮಂಗಳವಾರ, ಎಸ್‌ಐಟಿಯನ್ನು ರದ್ದುಗೊಳಿಸಿರುವ ವಿಭಾಗೀಯ ಪೀಠವು ಸಿಬಿಐ ತನಿಖೆಗೆ ಆದೇಶಿಸಿದೆ. ಆದರೆ, ಹೈಕೋರ್ಟ್‌ ಅದೇಶದ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

Advertisements

ಪಡಿತರ ಹಗರಣ ಪ್ರಕರಣದಲ್ಲಿ ಷಹಜಹಾನ್ ಅವರ ಮನೆ ಮೇಲೆ ದಾಳಿ ಮಾಡಲು ಜನವರಿ 5ರಂದು ಹೊರಟಿದ್ದ ಇಡಿ ತಂಡದ ಮೇಲೆ ಷಹಜಹಾನ್ ಅವರ ನೂರಾರು ಬೆಂಬಲಿಗರು ದಾಳಿ ಮಾಡಿದ್ದರು. ದಾಳಿಯಲ್ಲಿ ಮೂವರು ಇಡಿ ಅಧಿಕಾರಿಗಳು ಗಾಯಗೊಂಡಿದ್ದರು. ತಲೆ ಮರೆಸಿಕೊಂಡಿದ್ದ ಷಹಜಹಾನ್, 55 ದಿನಗಳ ಕಾಲ ಪತ್ತೆಯಾಗಿರಲಿಲ್ಲ.

ಅಧಿಕಾರಿಗಳ ಮೇಲಿನ ದಾಳಿಯ ನಂತರ, ಸಂದೇಶ್‌ಖಾಲಿಯಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಅಲ್ಲಿನ, ಬುಡಕಟ್ಟು ಸಮುದಾಯದ ಜನರು ಷಹಜಹಾನ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಆರೋಪೊ ಷಹಜಹಾನ್ ಮತ್ತು ಆತನ ಸಹಚರರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಲವಂತವಾಗಿ ತಮ್ಮ ಭೂಮಿ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೂವರೆಗೆ, ಷಹಜಹಾನ್ ವಿರುದ್ಧ ಸುಮಾರು 100 ದೂರುಗಳು ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X