ಸಂದೇಶ್‌ಖಾಲಿ ಪ್ರಕರಣ | ‘ನಿಮ್ಮನ್ನು ಮುಂದಿನ 10 ವರ್ಷ ಬ್ಯುಸಿಯಾಗಿಸುತ್ತವೆ’; ಶೇಖ್‌ ಪರ ವಕೀಲರಿಗೆ ಕೋರ್ಟ್‌ ಕಿಡಿ

Date:

Advertisements

ಸಂದೇಶ್‌ಖಾಲಿ ಪ್ರಕರಣದ ಆರೋಪಿ, ಟಿಎಂಸಿ ಪ್ರಬಲ ಮುಖಂಡ ಷಹಜಹಾನ್ ಶೇಖ್ ಪರ ವಕೀಲರ ಕುರಿತು ಕೊಲ್ಕತ್ತಾ ಹೈಕೋರ್ಟ್‌ ಕಟುವಾದ ಮಾತುಗಳನ್ನಾಡಿದೆ. ಶೇಖ್‌ ಅವರಿಗೆ ಜಾಮೀನು ನೀಡುವಂತೆ ವಕೀಲ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ನೇತೃತ್ವದ ಪೀಠವು ತಿರಸ್ಕರಿಸಿದೆ. ಅಲ್ಲದೆ, ‘ಶೇಖ್‌ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲ’ ಎಂದು ಹೇಳಿದೆ.

ಕಳೆದ ತಿಂಗಳು, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ತಂಡದ ಮೇಲೆ ಗುಂಪು ದಾಳಿಗೆ ನಡೆಸಿದ್ದ ಪ್ರಕರಣದಲ್ಲಿ ಶೇಖ್‌ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅಲ್ಲದೆ, ಶೇಖ್‌ ವಿರುದ್ಧ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಪ್ರದೇಶದ ಆದಿವಾಸಿ, ಬುಡಕಟ್ಟು ಜನರು ಸುಮಾರು 100ಕ್ಕೂ ಹೆಚ್ಚು ದೂರುಗಳನ್ನ ದಾಖಲಿಸಿದ್ದಾರೆ. ಶೇಖ್‌ ಮತ್ತು ಸಹಚರರು ತಮ್ಮ ಭೂಮಿಯನ್ನ ಬಲವಂತವಾಗಿ ಕಸಿದುಕೊಂಡಿದ್ದಾರೆ. ಮನರೇಗಾ ಅಡಿಯಲ್ಲಿ ತಮ್ಮ ದುಡಿಮೆಯ ಹಣವನ್ನೂ ಕಿತ್ತುಕೊಂಡಿದ್ದಾರೆ. ಸಮುದಾಯದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳನ್ನ ಎಸಗಿದ್ದಾರೆ ಎಂದು ದೂರುಗಳಲ್ಲಿ ಆರೋಪಿಸಿದ್ದಾರೆ.

ಕಳೆದ 55 ದಿನಗಳಿಂದ ತಲೆ ಮರೆಸಿಕೊಂಡಿದ್ದ ಶೇಖ್‌ ಅವರನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಗುರುವಾರ, ಶೇಖ್‌ ಅವರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿಗಳು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಪ್ರಕರಣದ ವಿಚಾರಣೆ ಸೋಮವಾರ ನಡೆಯಲಿದ್ದು, ಅಂದು ಬನ್ನಿ ಎಂದಿದ್ದಾರೆ.

Advertisements

“ಮಿಸ್ಟರ್ ಕೌನ್ಸಿಲ್ (ವಕೀಲ), ಈ ವ್ಯಕ್ತಿಯ -ಶೇಖ್‌ – ವಿರುದ್ಧ ಸುಮಾರು 43 ಪ್ರಕರಣಗಳಿವೆ. ಗಮನದಲ್ಲಿಟ್ಟುಕೊಳ್ಳಿ, ಈಗ ಮುಂದಿನ 10 ವರ್ಷಗಳವರೆಗೆ, ಈ ವ್ಯಕ್ತಿ ನಿಮ್ಮನ್ನು ಬ್ಯುಸಿಯಾಗಿರಿಸುತ್ತಾರೆ. ಮುಂದಿನ 10 ವರ್ಷಗಳವರೆಗೆ ನೀವು ಅವರ ಎಲ್ಲ ಪ್ರಕರಣಗಳನ್ನು ನಿರ್ವಹಿಸಬೇಕಾಗುತ್ತದೆ,” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

“ಆ ವ್ಯಕ್ತಿಯ ಬಗ್ಗೆ ನಮಗೆ ಯಾವುದೇ ಸಹಾನುಭೂತಿ ಇಲ್ಲ. ದಯವಿಟ್ಟು ಸೋಮವಾರ ಬನ್ನಿ, ಈಗ ಅಲ್ಲ” ಎಂದು ಪೀಠ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X