ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ, ಹೃದಯದಿಂದ ಜನಸೇವೆ ಮಾಡಿ: ಕೃಷ್ಣಭೈರೇಗೌಡ

Date:

Advertisements
  • ಕಂದಾಯ ದಿನಾಚರಣೆ, ಕಾರ್ಯಾಗಾರ ಉದ್ಘಾಟಿಸಿ ಅಭಿಮತ
  • ‘ಜನರಿಗೆ ಒಳಿತನ್ನು ಮಾಡುವುದಷ್ಟೆ ನಮ್ಮ ಕೆಲಸವಾಗಲಿ’

ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಕಂದಾಯ ಇಲಾಖೆ ನೌಕರರೂ ಸಹ ಮಾತೃ ಹೃದಯದಿಂದ ಜನಸೇವೆಗೆ ಮುಂದಾಗಬೇಕು ಎಂದು ಸಚಿವ ಕೃಷ್ಣಭೈರೇಗೌಡ ಕಿವಿಮಾತು ಹೇಳಿದರು.

ಕಂದಾಯ ದಿನಾಚರಣೆಯ ಅಂಗವಾಗಿ ಇಲಾಖೆ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ನೌಕರರಿಗೆ ಕಾರ್ಯಾಗಾರ ಉದ್ಘಾಟಿಸಿ ಸಚಿವರು ಮಾತನಾಡಿದರು.

“ಹಿಂದಿನ ಸರ್ಕಾರದ ದುರಾಡಳಿತದಿಂದ ಬೇಸತ್ತಿದ್ದ ಜನ ಭರವಸೆಯಿಂದ ನಮಗೆ ಅಧಿಕಾರ ನೀಡಿದ್ದಾರೆ. ನಮ್ಮ ಸರ್ಕಾರದ ಮೇಲೆ ಜನರಿಗೆ ಭರವಸೆ ಇದೆ. ಆದರೆ, ಸರ್ಕಾರಿ ನೌಕರರ ಸಹಕಾರ ಇಲ್ಲದೆ ಜನಸೇವೆ ಹಾಗೂ ಉತ್ತಮ ಆಡಳಿತ ಅಸಾಧ್ಯ. ನಮ್ಮೆಲ್ಲರ ಮೇಲೆ ಜವಾಬ್ದಾರಿ ಇದೆ. ಕಂದಾಯ ಇಲಾಖೆ‌ ಎಲ್ಲ ಇಲಾಖೆಗಳ ಮಾತೃ ಇಲಾಖೆ ಎಂದು ಹೇಳಿದರೆ ಮಾತ್ರ ಸಾಲದು. ಜನಸೇವೆಯನ್ನೂ ಮಾತೃ ಹೃದಯದಿಂದ ಮಾಡಬೇಕು” ಎಂದರು.

Advertisements

“ಕಂದಾಯ ಇಲಾಖೆ ಮನಸ್ಸು ಮಾಡಿದರೆ ಜನರಿಗೆ ಒಳ್ಳೆಯದನ್ನೂ ಮಾಡಬಹುದು ಕೆಟ್ಟದ್ದನ್ನೂ ಮಾಡಬಹುದು. ಆದರೆ, ಜನರಿಗೆ ಒಳಿತನ್ನು ಮಾಡುವುದಷ್ಟೆ ನಮ್ಮ ಕೆಲಸವಾಗಲಿ. ಕಂದಾಯ ಇಲಾಖೆ ಪ್ರತಿದಿನ ಒಂದಲ್ಲಾ ಒಂದು ರೀತಿಯಲ್ಲಿ ಜನರ ಜೊತೆಗೆ ಸಂಪರ್ಕ ಹೊಂದಿರುವ ಇಲಾಖೆ. ಜನ ಸೇವೆ ಮಾಡಲು ನಿಮಗೆ ಅವಕಾಶ ಸಿಕ್ಕಿದೆ. ಅವಕಾಶ ಸಿಗದವರು ಕೋಟ್ಯಂತರ ಜನ ಹೊರಗಿದ್ದಾರೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂತ್ರಾಲಯದಲ್ಲಿ ರಾಮನ ವಿಗ್ರಹ; ಆಂಧ್ರದಲ್ಲಿ ಬಿಜೆಪಿಯ ಪ್ರತಿಮಾ ರಾಜಕಾರಣ

“ನಿಮ್ಮ ನ್ಯಾಯಯುತ ಕೋರಿಕೆಗಳನ್ನು ಈಡೇರಿಸಲೂ ಸಹ ನಾವು ಸಿದ್ದರಾಗಿದ್ದೇವೆ. ಈಗಾಗಲೇ ಕಂದಾಯ ಇಲಾಖೆ ಆಯುಕ್ತಾಲಯವನ್ನು ಕೇವಲ ಎರಡು ತಿಂಗಳಲ್ಲಿ ನಿರ್ಮಿಸಲಾಗಿದೆ. ಮುಂಬಡ್ತಿಗೆ ಸಂಬಂಧಿಸಿದ ನಿಮ್ಮ ಕೋರಿಗೆಯ ಬಗ್ಗೆಯೂ ಚಿಂತಿಸಲಾಗುವುದು” ಎಂದು ಕೃಷ್ಣಭೈರೇಗೌಡ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಂಘದ ವೆಬ್ಸೈಟ್ ಬಿಡುಗಡೆ ಮಾಡಲಾಯಿತು. ‌ಸಚಿವರ ತಂದೆ ದಿವಂಗತ ಮಾಜಿ ಸಚಿವ ಸಿ ಭೈರೇಗೌಡ ಅವರ ವರ್ಣಚಿತ್ರ ಉಡುಗೊರೆಯಾಗಿ ನೀಡಲಾಯಿತು. ಕೆಎಎಸ್ ಸಂಘದ ಅಧ್ಯಕ್ಷ ರವಿ ತಿರ್ಲಾಪುರ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X