ಅಧಿವೇಶನ-2023 | ಅಧಿವೇಶನ ಆರಂಭದ ದಿನವೇ ಕಣ್ಣೀರಿಟ್ಟ ಡಿಕೆ ಶಿವಕುಮಾರ್!

Date:

Advertisements

ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು 16ನೇ ವಿಧಾನಸಭೆಯ ಮೊದಲ ಅಧಿವೇಶನದ ಆರಂಭದ ದಿನವೇ ಕಣ್ಣೀರಿಟ್ಟ ಘಟನೆ ನಡೆಯಿತು.

ರಾಜ್ಯಪಾಲರ ಭಾಷಣದ ಬಳಿಕ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಈ ವೇಳೆ ಡಿಕೆ ಶಿವಕುಮಾರ್‌ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್‌ ಧೃವನಾರಾಯಣ ನಿಧನಕ್ಕೆ ಸಂತಾಪ ಸೂಚಿಸಿ, ಕಣ್ಣೀರಿಟ್ಟರು.

“ಸುರೇಶ್‌ ನನಗೆ ಯಾವ ರೀತಿ ಸಹೋದರನಾಗಿದ್ದನೋ ರಾಜಕಾರಣದಲ್ಲಿ ಆರ್‌ ಧೃವನಾರಾಯಣ ನನಗೆ ಸಹೋದರನಾಗಿದ್ದ. ಅವರ ಅಗಲಿಕೆಯಿಂದ ನನಗೆ ಜೀವನದಲ್ಲಿ ಯಾವುದು ಶಾಶ್ವತವಲ್ಲ ಅನ್ನಿಸಿದೆ” ಎಂದರು.

Advertisements

“ರಾಜ್ಯ ಕಾಂಗ್ರೆಸ್‌ ಅಧ್ಯಕ್ಷನಾಗಿ ಚುನಾವಣೆಯಲ್ಲಿ ಅನೇಕ ಜಿಲ್ಲೆಗಳ ಉಸ್ತುವಾರಿ ವಹಿಸಿಕೊಂಡಿದ್ದೆ. ಅವರು ಕಾರ್ಯನಿರ್ವಹಿಸಿದ ಜಿಲ್ಲೆಗಳ ಫಲಿತಾಂಶ ನೋಡಿದರೆ ನನಗೇ ಆಶ್ಚರ್ಯವಾಗುತ್ತದೆ. ಧೃವನಾರಾಯಣ ನಿಭಾಯಿಸಿದ ಉಸ್ತುವಾರಿ ಜಿಲ್ಲೆಗಳಲ್ಲಿ ಶೇ.75 ರಷ್ಟು ನಮ್ಮ ಶಾಸಕರು ಗೆದ್ದಿದ್ದಾರೆ. ಇಂದು ನಮ್ಮ ಜೊತೆ ಅವರು ಇದ್ದಿದ್ದರೆ ಖಂಡಿತ ಸಚಿವರಾಗಿ ಇರುತ್ತಿದ್ದರು” ಎಂದರು,

“ನನಗೆ ಎಷ್ಟು ದುಃಖ ಆಗಿದೆ ಎಂದರೆ ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಇಳಿದರೆ ಆರ್‌ ಧೃವನಾರಾಯಣ ಅವರನ್ನೇ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂಬ ಮಹದಾಸೆ ಇಟ್ಟುಕೊಂಡಿದ್ದೆ. ಆದರೆ ವಿಧಿ ಲಿಖಿತ ಬೇರೆ ಇದೆ. ಆದರೆ ಯಾಕೆ ಸತ್ತರು ಎನ್ನುವ ಚರ್ಚೆಗೆ ನಾನು ಹೋಗಲ್ಲ. ಒಬ್ಬ ಶ್ರೇಷ್ಠ ಸ್ನೇಹಿತನನ್ನು ಕಳೆದುಕೊಂಡಿರುವ ನೋವು ನನಗಿದೆ” ಎಂದು ಭಾವುಕರಾಗಿ ನುಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X