ಅಧಿವೇಶನ | ನಾಲೆಗಳ ರಕ್ಷಣೆಗೆ ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Date:

ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಹಾಗೂ ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ತಲುಪಿಸಲು ತಂದಿರುವ ನೀರಾವರಿ ತಿದ್ದುಪಡಿ ಕಾಯ್ದೆ- 2024ಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು.

- Advertisement -

ನೀರಾವರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ವೇಳೆ ಮಾತನಾಡಿದ ಅವರು, “1964ರಲ್ಲಿ ಈ ವಿಚಾರದ ಬಗ್ಗೆ ಕಾಯ್ದೆ ಮಾಡಲಾಗಿತ್ತು. ನಂತರ ಯಾವುದೇ ತಿದ್ದುಪಡಿಗಳು ಆಗಿರಲಿಲ್ಲ. ಕಾಲುವೆಗಳಿಗೆ ಯಾರೂ ಸಹ ಪಂಪ್ ಸೆಟ್ ಗಳನ್ನು ಹಾಕಬಾರದು ಹಾಗೂ ಅಕ್ಕಪಕ್ಕದ ರೈತರು ನೀರು ತೆಗೆಯಲು ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕು. ನೀರಾವರಿ ವಿಚಾರದಲ್ಲಿ ನಡೆಯುವ ಅಕ್ರಮಗಳ ತೀರ್ಮಾನಕ್ಕೆ ಸೂಪರಿಡೆಂಟ್ ಎಂಜಿನಿಯರ್ ಗೆ ಹಕ್ಕು ನೀಡಲಾಗಿದೆ. ಪ್ರತಿಪಕ್ಷಗಳ ಶಾಸಕರ ಅಭಿಪ್ರಾಯಗಳನ್ನೂ ಸ್ವೀಕರಿಸಲಾಗಿದೆ. ರೈತರಿಗೆ ನೀರು ಕೊಡುವ ನಾಲೆಗಳ ರಕ್ಷಣೆಗೆ ಈ ಕಾನೂನು ತರಲಾಗಿದೆ” ಎಂದರು.

ವಿಧೇಯಕ ಮಂಡನೆ ಬಳಿಕ ಸ್ಪೀಕರ್ ಅವರು ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದರು. ಸದನವು ವಿಧೇಯಕವನ್ನು ಅಂಗೀಕರಿಸಿತು.

ಕಳೆದ ಮಂಗಳವಾರ (ಜುಲೈ 16) ಶಾಸಕ ಜಗದೀಶ್ ಶಿವ ಗುಡಗಂಟಿ ಅವರು ತುಂಗಳ- ಸಾವಳಗಿ ಏತ ನೀರಾವರಿ ಯೋಜನೆಯ ಕೊನೆಯ ಭಾಗಗಳ ರೈತರಿಗೆ ನೀರು ತಲುಪುತ್ತಿಲ್ಲ ಎನ್ನುವ ವಿಚಾರವಾಗಿ ಗಮನ ಸೆಳೆದಾಗ ಉತ್ತರಿಸಿದ್ದ ಡಿಸಿಎಂ ಅವರು, “ನಾಲೆಗಳಿಂದ ಅನೇಕ ಕಡೆ ಶೇ 90 ರಷ್ಟು ನೀರನ್ನು ಪಂಪ್ ಮಾಡಲಾಗುತ್ತಿದೆ. ಸದನ ಒಪ್ಪುವುದಾದರೆ ವಾರದೊಳಗೆ ಬಿಲ್ ತಯಾರು ಮಾಡಲಾಗುವುದು ಎಂದು ಭರವಸೆ ನೀಡಿದ್ದರು.

“ಮಂಡ್ಯ, ಹಾಸನ, ಬಾಗಲಕೋಟೆ ಸೇರಿದಂತೆ ರಾಜ್ಯದ ನೀರಾವರಿ ಪ್ರದೇಶಗಳ ಟೇಲ್ ಎಂಡ್ ಭಾಗಗಳಿಗೆ ನೀರು ತಲುಪುತ್ತಿಲ್ಲ. ಏತ ನೀರಾವರಿ ಮಾಡಿದರೂ ಸಹ ಶೇ 50 ರಷ್ಟು ನೀರು ಸಹ ಹೋಗುತ್ತಿಲ್ಲ. ಎಲ್ಲರೂ ಸಹಕಾರ ಕೊಟ್ಟರೇ ನಾವು ನೀರಿನ ರಕ್ಷಣೆ ಮಾಡಿ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತೆ ಮಾಡುವ ಕಾನೂನು ತರಲಾಗುವುದು” ಎಂದು ಡಿಸಿಎಂ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...