ಪ್ರಧಾನಿ ಮೋದಿಯವರ ಹಲವು ಹೇಳಿಕೆಗಳು ನೀತಿ ಸಂಹಿತೆ ಉಲ್ಲಂಘಿಸುತ್ತವೆ: ಸೀತಾರಾಮ್ ಯೆಚೂರಿ

Date:

“ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆಗಳಾಗಿವೆ” ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆರೋಪಿಸಿದರು.

- Advertisement -

ಕೇರಳದ ಕೋಳಿಕ್ಕೋಡ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಹಿರಿಯ ಸಿಪಿಐ(ಎಂ) ನಾಯಕ ಯೆಚೂರಿ ಅವರು ರಾಮನ ವಿಚಾರದಲ್ಲಿ ಕೋಮು ಧ್ರುವೀಕರಣ ಮಾಡುವ ಉದ್ದೇಶದಿಂದ ಪ್ರಧಾನಿ ಮೋದಿ ನೀಡಿರುವ ಹೇಳಿಕೆಗಳನ್ನು ಪಟ್ಟಿ ಮಾಡಿ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಸಂದರ್ಭದಲ್ಲೇ ಎಡರಂಗವು ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ವಿರೋಧಿಸುವುದಿಲ್ಲ ಎಂದು ಹೇಳುವ ಕಾಂಗ್ರೆಸ್‌ ಮತ್ತು ಯುಡಿಎಫ್ ಅನ್ನು ಟೀಕಿಸಿದರು. “ಮೋದಿ ವಿರುದ್ಧ ನಿರಂತರವಾಗಿ ಎಲ್‌ಡಿಎಫ್ ಅದರಲ್ಲೂ ವಿಶೇಷವಾಗಿ ಸಿಪಿಐ(ಎಂ) ವಾಗ್ದಾಳಿ ನಡೆಸುತ್ತಿರುವಾಗ ಎಲ್‌ಡಿಎಫ್‌ ಮೌನವಾಗಿದೆ ಎಂದು ಕಾಂಗ್ರೆಸ್ ಮತ್ತು ಯುಡಿಎಫ್ ಆರೋಪಿಸುತ್ತಿರುವುದು ವಿಚಿತ್ರವಾಗಿದೆ” ಎಂದರು.

ಇದನ್ನು ಓದಿದ್ದೀರಾ?   ಲೋಕಸಭಾ ಚುನಾವಣೆ | ಸುದೀರ್ಘ ಚುನಾವಣೆ ವಿಪಕ್ಷಗಳಿಗೆ ಅನನುಕೂಲ: ಯೆಚೂರಿ

ಸಿಎಎ ವಿರೋಧಿಸಿ ಬಂಧನಕ್ಕೊಳಗಾದ ಮೊದಲ ರಾಜಕೀಯ ನಾಯಕರಲ್ಲಿ ತಾನು ಕೂಡಾ ಒಬ್ಬರು ಎಂದು ಹೇಳಿದ ಯೆಚೂರಿ ಅವರು, 370 ನೇ ವಿಧಿಯ ನಂತರ ಕಾಶ್ಮೀರದಲ್ಲಿ ರಾಜಕಾರಣಿಗಳ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು ಮೊದಲು ಎಡರಂಗ, ಜೊತೆಗೆ ಚುನಾವಣಾ ಬಾಂಡ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು ಮೊದಲು ಸಿಪಿಐಎಂ ಎಂದು ಕೇಂದ್ರದ ನಿರ್ಧಾರಗಳ ವಿರುದ್ಧ ಸಿಪಿಐಎಂನ ನಡೆಯ ಬಗ್ಗೆ ವಿವರಣೆ ನೀಡಿದರು.

“ಈ ಎಲ್ಲಾ ವಿಷಯಗಳಲ್ಲಿ ಮತ್ತು ಇತರ ಹಲವು ವಿಷಯಗಳಲ್ಲಿ ಬಿಜೆಪಿಯನ್ನು ವಿರೋಧಿಸಿದ ಮೊದಲ ಪಕ್ಷ ಸಿಪಿಐ(ಎಂ). ಹಾಗಿರುವಾಗ ಈ ಎಲ್ಲಾ ಸಂದರ್ಭಗಳಲ್ಲಿ ಬಿಜೆಪಿಯನ್ನು ವಿರೋಧಿಸುವುದಿಲ್ಲ ಎಂದು ನಮ್ಮ ಮೇಲೆ ಆರೋಪ ಮಾಡಿದವರು ಎಲ್ಲಿದ್ದಾರೆ” ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ?   ಸಿಎಎ | ಸುಪ್ರೀಂ ಕೋರ್ಟ್‌ನಲ್ಲಿ ಇಂದು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆ

ಜೊತೆಗೆ “ನಮ್ಮ ರಾಜಕೀಯ ನಿಲುವು ಮತ್ತು ನೀತಿಗಳನ್ನು ಖಂಡಿಸಿ, ಪ್ರಚಾರ ಮಾಡಿ. ಆದರೆ ದಾಳಿ ಮಾಡುವುದು, ಸುಳ್ಳು ಪ್ರಚಾರ ಮಾಡುವುದು, ವೈಯಕ್ತಿಕ ದಾಳಿ ನಡೆಸುವ ಕಾರ್ಯವನ್ನು ಮಾತ್ರ ಮಾಡಬೇಡಿ ಎಂದು ನಾನು ಎಲ್ಲರಲ್ಲೂ ಮನವಿ ಮಾಡುತ್ತೇನೆ. ನಾವು ಅಭಿಯಾನದ ಸೌಜನ್ಯವನ್ನು ಕಾಪಾಡಿಕೊಳ್ಳೋಣ” ಎಂದು ವಿನಂತಿಸಿದರು.

ಕೇರಳದಲ್ಲಿ ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ಬಿಹಾರದಲ್ಲಿ 14,500 ಮಕ್ಕಳು ನಾಪತ್ತೆ: ಎಫ್‌ಐಆರ್ ವಿಳಂಬಕ್ಕೆ ಪೊಲೀಸರ ವಿರುದ್ಧ ಹೈಕೋರ್ಟ್‌ ಗರಂ

ನಳಂದಾ ಜಿಲ್ಲೆಯ ಆಸ್ಪತ್ರೆಯೊಂದರಿಂದ ನವಜಾತ ಶಿಶು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್...