ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರದಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪನ್ನು ಮೇ.20ರವರೆಗೆ ಕಾಯ್ದಿರಿಸಿದೆ.
ಹೊಳೆನರಸೀಪುರದಲ್ಲಿ ಎಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿ ಶುಕ್ರವಾರದವರೆಗೆ ವಿಚಾರಣೆ ಮುಂದೂಡಲಾಗಿತ್ತು. ಈ ಷರತ್ತು ಬದ್ಧ ಮಧ್ಯಂತರ ಜಾಮೀನು ಮೇ.20ರವರೆಗೆ ಮುಂದುವರೆಯಲಿದೆ.
ಐದು ಲಕ್ಷ ರು. ಬಾಂಡ್, ಇಬ್ಬರ ಶ್ಯೂರಿಟಿ ಹಾಗೂ ಎಸ್ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತುವಿಧಿಸಿ ಶುಕ್ರವಾರ ಮಧ್ಯಾಹ್ನದವರೆಗೆ ಷರತ್ತು ಬದ್ಧ ಜಾಮೀನು ನೀಡಿತ್ತು.
ಇಂದು ಮಧ್ಯಾಹ್ನ ವಿಚಾರಣೆ ನಡೆಸಿ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯವು ರೇವಣ್ಣ ಅವರಿಗೆ ಜಾಮೀನು ಕೊಡಬೇಕೋ ಬೇಡವೋ ಎಂಬ ತೀರ್ಪನ್ನು ಸೋಮವಾರ ಅಂದರೆ ಮೇ.20ಕ್ಕೆ ನಿರ್ಧರಿಸುವುದಾಗಿ ಹೇಳಿ, ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.
ಇದನ್ನು ಓದಿದ್ದೀರಾ? ಸ್ವಾತಿ ಮಲಿವಾಲ್ ಪ್ರಕರಣ | ಎಫ್ಐಆರ್ ಬಳಿಕ ಹೊರಗಡೆ ಬಂದ ಘಟನೆಯ ಹೊಸ ವೀಡಿಯೋ!
ರೇವಣ್ಣ ಪರ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದ್ದರು. ಈಗಾಗಲೇ ಮೈಸೂರು ಕೆ.ಆರ್ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದಿರುವುದರಿಂದ ರೇವಣ್ಣ ಜೈಲಿಂದ ಬಿಡುಗಡೆ ಹೊಂದಿದ್ದಾರೆ.
