‘ಶಕ್ತಿ’ ಯೋಜನೆ | ಸ್ಮಾರ್ಟ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಲು ಪ್ರತ್ಯೇಕ ವೆಬ್‌ಸೈಟ್‌ ಶೀಘ್ರ ಕಾರ್ಯಾರಂಭ: ಸಚಿವ ರಾಮಲಿಂಗಾ ರೆಡ್ಡಿ

Date:

Advertisements
  • ಸೇವಾ ಸಿಂಧು ಪೋರ್ಟಲ್‌ನಲ್ಲೂ ಅರ್ಜಿ ಸಲ್ಲಿಸಲು ಅವಕಾಶ
  • ಗುರುತಿನ ಚೀಟಿ ಅಪ್‌ಲೋಡ್ ಮಾಡಿ ಸ್ಮಾರ್ಟ್‌ ಕಾರ್ಡ್‌ ಪಡೆಯಬಹುದು

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಪ್ರತ್ಯೇಕವಾಗಿ ಹೊಸ ವೆಬ್‌ಸೈಟ್‌ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, “ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್‌ಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ಗಳಿಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ” ಎಂದರು.

“ಸೇವಾ ಸಿಂಧು ಪೋರ್ಟಲ್‌ನಲ್ಲೂ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್‌ ಪಡೆಯಬಹುದು. ಯಾವುದೇ ಗುರುತಿನ ಚೀಟಿಯನ್ನು ಅಪ್‌ಲೋಡ್ ಮಾಡುವ ಮೂಲಕ ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಅಲ್ಲಿಯವರೆಗೂ ಸರ್ಕಾರ ನೀಡಿದ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮಹಿಳೆಯರು ಮೂರು ತಿಂಗಳವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ರಿವಾರ್ಡ್ ಯೋಜನೆ | ವಿಶ್ವಬ್ಯಾಂಕ್ ತಂಡದೊಂದಿಗೆ ವಿಸ್ತೃತ ಚರ್ಚೆ

“ಈ ಯೋಜನೆಯಿಂದ ನಿಗಮಗಳ ಆದಾಯ ಹೆಚ್ಚಿದೆ. ಇದರಿಂದ ಸರ್ಕಾರ, ಪಾಲಿಕೆ ಹಾಗೂ ನಮ್ಮ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ. ಬಿಜೆಪಿ ಶಕ್ತಿಹೀನವಾಗಿದೆ. ಏಕೆಂದರೆ ಅವರು (ಬಿಜೆಪಿಯವರು) ಮಹಿಳೆಯರನ್ನು ಬೆಂಬಲಿಸುವುದಿಲ್ಲ” ಎಂದರು.

“ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ 8,24,93,637 ಮಹಿಳೆಯರು ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. 194,50,13,686 ರೂಪಾಯಿ ಮೌಲ್ಯದ ಟಿಕೆಟ್‌ಗಳನ್ನು ವಿತರಿಸಲಾಗಿದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X