ಸರ್ಕಾರ ರಚಿಸಲು ಒಪ್ಪಿಕೊಂಡು ಮೋಸ ಮಾಡಿದ್ದ ಶರದ್ ಪವಾರ್: ದೇವೇಂದ್ರ ಫಡ್ನವಿಸ್

Date:

Advertisements

ಶರದ್‌ ಪವಾರ್ ಅವರು 2019 ರಲ್ಲಿ ಬಿಜೆಪಿ – ಎನ್‌ಸಿಪಿ ಸರ್ಕಾರ ರಚಿಸಲು ಮೊದಲು ಒಪ್ಪಿಗೆ ನೀಡಿ 3-4 ದಿನಗಳ ನಂತರ ಹಿಂದೆ ಸರಿಯುವ ಮೂಲಕ ಇಬ್ಬಗೆ ನೀತಿ ಅನುಸರಿಸಿದ್ದರು. ಹೀಗಾಗಿ ಅಜಿತ್‌ ಪವಾರ್‌ ಅವರು ಆಗ ಪ್ರಮಾಣ ವಚನ ಸ್ವೀಕರಿಸದೆ ಬೇರೆ ದಾರಿಯಿರಲಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, 2019ರಲ್ಲಿ ಅಜಿತ್‌ ಪವಾರ್‌ ಅವರು ಬಿಜೆಪಿ ಸರ್ಕಾರದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಗೆಯನ್ನು ವಿವರಿಸಿದ್ದಾರೆ. ಆ ಸಂದರ್ಭದಲ್ಲಿ ಶರದ್‌ ಪವಾರ್‌ ಸೇರಿದಂತೆ ಎನ್‌ಸಿಪಿಯ ಕೆಲವು ನಾಯಕರು ಬಿಜೆಪಿಯನ್ನು ಸಂಪರ್ಕಿಸಿದ್ದರು. ನಮ್ಮ ಪಕ್ಷವು ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ಬೆಂಬಲ ನೀಡುತ್ತದೆ ಎಂದಿದ್ದರು ಎಂದು ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.

“2019ರಲ್ಲಿ ಶರದ್ ಪವಾರ್ ಅವರೊಂದಿಗೆ ಸಭೆ ನಡೆದ ನಂತರ ಕೆಲವೊಂದು ಕಾರ್ಯತಂತ್ರದ ಜೊತೆಗೆ ಸರ್ಕಾರ ರಚಿಸಲಾಗುವುದೆಂದು ನಿರ್ಧರಿಸಲಾಯಿತು. ನನಗೆ ಮತ್ತು ಅಜಿತ್ ಪವಾರ್ ಅವರಿಗೆ ಸರ್ಕಾರ ರಚಿಸಲು ಎಲ್ಲ ಅಧಿಕಾರವನ್ನು ನೀಡಲಾಯಿತು. ಅದರಂತೆ ನಾವು ಸಿದ್ಧತೆಗಳನ್ನು ನಡೆಸಿದ್ದೆವು. ಆದರೆ ಪ್ರಮಾಣ ವಚನಕ್ಕೆ 3-4 ದಿನಗಳ ಮೊದಲು ಶರದ್ ಪವಾರ್‌ ಬೆಂಬಲವನ್ನು ಹಿಂತೆಗೆದುಕೊಂಡರು. ಆ ಕಾರಣದಿಂದ ಎನ್‌ಸಿಪಿಯ ಶಾಸಕರ ಬೆಂಬಲವಿಲ್ಲದಿದ್ದರೂ ಅಜಿತ್ ಪವಾರ್ ಅವರು ನಮ್ಮೊಂದಿಗೆ ಪ್ರಮಾಣ ವಚನ ಸ್ವೀಕರಿಸದೆ ಬೇರೆ ವಿಧಿಯಿರಲಿಲ್ಲ. ಅಲ್ಲದೆ ಸ್ವೀಕಾರ ಸಮಾರಂಭಕ್ಕೆ ಶರದ್ ಪವಾರ್ ಕೂಡ ಬರುತ್ತಾರೆಂದು ಅಜಿತ್‌ ಹೇಳಿದ್ದರು” ಎಂದು ದೇವೇಂದ್ರ ಫಡ್ನವಿಸ್ ಸಂದರ್ಶನದಲ್ಲಿ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಚಂದ್ರಯಾನ 3 ದಿನಾಂಕ ಘೋಷಿಸಿದ ಇಸ್ರೋ

“ಶರದ್‌ ಪವಾರ್‌ ಅವರೊಂದಿಗಿನ ಚರ್ಚೆಯೊಂದಿಗೆ ಸರ್ಕಾರ ರಚನೆಯ ಪ್ರಕ್ರಿಯೆ ಪ್ರಾರಂಭವಾಯಿತು. ಉದ್ಧವ್‌ ಠಾಕ್ರೆ ಕೂಡ ಮೈತ್ರಿ ಮುರಿದುಕೊಂಡು ಬೆನ್ನಿಗೆ ಚೂರಿ ಹಾಕಿದರು. ಶರದ್‌ ಪವಾರ್‌ ಕೂಡ ಇಬ್ಬಗೆ ನೀತಿ ಅನುಸರಿಸಿದರು” ಎಂದು ತಿಳಿಸಿದ್ದಾರೆ.

“ಉಪಮುಖ್ಯಮಂತ್ರಿಯಾಗಿರುವುದು ಕೂಡ ನನಗೆ ಖಂಡಿತಾ ಆಘಾತವಾಗಿದೆ. ಪಕ್ಷಕ್ಕಾಗಿ ಕೆಲಸ ಮಾಡುವ ಹಿತದೃಷ್ಟಿಯಿಂದ ನನ್ನ ಮನಸ್ಥಿತಿಯನ್ನು ಬದಲಾಯಿಸಿಕೊಂಡೆ. ಆದರೆ ಈ ಬಗ್ಗೆ ಇಂದು ಯಾರಾದರೂ ಕೇಳಿದರೆ ನನ್ನ ನಿರ್ಧಾರ ಸರಿ ಎಂದು ಹೇಳುವೆ. ಪಕ್ಷವನ್ನು ನೋಡಿಕೊಳ್ಳಲು ಹಾಗೂ ನನ್ನ ಅನುಭವದಿಂದ ಸರ್ಕಾರ ಕೂಡ ಪ್ರಯೋಜನ ಪಡೆಯುತ್ತಿದೆ. ಮುಖ್ಯಮಂತ್ರಿ ಹುದ್ದೆಯ ದುರಾಸೆಯಿಂದ ನಾನು ಆ ಹುದ್ದೆ ಅಲಂಕರಿಸಿದರೆ ನನ್ನ ಪಕ್ಷಕ್ಕೆ ತಪ್ಪು ಸಂದೇಶ ಹೋಗುತ್ತದೆ, ಹಾಗಾಗಿ ಪಕ್ಷದ ಆದೇಶದಂತೆ ನಾನು ಉಪ ಮುಖ್ಯಮಂತ್ರಿಯಾದೆ. ಪಕ್ಷದ ಮುಖಂಡರು ಕೂಡ ಸರ್ಕಾರದಲ್ಲಿ ಅನುಭವಿಯಾದವರು ಇರಬೇಕೆಂದು ನನ್ನನ್ನು ಈ ಹುದ್ದೆಗೆ ನೇಮಿಸಿದ್ದಾರೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X