ದಣಿವೂ ಇಲ್ಲ, ನಿವೃತ್ತಿಯೂ ಆಗಿಲ್ಲ: ಅಜಿತ್‌ ಪವಾರ್‌ಗೆ ಶರದ್‌ ಪವಾರ್‌ ತಿರುಗೇಟು

Date:

Advertisements
  • ಇಂಡಿಯಾ ಟುಡೇನ ಮರಾಠಿ ಡಿಜಿಟಲ್‌ ವಾಹಿನಿ ಮುಂಬೈ ಟಾಕ್‌ ಸಂದರ್ಶನದಲ್ಲಿ ಶರದ್‌ ಪವಾರ್‌ ಮಾತು
  • ವಯಸ್ಸಿನ ಕಾರಣದಿಂದ ರಾಜಕಾರಣದಿಂದ ಶರದ್‌ ಪವಾರ್ ನಿವೃತ್ತಿಗೆ ಸಲಹೆ ನೀಡಿದ್ದ ಅಜಿತ್‌ ಪವಾರ್

“ನನಗೆ ಇನ್ನೂ ದಣಿವಾಗಿಲ್ಲ. ಹಾಗೆಯೇ ಇನ್ನೂ ನಿವೃತ್ತಿಯೂ ಆಗಿಲ್ಲ” ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ತಮ್ಮ ಸಹೋದರನ ಪುತ್ರ ಅಜಿತ್ ಪವಾರ್ ಮಾತಿಗೆ ಶನಿವಾರ (ಜುಲೈ 8) ತಿರುಗೇಟು ನೀಡಿದ್ದಾರೆ.

ತಾವು ಸಕ್ರಿಯ ರಾಜಕಾರಣದಿಂದ ನಿವೃತ್ತರಾಗಬೇಕು ಎಂದು ಅಜಿತ್‌ ನೀಡಿದ ಸಲಹೆಗೆ ಶರದ್‌ ಪವಾರ್‌ ಹೀಗೆ ಪ್ರತಿಕ್ರಿಯಿಸಿದ್ದಾರೆ.

ಪಕ್ಷದ ಕಾರ್ಯಕರ್ತರು ಅಧ್ಯಕ್ಷನಾಗಿ ತಮ್ಮ ಸೇವೆಯನ್ನು ಮುಂದುವರಿಸಲು ಬಯಸಿದ್ದಾರೆ ಎಂದು ಇದೇ ವೇಳೆ ಪವಾರ್‌ ಹೇಳಿದರು.

Advertisements

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೊರಾರ್ಜಿ ದೇಸಾಯಿ ಅವರು ಯಾವ ವಯಸ್ಸಿನಲ್ಲಿ ಪ್ರಧಾನಿ ಆದರು ಎಂಬುದು ಗೊತ್ತಿದೆಯೇ? ನಾನು ಪ್ರಧಾನಿ ಆಗಲು ಅಥವಾ ಸಚಿವನಾಗಲು ಬಯಸುವುದಿಲ್ಲ. ಜನ ಸೇವೆಯೊಂದೇ ನನ್ನ ಧ್ಯೇಯ” ಎಂದು ಹೇಳಿದ್ದಾರೆ.

ಶರದ್‌ ಪವಾರ್‌ ಅವರಿಗೆ ಈಗ 83 ವರ್ಷವಾಗಿದೆ. ಇದು ಅವರ ನಿವೃತ್ತಿಗೆ ಸೂಕ್ತ ಸಮಯ ಎಂದು ಅಜಿತ್‌ ಪವಾರ್‌ ಹೇಳಿದ್ದರು.

“ನ ಟೈರ್ಡ್ ಹೂಂ, ನ ರಿಟೈರ್ಡ್ ಹೂಂ (ದಣಿವೂ ಆಗಿಲ್ಲ, ನಿವೃತ್ತಿಯೂ ಆಗಿಲ್ಲ)” ಎಂಬ ಅಟಲ್‌ ಬಿಹಾರಿ ವಾಜಪೇಯಿ ಅವರ ಮಾತನ್ನು ಪವಾರ್‌ ಅವರು ಇದೇ ವೇಳೆ ಉಲ್ಲೇಖಿಸಿದರು.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ ಚುನಾವಣೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ನೇಮಕ

“ನನಗೆ ನಿವೃತ್ತಿಯ ಸಲಹೆ ನೀಡಲು ಅವರು ಯಾರು? ನಾನು ಇನ್ನೂ ದುಡಿಯಬಲ್ಲೆ” ಎಂದು ಇಂಡಿಯಾ ಟುಡೇನ ಮರಾಠಿ ಡಿಜಿಟಲ್‌ ವಾಹಿನಿ ಮುಂಬೈ ಟಾಕ್‌ಗೆ ನೀಡಿದ ಸಂದರ್ಶನದಲ್ಲಿ ಪವಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

“ತಮ್ಮ ಪುತ್ರನಲ್ಲ ಎಂಬ ಕಾರಣಕ್ಕೆ ನನ್ನನ್ನು ಶರದ್‌ ಪವಾರ್ ಕಡೆಗಣಿಸಿದರು” ಎಂಬ ಅಜಿತ್ ಪವಾರ್‌ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಪವಾರ್, “ಕುಟುಂಬದ ವಿಷಯವನ್ನು ನಾನು ಹೊರಗೆ ಚರ್ಚಿಸಲು ಬಯಸುವುದಿಲ್ಲ. ಅಜಿತ್ ಪವಾರ್ ಅವರನ್ನು ಮಂತ್ರಿ, ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಆದರೆ ಮಗಳು ಸುಪ್ರಿಯಾ ಸುಳೆಗೆ ಯಾವುದೇ ಮಂತ್ರಿ ಹುದ್ದೆ ನೀಡಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X