- ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಆನೆಬಲ
- 40% ಕಮಿಷನ್ ಸರ್ಕಾರದಿಂದ ಜಗದೀಶ್ ಶೆಟ್ಟರ್ ತುಳಿತ
ಉತ್ತರ ಕರ್ನಾಟಕದ ಪ್ರಭಾವಿ ರಾಜಕಾರಣಿ ಹಾಗೂ ಸಜ್ಜನ, ಜನಾನುರಾಗಿಯಾದ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಪಿ.ಎಚ್ ನೀರಲಕೇರಿ ಹೇಳಿದ್ದಾರೆ.
ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್ರನ್ನು ಹುಬ್ಬಳ್ಳಿಯಲ್ಲಿ ಭೇಟಿಯಾಗಿ ಅವರು ಅಭಿನಂದಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, “ಶೆಟ್ಟರ್ ಅವರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಈ ಸಾರಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದು, ವಿಶೇಷವಾಗಿ ಧಾರವಾಡ ಜಿಲ್ಲೆಯಲ್ಲಿ ಪಕ್ಷಕ್ಕೆ ಶಕ್ತಿ ಸಿಗಲಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? : ರಾಮದಾಸ್ಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ್ ಸಿಂಹ ಬರಿಗೈಲಿ ವಾಪಸ್
“40% ಕಮಿಷನ್ ಸರ್ಕಾರವಾಗಿರುವ ಬಿಜೆಪಿಯಲ್ಲಿ ಶೆಟ್ಟರ್ ಅವರು ತುಳಿತಕ್ಕೆ ಒಳಗಾಗಿದ್ದರು. ಅವರ ಸ್ವಾಭಿಮಾನಕ್ಕೆ ತೀವ್ರ ದಕ್ಕೆಯಾಗಿತ್ತು. ಭವಿಷ್ಯದಲ್ಲಿ ಕಾಂಗ್ರೆಸ್ ಹಾಗೂ ಧಾರವಾಡ ಜಿಲ್ಲೆಗೆ ಶೆಟ್ಟರ್ ಅವರಿಂದ ಉತ್ತಮ ಕೆಲಸಗಳು ಆಗಲಿವೆ” ಎಂದು ಹೇಳಿದ್ದಾರೆ.
ಇದೇ ವೇಳೆ ಸಿದ್ದಣ್ಣ ಕಂಬಾರ, ಪ್ರೊ. ಗಲಗಲಿ ಸೇರಿದಂತೆ ಅವಳಿ ಜಿಲ್ಲೆಯ ಹಲವು ನಾಯಕರು ಹಾಜರಿದ್ದರು.