ಬೆಂಗಳೂರು ಅಭಿವೃದ್ಧಿಗಾಗಿ ಮಾಜಿ ಮೇಯರ್‌ಗಳ ಸಲಹೆ ಪಡೆದಿರುವೆ: ಡಿಸಿಎಂ ಶಿವಕುಮಾರ್‌

Date:

Advertisements
  • ಮಾಜಿ ಮೇಯರ್‌ಗಳೊಂದಿಗೆ ಸಭೆ ನಡೆಸಿದ ಬೆಂಗಳೂರು ಅಭಿವೃದ್ದಿ ಸಚಿವ
  • ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿ ಅಭಿಪ್ರಾಯ,ಸಲಹೆ ಪಡೆದುಕೊಂಡ ಡಿಕೆಶಿ

ಬೆಂಗಳೂರು ನಗರವನ್ನು ಇನ್ನಷ್ಟು ಅಭಿವೃದ್ದಿ ಮಾಡುವ ಸಲುವಾಗಿ ಮಾಜಿ ಮೇಯರ್‌ ಗಳೊಂದಿಗೆ ಮಾತುಕತೆ ನಡೆಸಿ ಅವರ ಅಭಿಪ್ರಾಯ, ಸಲಹೆ ಪಡೆಯಲಾಗಿದೆ ಎಂದು ಡಿಸಿಎಂ ಹಾಗೂ ಬೆಂಗಳೂರು ಅಭಿವೃದ್ದಿ ಸಚಿವರಾಗಿರುವ ಡಿ ಕೆ ಶಿವಕುಮಾರ್‌ ಹೇಳಿದರು.

ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕರ್ನಾಟಕ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ನಡೆದ ಮಾಜಿ ಮೇಯರ್‌ಗಳ ಸಭೆ ಬಳಿಕ ಮಾತನಾಡಿದ ಅವರು, ಸಿಲಿಕಾನ್‌ ಸಿಟಿ ಅಭಿವೃದ್ಧಿಗಾಗಿ ಹೇಗೆ ಹಣ ಸಂಗ್ರಹ ಮಾಡಬಹುದು. ಎಲ್ಲಿ ನ್ಯೂನತೆಗಳಿವೆ, ತ್ಯಾಜ್ಯ ನಿರ್ವಹಣೆ, ರಸ್ತೆಗಳಲ್ಲಿ ಕಸ ಹಾಕುತ್ತಿರುವ ಬಗ್ಗೆ ಚರ್ಚೆ ಮಾಡಿದ್ದೇವೆ. ಹಾಗೆಯೇ ಇವುಗಳನ್ನು ನಿರ್ವಹಣೆ ಬಗೆಗೂ ಸಲಹೆ ಪಡೆದಿದ್ದೇನೆ ಎಂದವರು ಹೇಳಿದರು.

ಕಸದ ವಾಹನ ಟ್ರ್ಯಾಕ್ ಮಾಡುವುದು, ಕಸವನ್ನು ಎಲ್ಲೆಂದರಲ್ಲಿ ಎಸೆಯುವ ವಾಹನಗಳಿಗೆ ಯಾವ ರೀತಿ ದಂಡ ವಿಧಿಸಬೇಕು, ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡಿದ್ದೇನೆ. ಸದ್ಯದಲ್ಲೇ ಇದನ್ನು ನಿಯಂತ್ರಿಸಲು ಯಾವ ಸೂಚನೆ ನೀಡಬೇಕು ಎಂದು ಅಧಿಕಾರಿಗಳ ಜತೆ ಸಭೆ ಮಾಡಿ ತೀರ್ಮಾನಿಸುತ್ತೇನೆ.

Advertisements

ಸೋಮವಾರ ಬೆಂಗಳೂರು ನಗರದ ಸರ್ವಪಕ್ಷ ಶಾಸಕರ ಸಭೆ ಕರೆದಿದ್ದು, ಅವರಿಂದಲೂ ಸಲಹೆಗಳನ್ನು ಪಡೆಯುತ್ತೇನೆ. ನಂತರ ನಮ್ಮ ಪಕ್ಷದ ಶಾಸಕರ ಜತೆ ಪ್ರತ್ಯೇಕ ಸಭೆ ಮಾಡುತ್ತೇನೆ ಎಂದು ಡಿಕೆಶಿ ಹೇಳಿದರು.

ಈ ಸುದ್ದಿ ಓದಿದ್ದೀರಾ?:ಮಳೆಹಾನಿ | ಪರಿಹಾರ ಕ್ರಮ ತ್ವರಿತವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಸೂಚನೆ

ಇನ್ನು ಸರಿಯಾದ ಸಮಯಕ್ಕೆ ತೆರಿಗೆ ಕಟ್ಟಿದರೆ ನೀಡುವ ಟ್ಯಾಕ್ಸ್‌ ವಿನಾಯಿತಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ದಿನಾಂಕದ ಒಳಗಾಗಿ ವಾರ್ಷಿಕ ತೆರಿಗೆ ಪಾವತಿ ಮಾಡಿದರೆ ಶೇ.5ರಷ್ಟು ಮರುಪಾವತಿ ಮಾಡಲಾಗುವುದು ಎಂದ ಶಿವಕುಮಾರ್‌, ಪಾಲಿಕೆ ವಾರ್ಡ್ ಮರುವಿಂಗಡಣೆ ವಿಚಾರವಾಗಿ ಚರ್ಚೆ ಮಾಡಿದ್ದು, ಇದಕ್ಕಾಗಿ ನೇಮಕ ಮಾಡಿರುವ ಸಮಿತಿ ಜತೆ ಚರ್ಚೆ ಮಾಡಿ ಮಾಹಿತಿ ಒದಗಿಸುವುದಾಗಿ ತಿಳಿಸಿದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X