ಡಿಕೆಶಿ ತವರು ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಶಾಕ್‌; ಜೆಡಿಎಸ್ ಸೇರಿದ ಚನ್ನಪಟ್ಟಣ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಪ್ರಸನ್ನ ಗೌಡ

Date:

Advertisements
  • ಪಂಚರತ್ನ ಸಮಾರೋಪ ಸಮಾರಂಭದಲ್ಲಿ ಜೆಡಿಎಸ್‌ ಸೇರಲಿರುವ ಪ್ರಸನ್ನ ಗೌಡ
  • ʼಕಾಂಗ್ರೆಸ್​ ನಾಯಕತ್ವದಿಂದ ಬೇಸತ್ತು ಕುಮಾರಸ್ವಾಮಿ ನಾಯಕತ್ವ ಒಪ್ಪಿರುವೆʼ

ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ ಗೌಡ ಅವರು ಜೆಡಿಎಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.

ಮೈಸೂರಿನಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆ ಸಮಾರೋಪಕ್ಕೂ‌ ಮುನ್ನ ಕುಮಾರಸ್ವಾಮಿ ಎದುರು ಅವರು ಈ ಘೋಷಣೆ ಮಾಡಿದ್ದಾರೆ.

ಈ ವೇಳೆ ಮಾಧ್ಯಮಗಳಿಗೆ ಮಾತನಾಡಿದ ಪ್ರಸನ್ನ ಗೌಡ, “ನಾನು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಬೇಕಿತ್ತು. ಆದರೆ, ಕಾಂಗ್ರೆಸ್​ ನಾಯಕತ್ವದಿಂದ ಬೇಸತ್ತಿರುವೆ. ಆ ಪಕ್ಷದಲ್ಲಿ ಸ್ಪಷ್ಟ ನಿಲುವು ಇಲ್ಲ. ಸುಳ್ಳು ಘೋಷಣೆ ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ನಾಯಕತ್ವ ಮೆಚ್ಚಿಕೊಂಡು ಜೆಡಿಎಸ್ ಸೇರುತ್ತಿದ್ದೇನೆ” ಎಂದರು.

Advertisements

“ಚನ್ನಪಟ್ಟಣ ಟಿಕೆಟ್ ಸಿಗುವುದು ಅನುಮಾನ ಎನ್ನುವ ಸುಳಿವು ಸಿಗುತ್ತಿದ್ದಂತೆಯೇ ಪ್ರಸನ್ನ ಗೌಡ ಕಾಂಗ್ರೆಸ್ ತೊರೆದು ಜೆಡಿಎಸ್​ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ. ಇಂದು (ಮಾರ್ಚ್​ 26) ಸಂಜೆ ಮೈಸೂರಿನಲ್ಲಿ ನಡೆಯಲಿರುವ ಜೆಡಿಎಸ್​ ಪಂಚರತ್ನ ಸಮಾರೋಪ ಸಮಾರಂಭದಲ್ಲಿ ಅಧಿಕೃತವಾಗಿ ಜೆಡಿಎಸ್‌ ಸೇರಲಿದ್ದಾರೆ.

ಕಾಂಗ್ರೆಸ್​ಗೆ ಶಾಕ್‌

ಚುನಾವಣೆ ಹೊಸ್ತಿಲಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತವರು ಜಿಲ್ಲೆಯಲ್ಲೇ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಸಂಭಾವ್ಯ ಅಭ್ಯರ್ಥಿ ಎಂದೇ ಬಿಂಬಿಸಲ್ಪಟ್ಟಿದ್ದ ಪ್ರಸನ್ನ ಗೌಡ ಜೆಡಿಎಸ್ ಸೇರುತ್ತಿರುವುದು ಕಾಂಗ್ರೆಸ್​ಗೆ ಶಾಕ್‌ ನೀಡಿದೆ.

ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಪೈಕಿ ಮೂರು ಕ್ಷೇತ್ರಕ್ಕೆ ಟಿಕೆಟ್ ಘೋಷಿಸಲಾಗಿದೆ. ಆದರೆ, ಚನ್ನಪಟ್ಟಣ ಕ್ಷೇತ್ರಕ್ಕೆ ಟಿಕೆಟ್ ಫೈನಲ್ ಆಗದ ಕಾರಣ ಮಾಜಿ ಸಚಿವ ಸಿ ಪಿ ಯೋಗೇಶ್ವರ್‌ ಅವರಿಗೆ ಕೈ ನಾಯಕರು ಬಲೆ ಬಿಸಿದ್ದಾರೆ ಎನ್ನುವ ಮಾತುಗಳು ಕೂಡ ಕ್ಷೇತ್ರದಲ್ಲಿ ಕೇಳಿಬಂದಿವೆ. ಹಾಗೆಯೇ ನಟಿ ರಮ್ಯಾ ಕೂಡ ಚನ್ನಪಟ್ಟಣದಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಹೀಗಾಗಿ ಈ ಎಲ್ಲ ಬೆಳವಣಿಗೆ ಪ್ರಸನ್ನ ಗೌಡ ಜೆಡಿಎಸ್ ಸೇರುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X