ಕಲಬುರಗಿ | ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ: ಸಚಿವ ಪ್ರಿಯಾಂಕ್‌ ಖರ್ಗೆ

Date:

ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲಾ ಶ್ಯಾಡೋ ಸಿಎಂ ಎಂದು ಹೇಳಿಕೆ ನೀಡುವುದನ್ನು ರೂಢಿಸಿಕೊಂಡಿದ್ದಾರೆ. ಆದರೆ ವಾಸ್ತವದಲ್ಲಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಂತ ಇದ್ದಾರೆ ಅನ್ನೋದನ್ನು ಏಕೆ ಮರೆಯುತ್ತಿದ್ದಾರೆ. ಚುನಾವಣೆಯಲ್ಲಿ ಹೇಳಿಕೊಳ್ಳಲು ಬಿಜೆಪಿ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ. ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಟೀಕಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಧಿಕಾರಕ್ಕೆ ಬಂದು ಹತ್ತು ವರ್ಷಗಳು ಕಳೆದರೂ ದೇವರು, ಧರ್ಮದ ಹೆಸರಿನಲ್ಲಿ ಚುನಾವಣೆ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಹೇಳಿಕೊಳ್ಳುವಂತಹ ಸ್ವಂತ ಸಾಧನೆಯೇ ಅವರ ಬಳಿ ಇಲ್ಲ. ಆದರೆ, ನಾವು ‘ಗ್ಯಾಂರಟಿ’ ಯೋಜನೆಗಳ ದೀಪ ಇರಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜೋಡಿತ್ತಿನ ಮುಂದಾಳುತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ಕೈಯಲ್ಲಿದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

“ದಕ್ಷಿಣ ಭಾರತದಲ್ಲಿ ಮೋದಿ ಸುನಾಮಿ, ಬಿಜೆಪಿ ಪರವಾದ ಗಾಳಿ ಇದ್ದಿದ್ದರೇ ಬಿಜೆಪಿಯವರು ಕರ್ನಾಟಕ, ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿನ ಪ್ರಾದೇಶಿಕ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಂಡಿದ್ದು ಏಕೆ? ಶಕ್ತಿಯುತವಾದ ಪಕ್ಷಕ್ಕೆ ಸ್ವಂತ ಬಲದ ಮೇಲೆ ಗೆಲ್ಲುವ ವಿಶ್ವಾಸ ಇಲ್ಲವೇ? ಮೋದಿ ಸುನಾಮಿ ಇದೆ ಎನ್ನುವವರು ದಕ್ಷಿಣ ಭಾರತದಲ್ಲಿ ಎಲ್ಲಿದೆ ತೋರಿಸಲಿ” ಎಂದು ಸವಾಲು ಹಾಕಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿ.ವೈ.ವಿಜಯೇಂದ್ರ ನಾಯಕತ್ವ ಅವರ ಪಕ್ಷದವರೇ ಒಪ್ಪಿಕೊಳ್ಳತ್ತಿಲ್ಲ.ಅವರೆಲ್ಲರೂ ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎಂಬಂತೆ ಆಗಿದೆ. ಮತ್ತೊಂದು ಕಡೆ ಬಿಎಲ್‌ ಸಂತೋಷ ಹಾಗೂ ಬಿಎಸ್‌ ಯಡಿಯೂರಪ್ಪ ಅವರ ಬಡಿದಾಟ ನಡೆಯುತ್ತಿದೆ. ಡಾ.ಸುಧಾಕರ್‌, ಶೋಭಾ ಕರಂದ್ಲಾಜೆ ವಿರುದ್ಧ ‘ಗೋಬ್ಯಾಕ್‌’ ಅಭಿಯಾನ ಬಿಜೆಪಿ ಕಾರ್ಯಕರ್ತರೇ ಮಾಡುತ್ತಿದ್ದಾರೆ. ಬಿಜೆಪಿಗರು ಕಾಂಗ್ರೆಸ್‌ನತ್ತ ಗಮನಕೊಡುವುದು ಬಿಟ್ಟು ಮೊದಲು ತಮ್ಮ ಪಕ್ಷದ ಒಳಗಿನ ಬೆಂಕಿಯನ್ನು ಆರಿಸಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

“ಬಿಜೆಪಿಯವರು ಒಂದೇ ಕುಟುಂಬ ಎನ್ನುತ್ತಿದ್ದಾರೆ. ವಾಟ್ಸಪ್‌ ಯೂನಿವರ್ಸಿಟಿ ಅವರು ಮೋದಿಗೆ ಅವರಿಗೆ ಭಾಷಣ ಬರೆದುಕೊಡುತ್ತಾರೆ. ಅತಿ ಹೆಚ್ಚು ಭ್ರಷ್ಟಾಚಾರ ಆಗಿರೋದು ಬಿಜೆಪಿ ಅವಧಿಯಲ್ಲಿ ಎಂಬುದನ್ನು ಬಿಜೆಪಿಯವರು ಮರೆತಿದ್ದಾರೆ. ಇವರದ್ದು 40 ಪರ್ಸೆಂಟ್ ಸರ್ಕಾರ ಎನ್ನುವ ಕಾರಣಕ್ಕಾಗಿಯೇ ರಾಜ್ಯದ ಜನತೆ ಬಿಜೆಪಿಯವರನ್ನು ಕಿತ್ತೊಗೆದಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

“ಅವರವರ ಅಸ್ತಿತ್ವಕ್ಕಾಗಿ ಚುನಾವಣೆ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ– ಜೆಡಿಎಸ್ ಹೊಂದಾಣಿಕೆಯ ಮೂಲಕ ಇಬ್ಬರೂ ಹರಕೆಯ ಕುರಿಗಳಾಗಿದ್ದಾರೆ. ಕೇಳಿದಷ್ಟು ಸೀಟು ಸಿಗಲಿಲ್ಲವೆಂದು ಬಿಜೆಪಿಯ ಪಾಲುದಾರ ಎಚ್‌.ಡಿ.ಕುಮಾರಸ್ವಾಮಿ ಅವರು ಅತೃಪ್ತರಾಗಿದ್ದಾರೆ. ಕುಟುಂಬ ರಾಜಕಾರಣದ ಬಗ್ಗೆ ಕುರಿತು ಕೇಳಿದ ಉತ್ತರಿಸಿದ ಖರ್ಗೆ, “ಕಾಂಗ್ರೆಸ್‌ಗಿಂತ ಹೆಚ್ಚಿನ ಕುಟುಂಬ ರಾಜಕಾರಣ ಬಿಜೆಪಿಯಲ್ಲಿದೆ. ಡಿಎನ್ಎ ಟೆಸ್ಟ್ ಮಾಡಿಸಿದರೆ ಯಾರ್‍ಯಾರು ಯಾರ ಕುಟಂಬದವರು ಅನ್ನೋದು ಗೊತ್ತಾಗುತ್ತದೆ. ಹಾಗಾಗಿ, ಡಿಎನ್ಎ ಕಿಟ್ ಇಟ್ಟು ಚರ್ಚೆ ಮಾಡೋಣ ಬನ್ನಿ” ಎಂದು ಸವಾಲು ಹಾಕಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...

ಸುಪ್ರೀಂ ಆದೇಶಕ್ಕೆ ಮಣಿದು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌...