ಶ್ರೀರಾಮನವಮಿ | ನನ್ನ ʼರಾಮʼ ಅಂತಃಕರಣ ಸ್ವರೂಪಿ, ನಿಮಗೆ ಚುನಾವಣಾ ಸರಕು; ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

Date:

  • ಶ್ರೀರಾಮನವಮಿ ಬಗ್ಗೆ ಸಿದ್ದರಾಮಯ್ಯ ಶುಭ ಹಾರೈಸಿದ್ದನ್ನು ಅಣಕಿಸಿದ ಬಿಜೆಪಿ
  • ಮನಸುಗಳನ್ನು ಒಡೆದು ಚುನಾವಣೆಯಲ್ಲಿ ಲಾಭ ಪಡೆಯುವವರು ನೀವು: ಟೀಕೆ

ಶ್ರೀರಾಮನವಮಿ ಬಗ್ಗೆ ಸಿದ್ದರಾಮಯ್ಯ ಶುಭ ಹಾರೈಸಿದ್ದನ್ನು ಅಣಕಿಸಿರುವ ಬಿಜೆಪಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡಲೇ ತಿರುಗೇಟು ನೀಡಿದ್ದಾರೆ.

- Advertisement -

“ಮಹಾತ್ಮ ಗಾಂಧಿಯವರು ನಂಬಿದ್ದ ಮಾನವೀಯ ಗುಣಗಳ, ಮಾತೃಹೃದಯದ, ಸರ್ವವನ್ನೂ ಪ್ರೀತಿಸುವ ರಾಮನ ಅನುಯಾಯಿ ನಾನು. ರಾಮನ ಹೆಸರಿನಲ್ಲಿ ದ್ವೇಷಬಿತ್ತಿ, ಮನಸುಗಳನ್ನು ಒಡೆದು ಚುನಾವಣೆಯಲ್ಲಿ ಲಾಭ ಪಡೆಯುವವರು ನೀವು. ನನ್ನ ರಾಮ ಅಂತಃಕರಣ ಸ್ವರೂಪಿ, ನಿಮಗೆ ರಾಮ ಚುನಾವಣಾ ಸರಕು. ಶ್ರೀರಾಮನೇ ನಿಮಗೆ ಸದ್ಬುದ್ಧಿ ನೀಡಲಿ” ಎಂದು ಸಿದ್ದರಾಮಯ್ಯ ಟ್ವೀಟ್‌ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಶ್ರೀರಾಮನವಮಿ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು “ಆದರ್ಶ ಪುರುಷ ಶ್ರೀರಾಮನು ಹಾಕಿಕೊಟ್ಟ ಪ್ರೀತಿ, ಸಹಾನುಭೂತಿ, ಅಂತಃಕರಣ, ನ್ಯಾಯಪರಿಪಾಲನೆಯ ಹಾದಿಯಲ್ಲಿ ಮುನ್ನಡೆಯೋಣ. ಪಾನಕ, ಕೋಸಂಬರಿಯ ಜೊತೆ ಸ್ನೇಹ, ಸೌಹಾರ್ದತೆ ಮಿಳಿತಗೊಳ್ಳಲಿ, ಮನುಷ್ಯಪ್ರೇಮದ ಬೆಳಕು ಜಗದಗಲ ಬೆಳಗಲಿ. ನಾಡಿನ ಸಮಸ್ತ ಜನತೆಗೆ ರಾಮನವಮಿಯ ಶುಭಹಾರೈಕೆಗಳು” ಗುರುವಾರ ಬೆಳಗ್ಗೆ ಟ್ವೀಟ್‌ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ರಾಜಕೀಯ ಸತ್ ಪರಂಪರೆಯ ರಾಜ್ಯದಲ್ಲಿ ನಡೆಯಬೇಕಿದೆ ಮುಕ್ತ, ನ್ಯಾಯಸಮ್ಮತ ಚುನಾವಣೆ

ಸಿದ್ದರಾಮಯ್ಯ  ಅವರ ಈ ಟ್ವೀಟ್‌ಗೆ ಬಿಜೆಪಿ ಪ್ರತಿಕ್ರಿಯಿಸಿ, “ಪ್ರಭು ಶ್ರೀರಾಮಚಂದ್ರನ ಅಸ್ತಿತ್ವವನ್ನೇ ಪ್ರಶ್ನಿಸುವ, ರಾಮಚಂದ್ರನ ಭವ್ಯ ಮಂದಿರದ ವಿರುದ್ ವೇ ಸಮರ ಸಾರಿದ, ರಾಮಚಂದ್ರನ ರಾಮರಾಜ್ಯವನ್ನು ಟೀಕಿಸುವ ಅಲ್ಪರ ಗುಂಪಿನ ʼಪೋಸ್ಟರ್‌ ಬಾಯ್‌ʼ ಸಿದ್ದರಾಮಯ್ಯನವರು ಇಂದು ‘ರಾಮಭಕ್ತನ’ ವೇಷ ತೊಟ್ಟು, ‘ಚುನಾವಣಾ ನಿಮಿತ್ತ ಬಹುಕೃತವೇಷ’ವೆಂಬ ನುಡಿಯ ಗೌರವ ಹೆಚ್ಚಿಸಿದ್ದಾರೆ” ಎಂದು ಟ್ವೀಟ್‌ ಮಾಡಿ ಟೀಕಿಸಿತ್ತು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಈಗ ಟ್ವೀಟ್‌ ಮೂಲಕವೇ ಉತ್ತರ ಕೊಟ್ಟಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಸಿದ್ದರಾಮಯ್ಯ, ಜನ ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ರಾಜಕೀಯದ ದಿಕ್ಕು ಬದಲಾಗುತ್ತಿದೆ” ಎಂದು ಸುದ್ದಿಗಾರರಿಗೆ ಬೆಂಗಳೂರಿನಲ್ಲಿ ತಿಳಿಸಿದರು.

“ಮತದಾರರ ಮನಸಿನ ಯೋಚನೆಯಂತೆಯೇ ಕೆಲಸ ಮಾಡುತ್ತಿರುವ ನಮ್ಮ ಪಕ್ಷವನ್ನು ಜನತೆ ಬೆಂಬಲಿಸಲಿದೆ. ಬಿಜೆಪಿಯ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಬೆಲೆ ಏರಿಕೆ, ಆರ್ಥಿಕ ಹಣದುಬ್ಬರದ ಕಾರಣದಿಂದ ರೋಸಿ ಹೋಗಿದ್ದಾರೆ” ಎಂದರು.

ತಮ್ಮದೇ ಜನಾದೇಶ ಧಿಕ್ಕರಿಸಿ ಆಡಳಿತ ಚುಕ್ಕಾಣಿ ಹಿಡಿದ ಕೇಸರಿ ಪಕ್ಷದ ತಿರುಗಿ ಬೀಳಲಿದ್ದಾರೆ. ಜೊತೆಗೆ ಅವರೇ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...