ನಕಲಿ ವೋಟರ್‌ ಐಡಿ ಪ್ರಕರಣದಲ್ಲಿ ಸಿದ್ದರಾಮಯ್ಯ ಶಾಮೀಲು: ಬಿಜೆಪಿ ಆರೋಪ

Date:

Advertisements
  • ‘ಕಾಂಗ್ರೆಸ್‌ ಗೆಲುವಿನ ಹಿಂದೆ ಅನೈತಿಕತೆ, ಅಕ್ರಮ ಚಟುವಟಿಕೆಗಳು ಮಾತ್ರ ಇವೆ’
  • ‘ಸಿಎಂ ಆಪ್ತ ಭೈರತಿ ಸುರೇಶ್‌ ಬೆಂಬಲಿಗರಿಂದ ನಕಲಿ ವೋಟರ್‌ ಐಡಿ ತಯಾರಿಕೆ’

ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದ ಫಾರ್ಮುಲಾ ಈಗ ಬಯಲಾಗಿದೆ. ಮತದಾರರಿಗೆ ಮೋಸ ಮಾಡಲು ನುಡಿದಂತೆ ಜಾರಿಯಾಗದ ಗ್ಯಾರಂಟಿಗಳು ಅರ್ಧದಷ್ಟು ಸಹಾಯ ಮಾಡಿದರೆ ಉಳಿದವೆಲ್ಲಾ ನಕಲಿ ಮತಗಳು ಎಂದು ಬಿಜೆಪಿ ಕಿಡಿಕಾರಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯ ಅವರ ಆಪ್ತ ಬೈರತಿ ಸುರೇಶ್‌ ಸಂಗಡಿಗರು ನಕಲಿ ವೋಟರ್‌ ಐಡಿ ಮಾಡುತ್ತಿದ್ದಾಗ ಸಿಕ್ಕಿಬಿದ್ದಿರುವುದು ಈ ಹಗರಣದಲ್ಲಿ ಸಿದ್ದರಾಮಯ್ಯರವರೇ ಶಾಮೀಲಾಗಿರುವುದಕ್ಕೆ ಸ್ಪಷ್ಟ ಸಾಕ್ಷಿ” ಎಂದು ಆರೋಪಿಸಿದೆ.

“ಮತದಾರರಿಂದ ದೇಶಾದ್ಯಂತ ತಿರಸ್ಕೃತವಾಗಿರುವ ಕಾಂಗ್ರೆಸ್‌ ಪಕ್ಷದ ಗೆಲುವಿನ ಹಿಂದೆ ಸದಾ ಇರುವುದು ಅನೈತಿಕತೆ ಮತ್ತು ಅಕ್ರಮ ಚಟುವಟಿಕೆಗಳು ಮಾತ್ರ” ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

Advertisements

ಏನಿದು ಪ್ರಕರಣ?

ನಕಲಿ ಮತದಾರರ ಗುರುತಿನ ಚೀಟಿ, ಆಧಾರ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌ಗಳನ್ನು ಮಾಡಿಕೊಡುತ್ತಿರುವ ಆರೋಪದ ಮೇಲೆ ಸಚಿವ ಭೈರತಿ ಸುರೇಶ್‌ ಅವರ ಆಪ್ತ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದುಡ್ಡು ಕೊಟ್ಟರೆ ವೋಟರ್ ಐಡಿ, ಆಧಾರ್, ಡಿಎಲ್ ಮಾಡಿಕೊಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಹೆಬ್ಬಾಳದ ಕನಕ ನಗರದಲ್ಲಿರುವ ಎಂಎಸ್ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ಮಾಡಿ, ಮೌನೇಶ್‌ ಕುಮಾರ್‌, ಭಗತ್‌ ಹಾಗೂ ರಾಘವೇಂದ್ರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇವರಲ್ಲಿ ಮೌನೇಶ್‌ ಎಂಬುವವ ಸಚಿವ ಭೈರತಿ ಸುರೇಶ್‌ ಅವರಿಗೆ ಆಪ್ತನಾಗಿದ್ದು, ಅವರ ಜೊತೆಗಿನ ಸಾಕಷ್ಟು ಫೋಟೋಗಳು ವೈರಲ್‌ ಆಗುತ್ತಿದೆ.

 

 

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X