ಎಡಪಂಥೀಯ ವಿಚಾರಧಾರೆಯ ಕೈಗೊಂಬೆಯಾಗಿದ್ದಾರೆ ಸಿದ್ದರಾಮಯ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ ಟೀಕೆ

Date:

Advertisements

ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಅವರ ನಡೆ ನೋಡಿದರೆ ಅವರು ಎಡಪಂಥೀಯ ವಿಚಾರಧಾರೆಯ ಕೈಗೊಂಬೆಯಾಗಿದ್ದಾರೆ ಎಂಬುದು ತಿಳಿಯುತ್ತೆ ಎಂದು ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಟೀಕಿಸಿದರು.

ಶಿರಸಿ ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಿರುವ ಪಠ್ಯದಲ್ಲಿ ಯಾವ ತಪ್ಪು ಇಲ್ಲ. ಅದನ್ನು ಬರೆದ ಸಾಹಿತಿಗಳ ಮೇಲೆ ಕಾಂಗ್ರೆಸ್‌ಗೆ ಸಮಾಧಾನ ಇಲ್ಲದ ಕಾರಣ ಪರಿಷ್ಕರಣೆ ಆಗುತ್ತಿದೆ. ಆ ಮೂಲಕ ಮತ್ತೊಮ್ಮೆ ಗುಲಾಮಿತನದ ಮನಸ್ಥಿತಿ ತರಲು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಮುಂದಾಗಿದ್ದಾರೆ” ಎಂದು ಹೇಳಿದರು.

“ಈ ನೆಲದ ನೈಜ ಪರಿಸ್ಥಿತಿ ತಿಳಿಸುವ ವಿಷಯಗಳು ಪ್ರಸ್ತುತ ಹಂಚಿಕೆಯಾದ ಪುಸ್ತಕದಲ್ಲಿದೆ. ಈಗ ಅದನ್ನು ತೆಗೆಯುವ ದ್ವೇಷದ ರಾಜಕೀಯ ಮುನ್ನೆಲೆಗೆ ತರಲಾಗುತ್ತಿದೆ. ಸಿದ್ದರಾಮಯ್ಯ ಅವರು ಎಡಪಂಥೀಯ ವಿಚಾರಧಾರೆಯ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಅದರ ಭಾಗವಾಗಿಯೇ ಪಠ್ಯಪುಸ್ತಕ ಪರಿಷ್ಕರಣೆ ತರಾತುರಿ ಅವರಲ್ಲಿ ಕಾಣುತ್ತಿದೆ” ಎಂದು ಹರಿಹಾಯ್ದರು.

Advertisements

“ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎಂಬಂತೆ ಕಾಂಗ್ರೆಸ್‌ ಸರ್ಕಾರದ ನಡೆ ತಿಂಗಳೊಳಗೆ ಜನರ ಅರಿವಿಗೆ ಬರುತ್ತಿದೆ. ಆಡಳಿತ ಗೊಂದಲದ ಗೂಡಾಗಿದೆ. ಸಚಿವರು ತಮ್ಮ ಖಾತೆಗಳ ಜವಾಬ್ದಾರಿ ಅರಿಯುವ ಮುನ್ನ ಗೊಂದಲ ಸೃಷ್ಟಿಸುತ್ತಿದ್ದಾರೆ. ಶಿಕ್ಷಣ ಇಲಾಖೆ ಸರಳವಾಗಿ ಅರಿವಿಗೆ ಬರುವ ಇಲಾಖೆಯಲ್ಲ. ಅನಗತ್ಯವಾಗಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಬೇಡಿ” ಎಂದು ಒತ್ತಾಯಿಸಿದರು.

“ಟಿಪ್ಪುವನ್ನು ಒಪ್ಪಿಕೊಂಡ ಇವರಿಗೆ ಭಾರತದ ಇತಿಹಾಸ ಹೇಗೆ ಶ್ರೇಷ್ಠವಾಗಿ ಕಾಣಲು ಸಾಧ್ಯ? ಪಾರದರ್ಶಕ ಚರ್ಚೆ, ಸಾಧಕ ಬಾಧಕ ಅರಿತ ನಂತರವೇ ಪರಿಷ್ಕರಣೆ ಆಗಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X