ಡಿಕೆಶಿ ಕಾಲ ಕೆಳಗೆ ಸಿದ್ದರಾಮಯ್ಯ ಸರ್ಕಾರ: ಎಚ್‌ ಡಿ ಕುಮಾರಸ್ವಾಮಿ ಲೇವಡಿ

Date:

Advertisements
  • ರಾಜ್ಯ ಸರ್ಕಾರದ ನಿರ್ಧಾರ ಕಾನೂನು ಬಾಹಿರ
  • ಸರ್ಕಾರದ ನಿರ್ಣಯಗಳನ್ನು ಬಯಲಾಗುತ್ತಿವೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಯನ್ನು ಹಿಂಪಡೆದಿರುವ ರೀತಿ ನೋಡಿದರೆ, ಅವರ ಸರ್ಕಾರ ಡಿಕೆಶಿ ಕಾಲ ಕೆಳಗೆ ಇರುವುದನ್ನು ಪ್ರದರ್ಶಿಸಿದಂತಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಟೀಕಿಸಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, “ರಾಜ್ಯ ಸರ್ಕಾರದ ನಿರ್ಧಾರ ಕಾನೂನು ಬಾಹಿರ. ವಕೀಲರು, ಕಾನೂನು ಉಪನ್ಯಾಸಕರೂ ಆಗಿದ್ದ ಮುಖ್ಯಮಂತ್ರಿಯಿಂದ ಇಂತಹ ತೀರ್ಮಾನ ಬಂದಿರುವುದು ಅವರ ಸರ್ಕಾರದ ನಿರ್ಣಯಗಳನ್ನು ಬಯಲು ಮಾಡಿದೆ” ಎಂದು ಹೇಳಿದರು.

“ಕಾನೂನುಬಾಹಿರ ಚಟುವಟಿಕೆಗಳಿಗೆ ರಕ್ಷಣೆ ನೀಡುವ ಸಲುವಾಗಿಯೇ ಅನುಮತಿ ಹಿಂಪಡೆಯಲಾಗಿದೆ. ಸಂವಿಧಾನದ ರಕ್ಷಕರು ಎಂದು ಘೋಷಿಸಿಕೊಂಡವರು ಈ ತೀರ್ಮಾನ ಮಾಡಿದ್ದು ಸರಿಯೇ” ಎಂದು ಪ್ರಶ್ನಿಸಿದರು.

Advertisements

“ಹಿಂದಿನ ಬಿಜೆಪಿ ಸರ್ಕಾರ ಸ್ಪೀಕರ್ ಅನುಮತಿ ಪಡೆಯದೆಯೇ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಕಾನೂನುಬಾಹಿರ ಎಂಬ ಕಾಂಗ್ರೆಸ್ ಆರೋಪ ಸರಿಯಲ್ಲ. ಅನುಮತಿ ನೀಡಲು ಸ್ಪೀಕರ್ ಒಪ್ಪಿಗೆ ಬೇಕಿಲ್ಲ. ಇದನ್ನು ಬೇಕಿದ್ದರೆ ವಿಧಾನಸಭೆಯಲ್ಲಿ ಚರ್ಚಿಸೋಣ” ಎಂದರು.

“ಈ ಹಿಂದೆ ಪ್ರಕರಣವೊಂದರಲ್ಲಿ ತನಿಖೆಗೆ ಅನುಮತಿ ಕೋರಿ ಆರ್‌ಟಿಐ ಕಾರ್ಯಕರ್ತರೊಬ್ಬರು ಸ್ಪೀಕರ್‌ಗೆ ಪತ್ರ ಬರೆದಿದ್ದರು. ಅದಕ್ಕೆ ಉತ್ತರಿಸಿದ್ದ ಸ್ಪೀಕರ್ ಕಾರ್ಯಾಲಯ, ಇದಕ್ಕೆ ಸ್ಪೀಕರ್‌ ಅನುಮತಿ ಬೇಕಿಲ್ಲ ಎಂದು ಪತ್ರ ಬರೆದಿತ್ತು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಪ್ಪಿದ ಘೋರ ದುರಂತ- ಆಳುವವರ ಅಲಕ್ಷ್ಯ ಅಕ್ಷಮ್ಯ

ಬಿ ಆರ್ ಪಾಟೀಲ ವಿಚಾರವಾಗಿ ಪ್ರತಿಕ್ರಿಯಿಸಿ, “ಅವರ ಪಕ್ಷದ ನಾಯಕರ ಧೋರಣೆಗೆ ಮನನೊಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಒಬ್ಬ ಆಡಳಿತ ಪಕ್ಷದ ಶಾಸಕರ ಪರಿಸ್ಥಿತಿ ಹೀಗಾದಾಗ ಬೇರೆಯವರ ಗತಿ ಏನು? ಈಗಿನ ಸರ್ಕಾರದಲ್ಲಿ ಶಾಸಕರಿಗೆ ಬೆಲೆ ಎಷ್ಟಿದೆ ಎಂದು ನಾನು ಹೇಳಬೇಕಿಲ್ಲ. ರಾಯರೆಡ್ಡಿ, ಶ್ಯಾಮನೂರು ಶಿವಶಂಕರಪ್ಪ ಮತ್ತೀಗ ಬಿ ಆರ್ ಪಾಟೀಲ ಮನನೊಂದು ಮಾತನಾಡಿದ್ದಾರೆ” ಎಂದು ತಿಳಿಸಿದರು.

“ಕಾಂಗ್ರೆಸ್‌ನವರು ಬಿಜೆಪಿಯ ಶೇ 40 ಭ್ರಷ್ಟಾಚಾರದ ಬಗ್ಗೆ ಮಾತನಾಡಿ ಅಧಿಕಾರ ಹಿಡಿದರು. ಈಗ ಅದನ್ನೇ ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ಆಗಿದ್ದ ಹಲವು ಟೆಂಡರ್‌ಗಳನ್ನು ಈಗಿನ ಸರ್ಕಾರ ಕಮಿಷನ್ ಸಲುವಾಗಿ ತಡೆ ಹಿಡಿದಿದೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X