ಸಿದ್ದರಾಮಯ್ಯ ಲೂಟಿಕೋರ, ಮಂಗ; ಅವರನ್ನು ನನಗೆ ಹೋಲಿಸಬೇಡಿ: ನಾಲಗೆ ಹರಿಬಿಟ್ಟ ಈಶ್ವರಪ್ಪ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಟೀಕಿಸುವ ಭರದಲ್ಲಿ ನಾಲಗೆ ಹರಿಬಿಟ್ಟಿರುವ ಮಾಜಿ ಸಚಿವ, ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ, ‘ಸಿದ್ದರಾಮಯ್ಯ ಲೂಟಿಕೋರ, ಅವರನ್ನು ನನಗೆ ಹೋಲಿಸಬೇಡಿ. ಮಂಗ ಹಾರಿದಂತೆ ಪಕ್ಷದಿಂದ ಪಕ್ಷಕ್ಕೆ ಹಾರುತ್ತಾರೆ’ ಎಂದು ಹೇಳಿಕೆ ನೀಡಿದ್ದಾರೆ.

ಬರ ಅಧ್ಯಯನ ಪ್ರವಾಸದ ವೇಳೆ ಮಂಗಳವಾರ ಕುಷ್ಟಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ವೇಳೆ, ‘ಬಿಜೆಪಿಯಲ್ಲಿ ಈಶ್ವರಪ್ಪ ಸವಕಲು ನಾಣ್ಯ’ ಎಂದು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಈ ರೀತಿ ಏಕವಚನದಲ್ಲೇ ಪ್ರತಿಕ್ರಿಯೆ ನೀಡುವ ಮೂಲಕ ನಾಲಗೆ ಹರಿಬಿಟ್ಟಿದ್ದಾರೆ.

ರಾಜ್ಯ ಸರ್ಕಾರವನ್ನು ಮನಬಂದಂತೆ ಟೀಕಿಸಿದ ಈಶ್ವರಪ್ಪ, ‘ರೈತ ವಿರೋಧಿ ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ ಏನೂ ಇಲ್ಲ. ಇದು ಹುಚ್ಚು ದೊರೆ ಸರ್ಕಾರ’ ಎಂದು ವಾಗ್ದಾಳಿ ನಡೆಸಿದ್ದಾರೆ.

Advertisements

‘ಬಿಜೆಪಿಯಲ್ಲಿ ನಾನು ಶಿಸ್ತಿನ ಸಿಪಾಯಿ. ನಮ್ಮ ನಾಯಕರು ಹೇಳಿದ್ದನ್ನು ಅರ್ಧಗಂಟೆಯಲ್ಲಿ ಪಾಲಿಸಿದೆ. ಆದರೆ, ಸಿದ್ದರಾಮಯ್ಯ ಮರದಿಂದ ಮರಕ್ಕೆ ಹಾರುವ ಮಂಗನಂತೆ. ಹಿಂದೆ ದೇವೇಗೌಡರಿಗೆ ಮೋಸ ಮಾಡಿ ಜೆಡಿಎಸ್‌ನಿಂದ ಹೊರಬಂದರು. ಈಗ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ.ಶಿವಕುಮಾರ್ ಅವರನ್ನು ಏನಾದರೂ ಮುಖ್ಯಮಂತ್ರಿ ಮಾಡುತ್ತೇವೆ ಎಂದು ಹೇಳಿ ನೋಡಲಿ. ಮತ್ತೆ ಬೇರೆ ಪಕ್ಷಕ್ಕೆ ಮಂಗನಂತೆ ಹೋಗುತ್ತಾರೆ. ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಮತ್ತೊಂದು ಪಕ್ಷಕ್ಕೆ ಹಾರಿ ಹೋಗುತ್ತಾರೆ’ ಎಂದು ಹರಿಹಾಯ್ದಿದ್ದಾರೆ.

‘ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಮಾತು ಯಾರೂ ಕೇಳಲ್ಲ. ಇನ್ನು ಸಚಿವರ ಮಾತು ಯಾರು ಕೇಳುತ್ತಾರೆ. ಎಲ್ಲರೂ ಬಾಯಿ ಮುಚ್ಚಿಕೊಂಡಿರಬೇಕು. ಸುರ್ಜೇವಾಲ ಹಾಗೂ ವೇಣುಗೋಪಾಲ್ ಹಾದಿ ಬೀದಿಯಲ್ಲಿ ನಿಂತು ಮಾತನಾಡದಂತೆ ತಿಳಿಸಿದ ಮೇಲೂ ಸಿದ್ದರಾಮಯ್ಯ ಮಾತನಾಡಿದರು. ಇವರದು ಪಕ್ಷದೊಳಗೆ ಏನೂ ನಡೆಯಲ್ಲ’ ಎಂದು ಅವರು ಹೇಳಿದರು.

‘ರಾಜ್ಯದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ರಾಜ್ಯ ಸರ್ಕಾರ. ಇದಕ್ಕೆ ಕಣ್ಣು, ಕಿವಿ ಏನೂ ಇಲ್ಲ. ಇದು ಹುಚ್ಚು ದೊರೆಯ ಸರ್ಕಾರ. ಹಾಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಜಾರ್ಜ್ ರಾಜೀನಾಮೆ ಕೊಡಬೇಕು’ ಎಂದು ಕೆ ಎಸ್ ಈಶ್ವರಪ್ಪ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X