ಸಿಎಂ ಸ್ಥಾನಕ್ಕೆ ಚ್ಯುತಿ ಬಂದಿಲ್ಲ, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ: ಡಿ ಕೆ ಸುರೇಶ್ ಸ್ಪಷ್ಟನೆ

Date:

Advertisements

‌ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಚ್ಯುತಿ ಬರುವುದಿಲ್ಲ. ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ. ಹೈಕಮಾಂಡ್ ಕೂಡ ಇದನ್ನು ಸ್ಪಷ್ಟವಾಗಿ ಹೇಳಿದೆ. ಸಿಎಂ ಬದಲಾವಣೆ ಚರ್ಚೆ ಕಾಲಹರಣದ ಮಾತು ಎಂದು ಕಾಂಗ್ರೆಸ್ ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಸಿಎಂ ಬದಲಾವಣೆ ಚರ್ಚೆ ವ್ಯರ್ಥ ಪ್ರಯತ್ನ. ಕೆಲವರಿಗೆ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇರಬಹುದು. ಅದು ಈ ಅವಧಿಯಲ್ಲಿ ಸಾಧ್ಯವಿಲ್ಲ” ಎಂದರು.

“ಕೆಲವರಿಗೆ ಮುಖ್ಯಮಂತ್ರಿ ಆಗುವ ಆಸೆ ಇರಬಹುದು, ಅವರೆಲ್ಲರೂ ಹಿರಿಯ ನಾಯಕರೇ. ಆದರೆ, ಖಾಲಿ ಇಲ್ಲದ ಹುದ್ದೆಗೆ ಪೈಪೋಟಿ ನಡೆಸುವುದು ಸೂಕ್ತವಲ್ಲ. ಎಲ್ಲ ಶಾಸಕರ ಅಭಿಪ್ರಾಯ ಆಧರಿಸಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಎಲ್ಲ ಶಾಸಕರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಬೆನ್ನಿಗಿದೆ” ಎಂದು ಹೇಳಿದರು.

Advertisements

“ರಾಜಕಾರಣದಲ್ಲಿ ಗೊಂದಲ ಸೃಷ್ಟಿಸಬೇಕು ಎಂದೇ ಕೆಲವರು ಇರುತ್ತಾರೆ. ಗೊಂದಲಗಳಿಂದಲೇ ನಾಯಕರಾಗಬೇಕು ಎಂಬುದು ಅವರ ಆಸೆ. ಕೆಲಸ ಮಾಡಿ ನಾಯಕರಾಗಬೇಕು” ಎಂದು ಸಿಎಂ ಸ್ಥಾನದ ಬಗ್ಗೆ ಆಕಾಂಕ್ಷೆ ವ್ಯಕ್ತಪಡಿಸಿರುವ ಸ್ವಪಕ್ಷದ ನಾಯಕರಿಗೆ ಪರೋಕ್ಷವಾಗಿ ಕುಟುಕಿದರು.

“ಬಿಜೆಪಿಯವರು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ. ಆ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಕಿಲ್ಲ. ರಾಜ್ಯ ಸರ್ಕಾರ ಭದ್ರವಾಗಿದೆ. ಯಾವ ಅನುಮಾನವೂ ಬೇಡ” ಎಂದರು.

ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, “ನಾವ್ಯಾಕೆ ಸಿ ಪಿ ಯೋಗೇಶ್ವರ್ ಅವರಿಗೆ ಮಣೆ ಹಾಕಬೇಕು? ನಮಗೆ ಯೋಗೇಶ್ವರ್ ಅವಶ್ಯಕತೆ ಇಲ್ಲ. ಚನ್ನಪಟ್ಟಣ ಗೆಲುವಿಗಾಗಿ ತಂತ್ರಗಾರಿಕೆ ರೂಪಿಸಿದ್ದೇವೆ. ಶೀಘ್ರದಲ್ಲಿ ಅಚ್ಚರಿಯ ಅಭ್ಯರ್ಥಿ ಯಾರೂ ಎಂದು ಬಹಿರಂಗವಾಗಲಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X