ಅಪ್ಪ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದ ಯತೀಂದ್ರ ಸಿದ್ದರಾಮಯ್ಯ

Date:

  • ಎರಡು ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ
  • ವರುಣಾ ಕ್ಷೇತ್ರದಿಂದಲೂ ಕಣಕ್ಕಿಳಿಯಲಿರುವ ವಿಪಕ್ಷ ನಾಯಕ

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಸ್ಪರ್ಧಾ ಕ್ಷೇತ್ರದ ಬಗ್ಗೆ ಎದ್ದಿದ್ದ ಕುತೂಹಲಗಳಿಗೆ ಇದೀಗ ತೆರೆಬಿದ್ದಿದೆ.

ಈ ಕುರಿತು ಮಾಹಿತಿ ನೀಡಿರುವ ವರುಣಾ ಕ್ಷೇತ್ರದ ಶಾಸಕ, ಸಿದ್ದರಾಮಯ್ಯ ಪುತ್ರ ಯತೀಂದ್ರ, ಅಪ್ಪ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದಿದ್ದಾರೆ.

ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿರುವ ಅವರು ಸಿದ್ದರಾಮಯ್ಯ ಕೋಲಾರ ಹಾಗೂ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.

ಈ ಹಿಂದೆ ಕೈ ಹೈಕಮಾಂಡ್ ಕೋಲಾರಕ್ಕಿಂತ ವರುಣಾ ಕ್ಷೇತ್ರವೇ ಉತ್ತಮ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿತ್ತು. ಆದರೆ ಅಪ್ಪ ಕೋಲಾರದಲ್ಲಿ ನಿಲ್ಲುವ ನಿರ್ಧಾರ ಮಾಡಿದ್ದರು. ಈಗ ವರುಣಾಗೆ ಬಂದರೆ ಕೋಲಾರದಲ್ಲಿ ಪಕ್ಷಕ್ಕೆ ಹಿನ್ನಡೆಯಾಗುತ್ತದೆ. ಈ ಕಾರಣದಿಂದ ಅಲ್ಲೂ ಅವರು ಸ್ಪರ್ಧಿಸಲಿದ್ದಾರೆ ಎಂದು ಯತೀಂದ್ರ ಹೇಳಿದರು.

ನಾನು ಕೂಡ ಈ ಮೊದಲು ವರುಣಾದಲ್ಲೇ ನಿಲ್ಲಿ ಎಂದಿದ್ದೆ. ಸಿದ್ದರಾಮಯ್ಯ ಮಾಸ್ ಲೀಡರ್ ಅವರು ಎಲ್ಲೇ ನಿಂತರೂ ಗೆಲ್ಲುತ್ತಾರೆ ಎಂದು ಯತೀಂದ್ರ ವಿಶ್ವಾಸ ವ್ಯಕ್ತಪಡಿಸಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣಪತ್ರ ಸಲ್ಲಿಸಲು ವ್ಯವಸ್ಥೆ

ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸುವ...

ತಹಶೀಲ್ದಾರ್ ಅಜಿತ್ ಕುಮಾರ್ ರೈ ಅನ್ನು ನ್ಯಾಯಾಲಯ ವಿಚಾರಣೆಗೆ ಒಳಪಡಿಸಲು ಆದೇಶ

ಅರಣ್ಯ ಜಮೀನನ್ನು ಕಂದಾಯ ಜಮೀನನ್ನಾಗಿ ಪರಿವರ್ತಿಸಿರುವ ಆರೋಪ ಅನುಕಂಪದಲ್ಲಿ ಸರ್ಕಾರಿ...

ಬೆಂಗಳೂರು ಟೆಕ್ ಸಮ್ಮಿಟ್ 2023 | ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡು ಬಿಡುಗಡೆ

ಬೆಂಗಳೂರು ಅರಮನೆಯಲ್ಲಿ 'ಬ್ರೇಕಿಂಗ್ ದಿ ಬೌಂಡರೀಸ್' ಘೋಷವಾಕ್ಯದ 26ನೇ ‘ಬೆಂಗಳೂರು ತಂತ್ರಜ್ಞಾನ...

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ, ಎಲ್ಲ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿದ್ದರಾಮಯ್ಯ

ಕನಕದಾಸರು ಜಾತಿ‌, ಅನಕ್ಷರತೆಯ ಅಸಮಾನತೆ ಹೋಗಲಾಡಿಸಲು ಹೋರಾಡಿದರು ಯಾವ ಧರ್ಮವೂ...